ಲಂಕಾ ತಿರುಗೇಟು; ಸರಣಿ ಸಮಬಲ


Team Udayavani, Jul 3, 2017, 3:50 AM IST

SL-ZIM.jpg

ಗಾಲೆ: ಶುಕ್ರವಾರ ಶ್ರೀಲಂಕಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿ ಬೀಗುತ್ತಿದ್ದ ಪ್ರವಾಶಿ ಜಿಂಬಾಬ್ವೆ ತಂಡ, ರವಿವಾರ ಗಾಲೆಯಲ್ಲೇ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ 7 ವಿಕೆಟ್‌ಗಳ ಸೋಲಿಗೆ ತುತ್ತಾಗಿದೆ. ಮ್ಯಾಥ್ಯೂಸ್‌ ಬಳಗ 5 ಪಂದ್ಯಗಳ ಸರಣಿಯನ್ನು 1-1 ಸಮಬಲಕ್ಕೆ ತರುವಲ್ಲಿ ಯಶಸ್ವಿಯಾಗಿದೆ.

“ಗಾಲೆ ಇಂಟರ್‌ನ್ಯಾಶನಲ್‌ ಸ್ಟೇಡಿಯಂ’ನಲ್ಲಿ ಬ್ಯಾಟಿಂಗಿಗೆ ಇಳಿಸಲ್ಪಟ್ಟ ಜಿಂಬಾಬ್ವೆ 33.4 ಓವರ್‌ಗಳಲ್ಲಿ 155 ರನ್ನಿಗೆ ಆಲೌಟಾದರೆ, ಶ್ರೀಲಂಕಾ 30.1 ಓವರ್‌ಗಳಲ್ಲಿ 3 ವಿಕೆಟಿಗೆ 158 ರನ್‌ ಬಾರಿಸಿ ಸುಲಭ ಜಯ ಸಾಧಿಸಿತು. ಸರಣಿಯ 3ನೇ ಪಂದ್ಯ ಜು. 6ರಂದು ಹಂಬಂತೋಟದಲ್ಲಿ ನಡೆಯಲಿದೆ.

ಹಸರಂಗ: 3ನೇ ಸಾಧಕ
ನೂತನ ರೂಪ ಪಡೆದ ಲಂಕೆಯ ಸ್ಪಿನ್‌ ದಾಳಿಯನ್ನು ನಿಭಾಯಿಸಲು ಜಿಂಬಾಬ್ವೆ ಸಂಪೂರ್ಣ ವಿಫ‌ಲವಾಯಿತು. ಚೈನಾಮನ್‌ ಬೌಲರ್‌ ಲಕ್ಷಣ ಸಂದಕನ್‌ 52ಕ್ಕೆ 4 ವಿಕೆಟ್‌ ಕಿತ್ತು ಜೀವನಶ್ರೇಷ್ಠ ಸಾಧನೆಗೈದರೆ, ಮೊದಲ ಏಕದಿನ ಅಂತಾರಾಷ್ಟ್ರೀಯ ಪಂದ್ಯವಾಡಿದ 19ರ ಹರೆಯದ ಲೆಗ್‌ಸ್ಪಿನ್ನರ್‌ ವನಿಂದು ಹಸರಂಗ ಕೊನೆಯ 3 ವಿಕೆಟ್‌ಗಳನ್ನು ಸತತ ಎಸೆತಗಳಲ್ಲಿ ಕೆಡವಿ ಹ್ಯಾಟ್ರಿಕ್‌ ಹೀರೋ ಎನಿಸಿಕೊಂಡರು. ಕೇವಲ 2.4 ಓವರ್‌ ಎಸೆದ ಹಸರಂಗ 34ನೇ ಓವರಿನ 2ನೇ, 3ನೇ ಹಾಗೂ 4ನೇ ಎಸೆತಗಳಲ್ಲಿ ವಾಲರ್‌, ತಿರಿಪಾನೊ ಮತ್ತು ಚಟಾರ ವಿಕೆಟ್‌ಗಳನ್ನು ಹಾರಿಸಿದರು.

ಹಸರಂಗ ಸಾಧನೆ 15ಕ್ಕೆ 3 ವಿಕೆಟ್‌
ಹಸರಂಗ ಏಕದಿನ ಇತಿಹಾಸದ ಪಾದಾರ್ಪಣಾ ಪಂದ್ಯದಲ್ಲೇ ಹ್ಯಾಟ್ರಿಕ್‌ ಸಾಧನೆ ಮಾಡಿದ ಲಂಕೆಯ ಮೊದಲ, ವಿಶ್ವದ ಕೇವಲ 3ನೇ ಬೌಲರ್‌. ಬಾಂಗ್ಲಾದೇಶದ ತೈಜುಲ್‌ ಇಸ್ಲಾಮ್‌ ಮತ್ತು ದಕ್ಷಿಣ ಆಫ್ರಿಕಾದ ಕಾಗಿಸೊ ರಬಾಡ ಉಳಿದಿಬ್ಬರು.

ಜಿಂಬಾಬ್ವೆ ಸರದಿಯ ಸರ್ವಾಧಿಕ ರನ್‌ ಆರಂಭಕಾರ ಹ್ಯಾಮಿಲ್ಟನ್‌ ಮಸಕಝ ಅವರಿಂದ ದಾಖಲಾಯಿತು. 56 ಎಸೆತ ಎದುರಿಸಿದ ಅವರು 8 ಬೌಂಡರಿ ನೆರವಿನಿಂದ 41 ರನ್‌ ಹೊಡೆದರು. ಆದರೆ ಮೊದಲ ಪಂದ್ಯದಲ್ಲಿ ಶತಕ ಬಾರಿಸಿ ಮಿಂಚಿದ್ದ ಮತ್ತೂಬ್ಬ ಓಪನರ್‌ ಸೊಲೋಮನ್‌ ಮೈರ್‌ ಇಲ್ಲಿ ಖಾತೆಯನ್ನೇ ತೆರೆಯಲಿಲ್ಲ. ಮಾಲ್ಕಂ ವಾಲರ್‌ 38, ಸೀನ್‌ ಇರ್ವಿನ್‌ 22 ರನ್‌ ಹೊಡೆದರು.

ಲಂಕಾ ಆಘಾತಕಾರಿ ಆರಂಭ
ಸಣ್ಣ ಮೊತ್ತದ ಚೇಸಿಂಗ್‌ ವೇಳೆ ಶ್ರೀಲಂಕಾ ಆರಂಭಿಕ ಆಘಾತಕ್ಕೊಳಗಾಯಿತು. 2.2 ಓವರ್‌ಗಳಲ್ಲಿ, 10 ರನ್‌ ಆಗುವಷ್ಟರಲ್ಲಿ ಗುಣತಿಲಕ (8) ಮತ್ತು ಮೆಂಡಿಸ್‌ (9) ಅವರನ್ನು ಕಳೆದುಕೊಂಡಿತು. ಚಟಾರ ಸತತ 2 ಎಸೆತಗಳಲ್ಲಿ ಇವರಿಗೆ ಪೆವಿಲಿಯನ್‌ ಹಾದಿ ತೋರಿಸಿದ್ದರು.

3ನೇ ವಿಕೆಟಿಗೆ ಜತೆಗೂಡಿದ ನಿರೋಷನ್‌ ಡಿಕ್ವೆಲ್ಲ (35) ಮತ್ತು ಉಪುಲ್‌ ತರಂಗ (ಅಜೇಯ 75) ತಂಡಕ್ಕೆ ರಕ್ಷಣೆ ಒದಗಿಸಿದರು. ಇವರಿಬ್ಬರ ಜತೆಯಾಟದಲ್ಲಿ 67 ರನ್‌ ಒಟ್ಟುಗೂಡಿತು. ತರಂಗ-ಮ್ಯಾಥ್ಯೂಸ್‌ (ಅಜೇಯ 28) ಮುರಿಯದ 4ನೇ ವಿಕೆಟಿಗೆ 81 ರನ್‌ ಪೇರಿಸಿದರು. ತರಂಗ ಅವರ 75 ರನ್‌ 86 ಎಸೆತಗಳಿಂದ ಬಂತು. ಇದರಲ್ಲಿ 8 ಬೌಂಡರಿ ಒಳಗೊಂಡಿತ್ತು.

ಸಂಕ್ಷಿಪ್ತ ಸ್ಕೋರ್‌: ಜಿಂಬಾಬ್ವೆ-33.4 ಓವರ್‌ಗಳಲ್ಲಿ 155 (ಮಸಕಝ 41, ವಾಲರ್‌ 38, ಇರ್ವಿನ್‌ 22, ಸಂದಕನ್‌ 52ಕ್ಕೆ 4, ಹಸರಂಗ 15ಕ್ಕೆ 3). ಶ್ರೀಲಂಕಾ-30.1 ಓವರ್‌ಗಳಲ್ಲಿ 3 ವಿಕೆಟಿಗೆ 158 (ತರಂಗ ಔಟಾಗದೆ 75, ಡಿಕ್ವೆಲ್ಲ 35, ಮ್ಯಾಥ್ಯೂಸ್‌ ಔಟಾಗದೆ 28, ಚಟಾರ 33ಕ್ಕೆ 2).

ಪಂದ್ಯಶ್ರೇಷ್ಠ: ಲಕ್ಷಣ ಸಂದಕನ್‌

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.