ಶ್ರೀಶಾಂತ್‌ ಆಜೀವ ನಿಷೇಧ ರದ್ದು: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು


Team Udayavani, Mar 16, 2019, 12:30 AM IST

z-3.jpg

ಹೊಸದಿಲ್ಲಿ: ಸ್ಪಾಟ್‌ ಫಿಕ್ಸಿಂಗ್‌ನಲ್ಲಿ ಸಿಕ್ಕಿಬಿದ್ದ ಭಾರತ ಕ್ರಿಕೆಟ್‌ ತಂಡದ ಮಾಜಿ ವೇಗಿ ಶ್ರೀಶಾಂತ್‌ ಮೇಲೆ ಬಿಸಿಸಿಐ ಹೇರಿದ ಆಜೀವ ನಿಷೇಧವನ್ನು ಸುಪ್ರೀಂ ಕೋರ್ಟ್‌ ರದ್ದು ಮಾಡಿದೆ. ಇದರೊಂದಿಗೆ 6 ವರ್ಷದ ಶ್ರೀಶಾಂತ್‌ ವನವಾಸ ಕೊನೆಗೂ ಅಂತ್ಯವಾಗಿದೆ. ಕೇರಳ ಕ್ರಿಕೆಟಿಗ ಹರ್ಷ ವ್ಯಕ್ತಪಡಿಸಿದ್ದು ತೀರ್ಪಿನಿಂದ ನಿರಾಳವಾಗಿದ್ದೇನೆ ಎಂದಿದ್ದಾರೆ.

ಏನಿದು ಪ್ರಕರಣ?
2013ರ ಐಪಿಎಲ್‌ನಲ್ಲಿ ಶ್ರೀಶಾಂತ್‌ ರಾಜಸ್ಥಾನ್‌ ರಾಯಲ್ಸ್‌ ತಂಡವನ್ನು ಪ್ರತಿನಿಧಿಸಿದ್ದರು. ಈ ವೇಳೆ ಶ್ರೀಶಾಂತ್‌ ಜತೆಗೆ ಸ್ಪಿನ್ನರ್‌ ಅಂಕಿತ್‌ ಚೌವಾಣ್‌, ಅಜಿತ್‌ ಚಾಂಡೀಲ ಕೂಡ ಸ್ಪಾಟ್‌ ಫಿಕ್ಸಿಂಗ್‌ ಪ್ರಕರಣಕ್ಕೆ ಸಿಲುಕಿಕೊಂಡಿದ್ದರು. ಒಂದು ಹಂತದಲ್ಲಿ ಈ ಮೂವರೂ ಜೈಲು  ಸೇರಿದ್ದರು. ಬಳಿಕ ಬಿಸಿಸಿಐ ಶಿಸ್ತು ಸಮಿತಿ ಶ್ರೀಶಾಂತ್‌ ಸೇರಿದಂತೆ ಎಲ್ಲ ಕ್ರಿಕೆಟಿಗರಿಗೆ ಆಜೀವ ನಿಷೇಧ ಹೇರಿತ್ತು. ಇದನ್ನು ಪ್ರಶ್ನಿಸಿ 2015ರಲ್ಲಿ ದಿಲ್ಲಿ ವಿಶೇಷ ಸ್ಥಳೀಯ ನ್ಯಾಯಾಲಯದಲ್ಲಿ ಶ್ರೀಶಾಂತ್‌ ಅರ್ಜಿ ಸಲ್ಲಿಸಿದ್ದರು. ಅಲ್ಲಿ ಅವರಿಗೆ ಗೆಲುವು ಸಿಕ್ಕಿತ್ತು. ಆ ಬಳಿಕವೂ ಬಿಸಿಸಿಐ ಶ್ರೀಶಾಂತ್‌ ಮೇಲಿನ ನಿಷೇಧ ತೆರವು ಮಾಡಿರಲಿಲ್ಲ. ಸ್ಕಾಟ್ಲೆಂಡ್‌ ಟಿ20 ಲೀಗ್‌ನಲ್ಲಿ ಪಾಲ್ಗೊಳ್ಳಲು ಬಿಸಿಸಿಐ ಬಳಿ ಶ್ರೀಶಾಂತ್‌ ಎನ್‌ಒಸಿ (ನಿರಾಕ್ಷೇಪಣಾ ಪತ್ರ) ಕೇಳಿದ್ದರು. ಇದನ್ನು ಬಿಸಿಸಿಐ ನಿರಾಕರಿಸಿತ್ತು. ಇದರಿಂದ ಶ್ರೀಶಾಂತ್‌ ಹತಾಶರಾಗಿದ್ದರು. ಬಿಸಿಸಿಐ ತನ್ನ ಮೇಲೆ ಸುಮ್ಮನೆ ದ್ವೇಷ ಸಾಧಿಸುತ್ತಿದೆ ಎಂದು ಅಳಲು ತೋಡಿಕೊಂಡಿದ್ದರು. ಎನ್‌ಒಸಿ ನೀಡದಿದ್ದ ಹಿನ್ನೆಲೆಯಲ್ಲಿ ಕೊನೆಗೆ ಅವರು ಬಿಸಿಸಿಐ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ದೂರು ಸಲ್ಲಿಸಿದ್ದರು.

ನ್ಯಾಯಾಲಯ ಹೇಳಿದ್ದೇನು?
ಶುಕ್ರವಾರ ಪ್ರಕರಣದ ವಿಚಾರಣೆಯನ್ನು ನ್ಯಾಯಮೂರ್ತಿ ಅಶೋಕ್‌ ಭೂಷಣ್‌ ಮತ್ತು ಕೆ.ಎಂ. ಜೋಸೆಫ್ ಒಳಗೊಂಡ ದ್ವಿಸದಸ್ಯ ಪೀಠ ಕೈಗೆತ್ತಿಕೊಂಡಿತ್ತು. ವಾದ ವಿವಾದಗಳ ಬಳಿಕ ದ್ವಿಸದಸ್ಯ ಪೀಠ ಶ್ರೀಶಾಂತ್‌ ಆಜೀವ ನಿಷೇಧವನ್ನು ರದ್ದು ಮಾಡಿತು. ಮಾತ್ರವಲ್ಲ ಬಿಸಿಸಿಐ ಶಿಸ್ತು ಸಮಿತಿ ಮುಂದಿನ ಮೂರು ತಿಂಗಳ ಒಳಗಾಗಿ ಶಿಕ್ಷೆಯನ್ನು ಮರುಪರಿಶೀಲನೆ ನಡೆಸುವಂತೆಯೂ ಸೂಚನೆ ನೀಡಿತು. ಮಾತ್ರವಲ್ಲ, ಸಮಿತಿ ನಿರ್ಧಾರದ ಬಳಿಕ ಶ್ರೀಶಾಂತ್‌ಗೆ ಮತ್ತೆ ಕ್ರಿಕೆಟ್‌ ಆಡಲು ಅವಕಾಶ ಸಿಗಬೇಕು ಎಂದಿತ್ತು. ಈ ತೀರ್ಪಿಗೂ ದಾಖಲಾದ‌ ಕ್ರಿಮಿನಲ್‌ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎನ್ನುವುದನ್ನು ಇದೇ ವೇಳೆ ನ್ಯಾಯಾಲಯ ಸ್ಪಷ್ಟಪಡಿಸಿತು. ಈಗಾಗಲೇ ದಿಲ್ಲಿ ಪೊಲೀಸರು ಶ್ರೀಶಾಂತ್‌ ಸೇರಿದಂತೆ ಹಲವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿಕೊಂಡಿರುವ ವಿಚಾರಣೆಯೂ ನಡೆಯುತ್ತಿದೆ.  ಕೆಲವು ವರ್ಷಗಳ ಹಿಂದೆ ಕೇರಳ ಹೈಕೋರ್ಟ್‌ನಲ್ಲಿಯೂ ಶ್ರೀಶಾಂತ್‌ ಬಿಸಿಸಿಐ ನಿಷೇಧದ ವಿರುದ್ಧ ಕಾನೂನು ಸಮರ ಹೂಡಿದ್ದರು. ಏಕಸದಸ್ಯ ಪೀಠದಲ್ಲಿ ಶ್ರೀಶಾಂತ್‌ ಪರ ತೀರ್ಪು ಬಂದಿತ್ತು. ಆದರೆ ದ್ವಿಸದಸ್ಯ ಪೀಠದಲ್ಲಿ ತೀರ್ಪು ಶ್ರೀಶಾಂತ್‌ ವಿರುದ್ಧ ಬಂದಿದ್ದನ್ನು ಸ್ಮರಿಸಬಹುದು.

ಸುಪ್ರೀಂ ತೀರ್ಪನ್ನು ಸ್ವಾಗತಿಸಿದ ಕೆಸಿಎ
ಶ್ರೀಶಾಂತ್‌ ಭವಿಷ್ಯದ ದೃಷ್ಟಿಯಿಂದ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪನ್ನು  ಕೇರಳ ಕ್ರಿಕೆಟ್‌ ಸಂಸ್ಥೆ (ಕೆಸಿಎ) ಹಿರಿಯ ಅಧಿಕಾರಿ ಟಿ.ಸಿ. ಮ್ಯಾಥ್ಯೂ ಸ್ವಾಗತಿಸಿದ್ದಾರೆ.

ಸಿಇಒ ಸಭೆಯಲ್ಲಿ ಚರ್ಚೆ: ವಿನೋದ್‌ ರಾಯ್‌
ಶ್ರೀಶಾಂತ್‌ ಕುರಿತ ವಿಷಯವನ್ನು ಆಡಳಿತಾಧಿಕಾರಿ ಸಮಿತಿಯ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಆಡಳಿತಾಧಿಕಾರಿ ಮುಖ್ಯಸ್ಥ ವಿನೋದ್‌ ರಾಯ್‌ ತಿಳಿಸಿದ್ದಾರೆ. “ಸುಪ್ರೀಂ ಕೋರ್ಟ್‌ ತೀರ್ಪಿನ ಪ್ರತಿ ಇನ್ನೂ ನಮಗೆ ದೊರಕಿಲ್ಲ. ಮುಂದಿನ ಸಿಇಒ ಸಭೆಯಲ್ಲಿ ಈ ವಿಷಯವನ್ನು ಸಮಗ್ರವಾಗಿ ಚರ್ಚೆ ನಡೆಸುತ್ತೇವೆ’ ಎಂದು ಮಾಧ್ಯಮಗಳಿಗೆ ತಿಳಿಸಿದರು. ಮಾ. 18ರಂದು ಬಿಸಿಸಿಐ ಸಭೆಯಲ್ಲಿ ಶ್ರೀಶಾಂತ್‌ ಭವಿಷ್ಯದ ಕುರಿತ ಮಹತ್ವದ ನಿರ್ಧಾರ ಪ್ರಕಟಗೊಳ್ಳುವ ನಿರೀಕ್ಷೆ ಇದೆ.

ಟಾಪ್ ನ್ಯೂಸ್

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೇಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೇಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

1-eweqw

RR vs KKR : ನಂ. 1, 2 ತಂಡಗಳ ನಡುವೆ ಬಿಗ್‌ ಫೈಟ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೇಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೇಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.