ವಿದೇಶಿ ತಂಡದಲ್ಲೂ ಆಡಲು ಸಿದ್ಧ: ಶ್ರೀಶಾಂತ್
Team Udayavani, Oct 21, 2017, 11:58 AM IST
ಹೊಸದಿಲ್ಲಿ: ಇತ್ತೀಚೆಗಷ್ಟೇ ಕೇರಳ ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠ ಸ್ಪಾಟ್ ಫಿಕ್ಸಿಂಗ್ ಆರೋಪಿ ಶ್ರೀಶಾಂತ್ ಮೇಲೆ ಬಿಸಿಸಿಐ ಹೇರಿರುವ ಆಜೀವ ನಿಷೇಧವನ್ನು ಎತ್ತಿ ಹಿಡಿದಿತ್ತು. ಮತ್ತೆ ಕ್ರಿಕೆಟ್ ಆಡುವ ಹುಮ್ಮಸ್ಸಿನಲ್ಲಿದ್ದ ಶ್ರೀಶಾಂತ್ ಇದರಿಂದ ವಿಚಲಿತರಾಗಿದ್ದರು. ಇದರಿಂದ ನೊಂದಿರುವ ಅವರು ಬಿಸಿಸಿಐ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾನು ವಿದೇಶಿ ತಂಡಗಳಲ್ಲೂ ಆಡಲು ಸಿದ್ಧ, ತನಗೆ ನಿಷೇಧ ಹೇರಿದ್ದು ಬಿಸಿಸಿಐ ಮಾತ್ರ. ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆಯಾದ ಐಸಿಸಿಯೇನು ನಿಷೇಧ ಹೇರಿಲ್ಲವೆಂದು ಶ್ರೀ ಹೇಳಿಕೊಂಡಿದ್ದಾರೆ. ಇದು ವಿವಾದ ಹುಟ್ಟಿಸಿದೆ.
“ನನಗೆ ಈಗ 34 ವರ್ಷವಾಗಿದೆ. ಇನ್ನು ಹೆಚ್ಚಿಗೆ ಅಂದರೆ 6 ವರ್ಷ ಕ್ರಿಕೆಟ್ ಆಡಬಹುದು. ಬಿಸಿಸಿಐ ಒಂದು ಖಾಸಗಿ ಸಂಸ್ಥೆ ಎನ್ನುವುದು ಎಲ್ಲರಿಗೂ ಗೊತ್ತು. ಆದ್ದರಿಂದ ತನಗೆ ವಿದೇಶಿ ತಂಡಗಳಲ್ಲಿ ಆಡಲು ಹಿಂಜರಿಕೆಯಿಲ್ಲ’ ಎಂದು ಶ್ರೀ ಹೇಳಿದ್ದಾರೆ.
2013ರಲ್ಲಿ ಶ್ರೀಶಾಂತ್ ಐಪಿಎಲ್ ಸ್ಪಾಟ್ಫಿಕ್ಸಿಂಗ್ ಹಗರಣದಲ್ಲಿ ಸಿಕ್ಕಿಬಿದ್ದಿದ್ದರು. ಅನಂತರ ಬಿಸಿಸಿಐ ಶ್ರೀಶಾಂತ್ಗೆ ಆಜೀವ ನಿಷೇಧ ಹೇರಿತ್ತು. ಇದನ್ನು ಪ್ರಶ್ನಿಸಿ ಶ್ರೀಶಾಂತ್ ಕೇರಳ ಹೈಕೋರ್ಟ್ ಮೊರೆಹೋಗಿದ್ದರು. ಏಕ ಸದಸ್ಯ ಪೀಠ ಶ್ರೀಶಾಂತ್ ಮೇಲಿನ ನಿಷೇಧವನ್ನು ತೆರವು ಮಾಡಿತ್ತು. ಆದರೆ ಇದನ್ನು ಪ್ರಶ್ನಿಸಿ ಬಿಸಿಸಿಐ ಮೇಲ್ಮನವಿ ಸಲ್ಲಿಸಿತ್ತು. ಇದನ್ನು ಪರಿಶೀಲಿಸಿದ ದ್ವಿಸದಸ್ಯ ಪೀಠ ಆಜೀವ ನಿಷೇಧ ಶಿಕ್ಷೆಯನ್ನು ಎತ್ತಿ ಹಿಡಿದಿದೆ. ಇದರಿಂದ ಶ್ರೀಶಾಂತ್ ಕ್ರಿಕೆಟ್ ಜೀವನ ಅತಂತ್ರಕ್ಕೆ ಸಿಲುಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ