ನ್ಯಾಯ ನೀಡುವಂತೆ ಬಿಸಿಸಿಐಗೆ ಶ್ರೀಶಾಂತ್ ಪತ್ನಿ ಒತ್ತಾಯ
Team Udayavani, Nov 30, 2018, 6:05 AM IST
ಕೊಚ್ಚಿ: ಕಳಂಕಿತ ಕ್ರಿಕೆಟಿಗ ಎಸ್.ಶ್ರೀಶಾಂತ್ ಪತ್ನಿ ಭುವನೇಶ್ವರಿ ದೇವಿ ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ)ಗೆ ಪತ್ರ ಬರೆದು ತಮ್ಮ ಪತಿಗೆ ನ್ಯಾಯ ಕೊಡಿ ಎಂದು ಒತ್ತಾಯಿಸಿದ್ದಾರೆ.
“ಶ್ರೀಶಾಂತ್ ಯಾವುದೇ ತಪ್ಪನ್ನು ಮಾಡಿಲ್ಲ. ನ್ಯಾಯಲಯ ಅವರನ್ನು ನಿರಪರಾಧಿ ಎಂದು ಘೋಷಿಸಿದೆ. ಬಿಸಿಸಿಐ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿದೆ. ಹಾಗಿದ್ದರೆ ಮುದ್ಗಲ್ ಸಮಿತಿ ಸೂಚಿಸಿದ 13 ಆಟಗಾರರ ವಿರುದ್ಧ ಇನ್ನೂ ಏಕೆ ಶಿಸ್ತಿನ ಕ್ರಮ ತೆಗೆದುಕೊಂಡಿಲ್ಲ. ಶ್ರೀಶಾಂತ್ಗೆ ಮಾತ್ರ ಕಠಿಣ ಶಿಕ್ಷೆ ಏಕೆ? ನನ್ನ ಮನವಿಯನ್ನು ಪುರಸ್ಕರಿಸಿದ ಶ್ರೀಶಾಂತ್ಗೆ ಬಿಸಿಸಿಐ ಮರುಜನ್ಮ ನೀಡುತ್ತದೆ ಎಂದು ಭಾವಿಸಿದ್ದೇನೆ ಎಂದು ಭುವನೇಶ್ವರಿ ಪತ್ರದಲ್ಲಿ ತಿಳಿಸಿದ್ದಾರೆ.
2013ರಲ್ಲಿ ಐಪಿಎಲ್ ಸ್ಪಾಟ್ ಫಿಕ್ಸಿಂಗ್ನಲ್ಲಿ ಶ್ರೀಶಾಂತ್ ಸಿಕ್ಕಿ ಹಾಕಿಕೊಂಡು ಆಜೀವ ನಿಷೇಧಕ್ಕೆ ಒಳಗಾಗಿದ್ದರು. 2015ರಲ್ಲಿ ದಿಲ್ಲಿ ನ್ಯಾಯಾಲಯ ಶ್ರೀಶಾಂತ್ ನಿರಪರಾಧಿ ಎಂದು ತೀರ್ಪು ನೀಡಿತ್ತು. ಹೀಗಿದ್ದರೂ ಬಿಸಿಸಿಐ ಮಾತ್ರ ಶ್ರೀಶಾಂತ್ ಮೇಲಿನ ಆಜೀವ ನಿಷೇಧ ಸಡಿಲಗೊಳಿಸಿರಲಿಲ್ಲ. ಇದರಿಂದ ಶ್ರೀಶಾಂತ್ ಸಾಕಷ್ಟು ನೊಂದಿದ್ದರು. ಬಿಗ್ಬಾಸ್ 12ನೇ ಆವೃತ್ತಿಯಲ್ಲಿ ಪಾಲ್ಗೊಂಡಿರುವ ಶ್ರೀಶಾಂತ್ ತಮ್ಮ ಬದುಕಿನ ಕರಾಳ ದಿನವನ್ನು ನೆನೆದು ಕಣ್ಣೀರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್