ಟಿ-20: ಆಸೀಸ್‌ಗೆ ಲಂಕಾಘಾತ


Team Udayavani, Feb 18, 2017, 3:45 AM IST

Australia-v-Sri-Lanka,.jpg

ಮೆಲ್ಬರ್ನ್: “ನ್ಯೂ ಲುಕ್‌’ ಪಡೆದು ಕಣಕ್ಕಿಳಿದ ಆಸ್ಟ್ರೇಲಿಯಕ್ಕೆ ಮೊದಲ ಟಿ-20 ಪಂದ್ಯದಲ್ಲಿ ಶ್ರೀಲಂಕಾ 5 ವಿಕೆಟ್‌ಗಳಿಂದ ಆಘಾತವಿಕ್ಕಿದೆ. ಇದರೊಂದಿಗೆ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಶುಕ್ರವಾರ ಮೆಲ್ಬರ್ನ್ನಲ್ಲಿ ನಡೆದ ಈ ರೋಮಾಂಚಕಾರಿ ಸೆಣಸಾಟದಲ್ಲಿ ಬ್ಯಾಟಿಂಗಿಗೆ ಇಳಿಸಲ್ಪಟ್ಟ ಆಸ್ಟ್ರೇಲಿಯ 6 ವಿಕೆಟಿಗೆ 168 ರನ್‌ ಗಳಿಸಿ ಸವಾಲೊಡ್ಡಿತು. ಇದನ್ನು ದಿಟ್ಟ ರೀತಿಯಲ್ಲಿ ಸ್ವೀಕರಿಸಿದ ಶ್ರೀಲಂಕಾ ಸರಿಯಾಗಿ 20 ಓವರ್‌ಗಳಲ್ಲಿ 5 ವಿಕೆಟಿಗೆ 172 ರನ್‌ ಬಾರಿಸಿತು; ಅಂತಿಮ ಎಸೆತದಲ್ಲಿ ಬೌಂಡರಿ ಬಾರಿಸಿ ಜಯಭೇರಿ ಮೊಳಗಿಸಿತು.

ಆ್ಯಂಡ್ರೂé ಟೈ ಪಾಲಾದ ಅಂತಿಮ ಓವರಿನಲ್ಲಿ ಲಂಕಾ ಜಯಕ್ಕೆ ಕೇವಲ 6 ರನ್ನುಗಳ ಅಗತ್ಯವಿತ್ತು. ಕೈಯಲ್ಲಿನ್ನೂ 5 ವಿಕೆಟ್‌ ಉಳಿದಿತ್ತು. ಇದನ್ನು ಲಂಕಾ ಸುಲಭದಲ್ಲೇ ಸಾಧಿಸಬಹುದೆಂಬ ನಿರೀಕ್ಷೆ ಇತ್ತು. ಆದರೆ ಟೈ ಅತ್ಯಂತ ಬಿಗು ದಾಳಿ ಸಂಘಟಿಸಿದರು. ಅಂತಿಮ ಓವರಿನ 5ನೇ ಎಸೆತಕ್ಕೆ ಇತ್ತಂಡಗಳ ಮೊತ್ತ ಸಮನಾಯಿತು. ಕೊನೆಯ ಎಸೆತದಲ್ಲಿ ಚಾಮರ ಕಪುಗೆಡರ ಬೌಂಡರಿ ಬಾರಿಸಿ ಲಂಕೆಯ ಗೆಲುವನ್ನು ಸಾರಿದರು.

ನಾಯಕ ಉಪುಲ್‌ ತರಂಗ ಅವರನ್ನು ಲಂಕಾ ಶೂನ್ಯಕ್ಕೆ ಕಳೆದುಕೊಂಡಿತಾದರೂ ಡಿಕ್ವೆಲ್ಲ (30), ಮುನವೀರ (44), ಗುಣರತ್ನೆ (52) ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸಿ ಲಂಕಾ ಹೋರಾಟವನ್ನು ಜಾರಿಯಲ್ಲಿರಿಸಿದರು.

ಆಸೀಸ್‌ ಉತ್ತಮ ಆರಂಭ
ನಾಯಕ ಆರನ್‌ ಫಿಂಚ್‌ ಮತ್ತು ಮೊದಲ ಟಿ-20 ಪಂದ್ಯ ಆಡಲಿಳಿದ ಮೈಕಲ್‌ ಕ್ಲಿಂಜರ್‌ ಆಸ್ಟ್ರೇಲಿಯಕ್ಕೆ ಉತ್ತಮ ಆರಂಭ ಒದಗಿಸಿದರು. ಇವರಿಂದ 10.3 ಓವರ್‌ಗಳಲ್ಲಿ 76 ರನ್‌ ಒಟ್ಟುಗೂಡಿತು. ವನ್‌ಡೌನ್‌ನಲ್ಲಿ ಬಂದ ಟ್ರ್ಯಾವಿಸ್‌ ಹೆಡ್‌ ಕೂಡ ಇದೇ ಲಯದಲ್ಲಿ ಸಾಗಿದರು.

34 ಎಸೆತಗಳಿಂದ 43 ರನ್‌ ಹೊಡೆದ ಫಿಂಚ್‌ ಅವರದೇ ಆಸೀಸ್‌ ಸರದಿಯ ಸರ್ವಾಧಿಕ ಸ್ಕೋರ್‌ (34 ಎಸೆತ, 2 ಬೌಂಡರಿ, 2 ಸಿಕ್ಸರ್‌). 36ರ ಹರೆಯದಲ್ಲಿ ಟಿ-20 ಪಾದಾರ್ಪಣೆ ಮಾಡಿದ ವಿಕ್ಟೋರಿಯಾದ ಕ್ಲಿಂಜರ್‌ 32 ಎಸೆತ ಎದುರಿಸಿ 38 ರನ್‌ ಮಾಡಿದರು (4 ಬೌಂಡರಿ). ಹೆಡ್‌ ಗಳಿಕೆ 25 ಎಸೆತಗಳಿಂದ 31 ರನ್‌. ಇದರಲ್ಲಿ ಒಂದು ಸಿಕ್ಸರ್‌ ಮಾತ್ರ ಒಳಗೊಂಡಿತ್ತು.

ಮೊದಲ ಟಿ-20 ಆಡಿದ ಮತ್ತೂಬ್ಬ ಬ್ಯಾಟ್ಸ್‌ಮನ್‌ ಆ್ಯಶrನ್‌ ಟರ್ನರ್‌ 18, ಮೊಸಸ್‌ ಹೆನ್ರಿಕ್ಸ್‌ 17 ರನ್‌ ಮಾಡಿದರು.

ಶ್ರೀಲಂಕಾ ಬೌಲಿಂಗ್‌ ಸರದಿಯಲ್ಲಿ ಮಿಂಚಿದವರು ವೇಗಿ ಲಸಿತ ಮಾಲಿಂಗ (29ಕ್ಕೆ 2). ಮಾಲಿಂಗ ಸರಿಯಾಗಿ ಒಂದು ವರ್ಷದ ಬಳಿಕ ಟಿ-20 ಆಡಲಿಳಿದಿದ್ದರು.

ಸಂಕ್ಷಿಪ್ತ ಸ್ಕೋರ್‌: ಆಸ್ಟ್ರೇಲಿಯ-6 ವಿಕೆಟಿಗೆ 168 (ಫಿಂಚ್‌ 43, ಕ್ಲಿಂಜರ್‌ 38, ಹೆಡ್‌ 31, ಮಾಲಿಂಗ 29ಕ್ಕೆ 2). ಶ್ರೀಲಂಕಾ-20 ಓವರ್‌ಗಳಲ್ಲಿ 5 ವಿಕೆಟಿಗೆ 172 (ಗುಣರತ್ನೆ 52, ಮುನವೀರ 44, ಡಿಕ್ವೆಲ್ಲ 30, ಟರ್ನರ್‌ 12ಕ್ಕೆ 2, ಝಂಪ 26ಕ್ಕೆ 2). ಪಂದ್ಯಶ್ರೇಷ್ಠ: ಅಸೇಲ ಗುಣರತ್ನೆ.

ಸರಣಿಯ 2ನೇ ಪಂದ್ಯ ರವಿವಾರ ಗೀಲಾಂಗ್‌ನಲ್ಲಿ ನಡೆಯಲಿದೆ.
 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.