ಏಕದಿನ: ಜಿಂಬಾಬ್ವೆ ವಿರುದ್ಧ ಲಂಕಾಗೆ 2-1ರ ಮುನ್ನಡೆ


Team Udayavani, Jul 7, 2017, 3:50 AM IST

SL-ZIM-700.jpg

ಹಂಬಂತೋಟ: ಆತಿಥೇಯ ಶ್ರೀಲಂಕಾ ಎದುರಿನ 3ನೇ ಏಕದಿನ ಪಂದ್ಯದಲ್ಲಿ ಜಿಂಬಾಬ್ವೆ 310 ರನ್‌ ಪೇರಿಸಿಯೂ ಸೋತಿದೆ. ಆರಂಭಿಕರ ಶತಕದಾಟ ಹಾಗೂ ದ್ವಿಶತಕದ ಜತೆಯಾಟದ ಸಾಹಸದಿಂದ ಲಂಕಾ 8 ವಿಕೆಟ್‌ ಜಯದೊಂದಿಗೆ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.

ಗುರುವಾರ ಹಂಬಂತೋಟದಲ್ಲಿ ನಡೆದ ಪಂದ್ಯದಲ್ಲಿ ಬ್ಯಾಟಿಂಗಿಗೆ ಇಳಿಸಲ್ಪಟ್ಟ ಜಿಂಬಾಬ್ವೆ, ಓಪನರ್‌ ಹ್ಯಾಮಿಲ್ಟನ್‌ ಮಸಕಝ ಅವರ ಶತಕದ ನೆರವಿನಿಂದ 8 ವಿಕೆಟಿಗೆ 310 ರನ್‌ ಪೇರಿಸಿ ಸವಾಲೊಡ್ಡಿತು. ಆದರೆ ಯಾವುದೇ ಒತ್ತಡವಿಲ್ಲದೆ ಈ ಮೊತ್ತವನ್ನು ಬೆನ್ನಟ್ಟತೊಡಗಿದ ಶ್ರೀಲಂಕಾ 47.2 ಓವರ್‌ಗಳಲ್ಲಿ ಎರಡೇ ವಿಕೆಟಿಗೆ 312 ರನ್‌ ಬಾರಿಸಿ ಸತತ 2ನೇ ಜಯ ದಾಖಲಿಸಿತು. ಮೊದಲ ಪಂದ್ಯವನ್ನು ಜಿಂಬಾಬ್ವೆ ಗೆದ್ದಿತ್ತು.

ಮೊದಲ ವಿಕೆಟಿಗೆ 229 ರನ್‌
ದೊಡ್ಡ ಮೊತ್ತವನ್ನು ಬೆನ್ನಟ್ಟಿದ ಲಂಕೆಗೆ ಎಡಗೈ ಆರಂಭಿಕರಾದ ನಿರೋಷನ್‌ ಡಿಕ್ವೆಲ್ಲ ಮತ್ತು ದನುಷ್ಕ ಗುಣತಿಲಕ ಅವರ ದ್ವಿಶತಕದ ಜತೆಯಾಟ ಆಸರೆಯಾಯಿತು. ಭರ್ತಿ 37 ಓವರ್‌ಗಳನ್ನು ಯಾವುದೇ ಒತ್ತಡವಿಲ್ಲದೆ ನಿಭಾಯಿಸಿದ ಇವರು 229 ರನ್‌ ಪೇರಿಸಿದರು. ಇದು ಶ್ರೀಲಂಕಾ ಏಕದಿನ ಇತಿಹಾಸದಲ್ಲಿ ಮೊದಲ ವಿಕೆಟಿಗೆ ದಾಖಲಾದ 10ನೇ ದ್ವಿಶತಕದ ಜತೆಯಾಟ. ಇಂಗ್ಲೆಂಡ್‌ ಎದುರಿನ 2006ರ ಲೀಡ್ಸ್‌ ಪಂದ್ಯದಲ್ಲಿ ಸನತ್‌ ಜಯಸೂರ್ಯ-ಉಪುಲ್‌ ತರಂಗ 286 ರನ್‌ ಪೇರಿಸಿದ್ದು ದಾಖಲೆ.

ಈ ಮ್ಯಾರಥಾನ್‌ ಜತೆಯಾಟದ ವೇಳೆ ಇಬ್ಬರೂ ತಮ್ಮ ಮೊದಲ ಶತಕ ಸಂಭ್ರವನ್ನಾಚರಿಸಿದರು. 17ನೇ ಏಕದಿನ ಪಂದ್ಯವಾಡಿದ ಡಿಕ್ವೆಲ್ಲ ಗಳಿಕೆ 116 ಎಸೆತಗಳಿಂದ 102 ರನ್‌. ಇದು 14 ಬೌಂಡರಿಗಳನ್ನೊಳಗೊಂಡಿತ್ತು. 24ನೇ ಪಂದ್ಯದಲ್ಲಿ ಕಾಣಿಸಿಕೊಂಡ ಗುಣತಿಲಕ 111 ಎಸೆತಗಳಿಂದ 116 ರನ್‌ ಬಾರಿಸಿ ಪಂದ್ಯಶ್ರೇಷ್ಠರೆನಿಸಿದರು. ಇದರಲ್ಲಿ 15 ಬೌಂಡರಿ ಹಾಗೂ ಒಂದು ಸಿಕ್ಸರ್‌ ಸೇರಿತ್ತು. ಏಕದಿನ ಚರಿತ್ರೆಯಲ್ಲಿ ಆರಂಭಿಕರಿಬ್ಬರು ಒಂದೇ ಪಂದ್ಯದಲ್ಲಿ ಶತಕ ದಾಖಲಿಸಿದ 34ನೇ ದೃಷ್ಟಾಂತ ಇದಾಗಿದೆ. ಉಪುಲ್‌ ತರಂಗ (44) ಮತ್ತು ಕುಸಲ್‌ ಮೆಂಡಿಸ್‌ (28) ಔಟಾಗದೆ ಉಳಿದರು.

ಮಸಕಝ 5ನೇ ಶತಕ
ಜಿಂಬಾಬ್ವೆಯ ಮೊತ್ತ ಮುನ್ನೂರರ ಗಡಿ ದಾಟಿಸುವಲ್ಲಿ ಮುಖ್ಯ ಪಾತ್ರ ವಹಿಸಿದವರು ಆರಂಭಕಕಾರ ಹ್ಯಾಮಿಲ್ಟನ್‌ ಮಸಕಝ. 176ನೇ ಪಂದ್ಯವಾಡಲಿಳಿದ ಅವರು 111 ರನ್‌ ಬಾರಿಸಿ 5ನೇ ಶತಕದೊಂದಿಗೆ ಮಿಂಚಿದರು. 98 ಎಸೆತಗಳ ಈ ಆಟದಲ್ಲಿ 15 ಬೌಂಡರಿ ಹಾಗೂ ಒಂದು ಸಿಕ್ಸರ್‌ ಸಿಡಿಯಲ್ಪಟ್ಟಿತು. ಆದರೆ ಈ ಶತಕ ಫ‌ಲ ಕೊಡಲಿಲ್ಲ.

ಮುಸಕಂಡ 48, ವಿಲಿಯಮ್ಸ್‌ 43 ರನ್‌ ಮಾಡಿದರು. ಸರಣಿಯ 4ನೇ ಪಂದ್ಯ ಶನಿವಾರ ಇದೇ ಅಂಗಳದಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.