ಏಕದಿನ: ಶ್ರೀಲಂಕಾ ಐತಿಹಾಸಿಕ ಸಾಧನೆ; ಆಸ್ಟ್ರೇಲಿಯ ವಿರುದ್ಧ ಮೊದಲ ಸರಣಿ ಜಯ


Team Udayavani, Jun 22, 2022, 11:25 PM IST

ಏಕದಿನ: ಶ್ರೀಲಂಕಾ ಐತಿಹಾಸಿಕ ಸಾಧನೆ; ಆಸ್ಟ್ರೇಲಿಯ ವಿರುದ್ಧ ಮೊದಲ ಸರಣಿ ಜಯ

ಕೊಲಂಬೊ: ಪ್ರವಾಸಿ ಆಸ್ಟ್ರೇಲಿಯ ಎದುರಿನ 4ನೇ ಏಕದಿನ ಪಂದ್ಯವನ್ನು 4 ರನ್ನಿನಿಂದ ರೋಚಕವಾಗಿ ಗೆಲ್ಲುವ ಮೂಲಕ ಶ್ರೀಲಂಕಾ ಐತಿಹಾಸಿಕ ಸಾಧನೆಯೊಂದನ್ನು ಗೈದಿದೆ. ಇದು ಕಳೆದ 30 ವರ್ಷಗಳ ಇತಿಹಾಸದಲ್ಲಿ ಆಸೀಸ್‌ ವಿರುದ್ಧ ತವರು ನೆಲದಲ್ಲಿ ಶ್ರೀಲಂಕಾ ಸಾಧಿಸಿದ ಮೊದಲ ಏಕದಿನ ಸರಣಿ ಗೆಲುವು!

ಮಂಗಳವಾರ ರಾತ್ರಿ ನಡೆದ ಮುಖಾ ಮುಖೀಯಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಶ್ರೀಲಂಕಾ 49 ಓವರ್‌ಗಳಲ್ಲಿ 258ಕ್ಕೆ ಆಲೌಟ್‌ ಆಯಿತು. ಆಸ್ಟ್ರೇಲಿಯ ಭರ್ತಿ 50 ಓವರ್‌ಗಳಲ್ಲಿ 254ಕ್ಕೆ ಸರ್ವಪತನ ಕಂಡಿತು.

ಅಸಲಂಕ ಅಮೋಘ ಶತಕ
ಮಧ್ಯಮ ಕ್ರಮಾಂಕದ ಎಡಗೈ ಬ್ಯಾಟ್ಸ್‌ಮನ್‌ ಚರಿತ ಅಸಲಂಕ ಬಾರಿ ಸಿದ ಚೊಚ್ಚಲ ಶತಕ ಲಂಕಾ ಸರದಿಯ ಆಕರ್ಷಣೆಯಾಗಿತ್ತು. 106 ಎಸೆತ ಎದುರಿಸಿದ ಅಸಲಂಕ 10 ಫೋರ್‌ ಹಾಗೂ ಒಂದು ಸಿಕ್ಸರ್‌ ನೆರವಿನಿಂದ ಈ ಪಂದ್ಯಶ್ರೇಷ್ಠ ಇನ್ನಿಂಗ್ಸ್‌ ಕಟ್ಟಿದರು.

60 ರನ್‌ ಮಾಡಿದ ಧನಂಜಯ ಡಿ ಸಿಲ್ವ ಲಂಕಾ ಸರದಿಯ ಮತ್ತೋರ್ವ ಪ್ರಮುಖ ಸ್ಕೋರರ್‌ (61 ಎಸೆತ, 7 ಬೌಂಡರಿ). 34 ರನ್ನಿಗೆ 3 ವಿಕೆಟ್‌ ಬಿದ್ದ ಬಳಿಕ ಜತೆಗೂಡಿದ ಡಿ ಸಿಲ್ವ-ಅಸಲಂಕ 4ನೇ ವಿಕೆಟಿಗೆ 101 ರನ್‌ ಪೇರಿಸಿ ತಂಡವನ್ನು ಆಧರಿಸಿ ನಿಂತರು.

ಇದನ್ನೂ ಓದಿ:ಪಾಕಿಸ್ಥಾನ ಕ್ರಿಕೆಟ್‌ ತಂಡದ ಮಾಜಿ ನಾಯಕ ಜಹೀರ್‌ ಅಬ್ಟಾಸ್‌ ಆಸ್ಪತ್ರೆಗೆ ದಾಖಲು

ಡೇವಿಡ್‌ ವಾರ್ನರ್‌ 99
ಆಸ್ಟ್ರೇಲಿಯದ ಚೇಸಿಂಗ್‌ ಆಘಾತಕಾರಿಯಾಗಿತ್ತು. ನಾಯಕ ಆರನ್‌ ಫಿಂಚ್‌ ಶೂನ್ಯಕ್ಕೆ ಔಟಾಗಿ ತೆರಳಿದರು. ಮಾರ್ಷ್‌ (26), ಲಬುಶೇನ್‌ (14), ಕ್ಯಾರಿ (19) ಕೂಡ ಬೇಗನೇ ಪೆವಿಲಿಯನ್‌ ಸೇರಿಕೊಂಡರು. ಆದರೆ ಡೇವಿಡ್‌ ವಾರ್ನರ್‌ 38ನೇ ಓವರ್‌ ತನಕ ಕ್ರೀಸ್‌ ಆಕ್ರಮಿಸಿಕೊಂಡು ಕಾಂಗರೂ ಇನ್ನಿಂಗ್ಸ್‌ ಬೆಳೆಸಿದರು. ದುರದೃಷ್ಟ ವಶಾತ್‌ ಒಂದೇ ರನ್ನಿನಿಂದ ಶತಕ ತಪ್ಪಿಸಿಕೊಂಡರು. 100ನೇ ರನ್‌ ಗಳಿಕೆ ಗಾಗಿ ಡಿ ಸಿಲ್ವ ಎಸೆತವನ್ನು ಮುನ್ನುಗ್ಗಿ ಬಾರಿಸಲು ಯತ್ನಿಸಿ ಸ್ಟಂಪ್ಡ್ ಆದರು.

ಆಸೀಸ್‌ ಜಯಕ್ಕೆ ಅಂತಿಮ ಓವರ್‌ ನಲ್ಲಿ 19 ರನ್‌, ಅಂತಿಮ ಎಸೆತದಲ್ಲಿ 6 ರನ್‌ ಬೇಕಿತ್ತು. ಕೈಲಿದ್ದುದು ಒಂದೇ ವಿಕೆಟ್‌. ದಸುನ್‌ ಶಣಕ ಎಸೆದ ಕೊನೆಯ ಓವರ್‌ನಲ್ಲಿ 3 ಬೌಂಡರಿ ಸೇರಿದಂತೆ 14 ರನ್‌ ಸೋರಿ ಹೋಯಿತು. ಅಂತಿಮ ಎಸೆತದಲ್ಲಿ ಮ್ಯಾಥ್ಯೂ ಕನೇಮನ್‌ ಔಟಾಗುವುದರೊಂದಿಗೆ ಲಂಕಾ ಜಯಭೇರಿ ಮೊಳಗಲ್ಪಟ್ಟಿತು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.