ಏಂಜಲೊ ಮ್ಯಾಥ್ಯೂಸ್ ಹೊರಕ್ಕೆ
Team Udayavani, Feb 7, 2018, 7:30 AM IST
ಕೊಲಂಬೋ: ಮಂಡಿ ನೋವಿನ ಸಮಸ್ಯೆಯಿಂದಾಗಿ ಬಳಲುತ್ತಿರುವ ಶ್ರೀಲಂಕಾ ಏಕದಿನ ತಂಡದ ನಾಯಕ ಏಂಜೆಲೊ ಮ್ಯಾಥ್ಯೂಸ್ ಅವರನ್ನು ಬಾಂಗ್ಲಾ ಪ್ರವಾಸದ ಇನ್ನುಳಿದ ಪಂದ್ಯಗಳಿಂದ ಕೈಬಿಡಲಾಗಿದೆ.
ಕಳೆದ ತಿಂಗಳು ಬಾಂಗಾದಲ್ಲಿ ನಡೆದ ತ್ರಿಕೋನ ಏಕದಿನ ಸರಣಿ ವೇಳೆ ಮ್ಯಾಥ್ಯೂಸ್ ಗಾಯಕ್ಕೆ ತುತ್ತಾಗಿದ್ದರು. ಗಾಯದ ಸಮಸ್ಯೆಯಿಂದಾಗಿ ಅವರು ಬಾಂಗ್ಲಾ ದೇಶ ವಿರುದ್ಧ ನಡೆಯುವ ಎರಡನೇ ಟೆಸ್ಟ್ ಮತ್ತು ಎರಡು ಟಿ20 ಪಂದ್ಯಗಳನ್ನು ಕಳೆದುಕೊಳ್ಳಲಿದ್ದಾರೆ. ಗಾಯದ ಸಮಸ್ಯೆ ಎದುರಿಸುತ್ತಿರುವ ಅವರು ಮಾ. 8ರಿಂದ ಕೊಲಂಬೋದಲ್ಲಿ ಆರಂಭಗೊಳ್ಳಲಿರುವ ಶ್ರೀಲಂಕಾ, ಬಾಂಗ್ಲಾ ಮತ್ತು ಭಾರತ ದೇಶಗಳ ನಡುವಿನ ತ್ರಿಕೋನ ಸರಣಿಯ ವೇಳೆ ಪೂರ್ಣ ಫಿಟ್ ಆಗುವ ವಿಶ್ವಾಸದಲ್ಲಿದ್ದಾರೆ.
“ಬಾಂಗ್ಲಾ ವಿರುದ್ಧ ಉಳಿದಿರುವ ಎರಡು ಪಂದ್ಯಗಳಿಗಾಗಿ ಮ್ಯಾಥ್ಯೂಸ್ ಅವರನ್ನು ತಂಡದಲ್ಲಿ ಉಳಿಸಿಕೊಂಡು ಅವರು ಹೆಚ್ಚು ಸಮಸ್ಯೆಗೆ ಈಡಾಗುವುದನ್ನು ನಾವು ಬಯಸುವುದಿಲ್ಲ. ಮುಂದಿನ ತಿಂಗಳು ನಡೆಯುವ ತ್ರಿಕೋನ ಸರಣಿಗೆ ಅವರು ಫಿಟ್ ಆಗಿ ತಂಡಕ್ಕೆ ಸೇರಿಸಿಕೊಳ್ಳುವ ಯೋಜನೆ ನಮ್ಮದು’ ಎಂದು ಶ್ರೀಲಂಕಾ ಆಯ್ಕೆ ಸಮಿತಿಯ ಗ್ರೇಮ್ ಲ್ಯಾಬ್ರೂಯ್ ಹೇಳಿದ್ದಾರೆ. ಫೆ. 15 ಮತ್ತು 18ರಂದು ನಡೆಯುವ ಬಾಂಗ್ಲಾ ವಿರುದ್ಧದ ಎರಡು ಟಿ20 ಪಂದ್ಯಗಳಿಗೆ ಶ್ರೀಲಂಕಾ ತಂಡದ ನಾಯಕತ್ವವನ್ನು ತಿಸರ ಪೆರೆರ ವಹಿಸಿಕೊಳ್ಳುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ