ಭಾರತ ದಾಳಿಗೆ ಲಂಕಾ ಇಲೆವೆನ್‌ ತರಗೆಲೆ


Team Udayavani, Jul 22, 2017, 9:17 AM IST

22-SPORTS-1.gif

ಕೊಲಂಬೊ: ಶ್ರೀಲಂಕಾ ಕ್ರಿಕೆಟ್‌ ಮಂಡಳಿ ಅಧ್ಯಕ್ಷರ ಬಳಗದ ವಿರುದ್ಧದ ಅಭ್ಯಾಸ ಪಂದ್ಯದ ಮೊದಲ ದಿನದಾಟದಲ್ಲಿ ಭಾರತ ಚೇತೋಹಾರಿ ಪ್ರದರ್ಶನ ನೀಡಿದೆ. ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ವಿಭಾಗಗಳೆರಡರಲ್ಲೂ ಮೇಲುಗೈ ಸಾಧಿಸಿದೆ. ಸ್ಪಿನ್ನರ್‌ಗಳಾದ ಕುಲದೀಪ್‌ ಯಾದವ್‌, ರವೀಂದ್ರ ಜಡೇಜಾ, ಆರಂಭಕಾರ ಕೆ.ಎಲ್‌.ರಾಹುಲ್‌ ಶುಕ್ರವಾರದ ಆಟದ ಹೀರೋಗಳಾಗಿದ್ದಾರೆ.

ಮೊದಲು ಬ್ಯಾಟಿಂಗ್‌ ನಡೆಸಿದ ಲಹಿರು ತಿರಿಮನ್ನೆ ನಾಯಕತ್ವದ ಲಂಕಾ ಅಧ್ಯಕ್ಷರ ಬಳಗ 187ಕ್ಕೆ ಆಲೌಟ್‌ ಆಯಿತು. ಬಳಿಕ ಬ್ಯಾಟಿಂಗ್‌ ನಡೆಸಿದ ಭಾರತ 30 ಓವರ್‌ಗಳ ಆಟದಲ್ಲಿ 3 ವಿಕೆಟಿಗೆ 135 ರನ್‌ ಗಳಿಸಿತು. ಇದು ಕೇವಲ 2 ದಿನಗಳ ಪಂದ್ಯವಾದ್ದರಿಂದ ಭಾರತ ಶನಿವಾರದ ಹೆಚ್ಚಿನ ಅವಧಿಯನ್ನು ಬ್ಯಾಟಿಂಗ್‌ ಆಭ್ಯಾಸಕ್ಕೆ ಬಳಸಿಕೊಳ್ಳಬಹುದು. ಆತಿಥೇಯ ತಂಡವನ್ನು ಭಾರತ 55.5 ಓವರ್‌ಗಳಲ್ಲಿ ಆಲೌಟ್‌ ಮಾಡಿತು. ಚೈನಾಮನ್‌ ಬೌಲರ್‌ ಕುಲದೀಪ್‌ ಯಾದವ್‌ 14 ರನ್ನಿಗೆ 4 ವಿಕೆಟ್‌ ಕಿತ್ತು ಹೆಚ್ಚಿನ ಯಶಸ್ಸು ಸಾಧಿಸಿದರು. ರವೀಂದ್ರ ಜಡೇಜಾ 31 ರನ್ನಿಗೆ 3, ಮೊಹಮ್ಮದ್‌ ಶಮಿ 9 ರನ್ನಿಗೆ ವಿಕೆಟ್‌ ಉರುಳಿಸಿದರು. 

ಭುವಿ, ಉಮೇಶ್‌ ಯಾದವ್‌, ಇಶಾಂತ್‌, ಅಶ್ವಿ‌ನ್‌, ಪಾಂಡ್ಯ ಬಿಗುವಾದ ಬೌಲಿಂಗ್‌ ಸಂಘಟಿಸಿದರೂ ವಿಕೆಟ್‌ ಕೀಳಲು ವಿಫ‌ಲರಾದರು.
ಲಂಕಾ ಸರದಿಯಲ್ಲಿ ಮಿಂಚಿದವರೆಂದರೆ ಆರಂಭಕಾರ ಧನುಷ್ಕಾ ಗುಣತಿಲಕ (87 ರನ್‌) ಮತ್ತು ನಾಯಕ ಲಹಿರು ತಿರಿಮನ್ನೆ (59 ರನ್‌). ಇವರಿಬ್ಬರ ದ್ವಿತೀಯ ವಿಕೆಟ್‌ ಜತೆಯಾಟದಲ್ಲಿ 130 ರನ್‌ ಒಟ್ಟುಗೂಡಿತು. ಹೀಗಾಗಿ 139ಕ್ಕೆ ಒಂದೇ ವಿಕೆಟ್‌ ಉರುಳಿಸಿಕೊಂಡು ಸುಸ್ಥಿತಿಯಲ್ಲಿದ್ದ ಲಂಕಾ ದೊಡ್ಡ ಮೊತ್ತ ಪೇರಿಸಬಹುದೆಂಬ ನಿರೀಕ್ಷೆ ದಟ್ಟವಾಗಿತ್ತು. ಆದರೆ 48 ರನ್‌ ಅಂತರದಲ್ಲಿ 9 ವಿಕೆಟ್‌ ಉಡಾಯಿಸಿದ ಭಾರತ ಆತಿಥೇಯರ ಓಟಕ್ಕೆ ಭರ್ಜರಿ ಬ್ರೇಕ್‌ ಹಾಕಿತು. 

ರಾಹುಲ್‌ ಅರ್ಧಶತಕ: ಭಾರತದ ಬ್ಯಾಟಿಂಗ್‌ ಆರಂಭವೂ ಆಘಾತಕಾರಿಯಾಗಿಯೇ ಇತ್ತು. ಅಭಿನವ್‌ ಮುಕುಂದ್‌ (9 ರನ್‌) ಮತ್ತು ಚೇತೇಶ್ವರ ಪೂಜಾರ (12 ರನ್‌) ಹೆಚ್ಚು ಹೊತ್ತು ನಿಲ್ಲಲಿಲ್ಲ. ಇಬ್ಬರನ್ನೂ ಎಡಗೈ ಪೇಸರ್‌ ವಿಶ್ವ ಫೆರ್ನಾಂಡೊ ಬೌಲ್ಡ್‌ ಮಾಡಿದರು.
ಆದರೆ ರಾಹುಲ್‌ ಕ್ರೀಸ್‌ ಆಕ್ರಮಿಸಿಕೊಂಡು ಅರ್ಧ ಶತಕದ ಕೊಡುಗೆ ಸಲ್ಲಿಸಿದರು. ಬಹಳ ಸಮಯದ ಬಳಿಕ ಕ್ರಿಕೆಟ್‌ ಅಂಗಳಕ್ಕಿಳಿದ ರಾಹುಲ್‌ ಗಳಿಕೆ 58 ಎಸೆತಗಳಿಂದ 54 ರನ್‌. ಇದರಲ್ಲಿ 7 ಬೌಂಡರಿ ಸೇರಿತ್ತು. ವಿರಾಟ್‌ ಕೊಹ್ಲಿ (34 ರನ್‌), ಅಜಿಂಕ್ಯ ರಹಾನೆ (30 ರನ್‌) ಮಾಡಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

ಸಂಕ್ಷಿಪ್ತ ಸ್ಕೋರ್‌: ಶ್ರೀಲಂಕಾ ಮಂಡಳಿ ಅಧ್ಯಕ್ಷರ ಇಲೆವೆನ್‌ 1ನೇ ಇನಿಂಗ್ಸ್‌ 187 ಆಲೌಟ್‌ (ಧನಿಷ್ಕಾ 87, ಲಹಿರು ತಿರಿಮನ್ನೆ
59, ಕುಲದೀಪ್‌ 14ಕ್ಕೆ 4), ಭಾರತ 1ನೇ ಇನಿಂಗ್ಸ್‌ 135/3( ಕೆಎಲ್‌.ರಾಹುಲ್‌ 54, ಕೊಹ್ಲಿ ಅಜೇಯ 34, ವಿಶ್ವ 21ಕ್ಕೆ 1)

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.