ಶ್ರೀಕಾಂತ್‌, ಸೈನಾ, ಚಿರಾಗ್‌ ಜೋಡಿಗೆ ಗೆಲುವು

ಪಂದ್ಯ ತ್ಯಜಿಸಿದ ಗಾಯಾಳು ಕಶ್ಯಪ್‌. ಸೌರಭ್‌ ವರ್ಮ ಪರಾಭವ

Team Udayavani, Jan 14, 2021, 6:20 AM IST

ಶ್ರೀಕಾಂತ್‌, ಸೈನಾ, ಚಿರಾಗ್‌ ಜೋಡಿಗೆ ಗೆಲುವು

ಬ್ಯಾಂಕಾಕ್‌: ಥಾಯ್ಲೆಂಡ್‌ ಓಪನ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಲ್ಲಿ ಕೆ. ಶ್ರೀಕಾಂತ್‌, ಸೈನಾ ನೆಹ್ವಾಲ್‌ ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಗೆಲುವಿನ ಆರಂಭ ಪಡೆದಿದ್ದಾರೆ. ಆದರೆ ಪಾರುಪಳ್ಳಿ ಕಶ್ಯಪ್‌ ಗಾಯಾಳಾಗಿ ಪಂದ್ಯವನ್ನು ತ್ಯಜಿಸುವ ಸಂಕಟಕ್ಕೆ ಸಿಲುಕಿದರು.

ಬುಧವಾರ ನಡೆದ ಪುರುಷರ ಸಿಂಗಲ್ಸ್‌ ವಿಭಾಗದ ಪಂದ್ಯದಲ್ಲಿ ಪಿ. ಕಶ್ಯಪ್‌ ಕೆನಡಾದ ಜಾಸನ್‌ ಆ್ಯಂಟನಿ ಹೋ ಸೇ ವಿರುದ್ಧ 3ನೇ ಗೇಮ್‌ನಲ್ಲಿ ತೀವ್ರ ಸ್ನಾಯು ಸೆಳೆತಕ್ಕೆ ಸಿಲುಕಿ ಪಂದ್ಯ ತ್ಯಜಿಸಿದರು. ಆಗ ಅವರು 8-14ರ ಹಿನ್ನಡೆಯಲ್ಲಿದ್ದರು. ಮೊದಲ ಗೇಮ್‌ ಕಳೆದುಕೊಂಡ ಕಶ್ಯಪ್‌ (9-21), ದ್ವಿತೀಯ ಗೇಮ್‌ನಲ್ಲಿ ತೀವ್ರ ಪೈಪೋಟಿ ನೀಡಿ 21-13ರಿಂದ ಪಂದ್ಯವನ್ನು ಸಮಬಲಕ್ಕೆ ತಂದಿದ್ದರು.

ಮತ್ತೂಂದು ಸಿಂಗಲ್ಸ್‌ ಮುಖಾ ಮುಖೀ ಕೆ. ಶ್ರೀಕಾಂತ್‌-ಸೌರಭ್‌ ವರ್ಮ ನಡುವಿನ “ಆಲ್‌ ಇಂಡಿಯನ್‌ ಮ್ಯಾಚ್‌’ ಆಗಿತ್ತು. ಇದನ್ನು ಶ್ರೀಕಾಂತ್‌ 21-12, 21-11 ಅಂತರದಿಂದ ಸುಲಭದಲ್ಲಿ ಗೆದ್ದರು.

ಚಿರಾಗ್‌-ಸಾಯಿರಾಜ್‌ ಜಯ :

ಭಾರತದ ಸ್ಟಾರ್‌ ಡಬಲ್ಸ್‌ ಜೋಡಿ ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌ ರಾಂಕಿ ರೆಡ್ಡಿ ದಕ್ಷಿಣ ಕೊರಿಯಾದ ಕಿಮ್‌ ಜಿ ಗೀ-ಲೀ ಯೋಂಗ್‌ ಡೇ ವಿರುದ್ಧ 19-21, 21-16, 21-14 ಅಂತರದಿಂದ ಗೆಲುವು ಸಾಧಿಸಿದರು. ಆದರೆ ಪುರುಷರ

ವಿಭಾಗದ ಮತ್ತೂಂದು ಜೋಡಿ :

ಅರ್ಜುನ್‌  ಮಡತಿಲ್‌  ರಾಮ ಚಂದ್ರನ್‌ ಮತ್ತು ಧ್ರುವ ಕಪಿಲ ಮಲೇಶ್ಯದ ಓಂಗ್‌ ಯ್ಯೂ ಸಿನ್‌-ಟಿಯೋ ಇ ಯಿ ವಿರುದ್ಧ 13-21, 21-8, 24-22 ಅಂತರದಿಂದ ಪರಾಭವಗೊಂಡಿತು.

ಮಿಕ್ಸೆಡ್‌ ಡಬಲ್ಸ್‌ ವಿಭಾಗದಲ್ಲಿ ಎನ್‌. ಸಿಕ್ಕಿ ರೆಡ್ಡಿ-ಸುಮೀತ್‌ ರೆಡ್ಡಿ ಕೂಡ ಸೋಲನುಭವಿಸಿದರು. ಇವರ ವಿರುದ್ಧ ಹಾಂಕಾಂಗ್‌ನ  ಚುಂಗ್‌ ಮ್ಯಾನ್‌ ಥಾಂಗ್‌-ಯೋಂಗ್‌ ಸೂಟ್‌ ತ್ಸೆ 22-20, 21-17 ನೇರ ಗೇಮ್‌ಗಳ ಜಯ ಸಾಧಿಸಿದರು.

ದ್ವಿತೀಯ ಸುತ್ತು ತಲುಪಿದ ಸೈನಾ ನೆಹ್ವಾಲ್‌ ;

ಭಾರತದ ಸ್ಟಾರ್‌ ಆಟಗಾರ್ತಿ ಸೈನಾ ನೆಹ್ವಾಲ್‌ ಬುಧವಾರದ ಪಂದ್ಯದಲ್ಲಿ ಮಲೇಶ್ಯದ ಸೆಲ್ವದುರೈ ಕಿಸೋನಾ ವಿರುದ್ಧ 21-15, 21-15 ನೇರ ಗೇಮ್‌ಗಳ ಜಯ ಸಾಧಿಸಿದರು. ಅವರಿನ್ನು ಆತಿಥೇಯ ನಾಡಿನ ಬುಸಾನನ್‌ ಒಂಗ್ಬಾಮ್ರುಂಗಫಾನ್‌ ವಿರುದ್ಧ ಸೆಣಸಲಿದ್ದಾರೆ.

“ಮಂಗಳವಾರದ ಕೊರೊನಾ ವರದಿಯಲ್ಲಿ ಪಾಸಿಟಿವ್‌ ಫ‌ಲಿತಾಂಶದ ಆಘಾತಕ್ಕೆ ಸಿಲುಕಿದ್ದೆ. ನನಗೆ ಕಳೆದ ನವೆಂಬರ್‌ನಲ್ಲೇ ಕೊರೊನಾ ಬಂದು ಹೋಗಿದೆ, ನಾನು ಚೇತರಿಸಿಕೊಂಡಿದ್ದೇನೆ ಎಂದು ಮನದಟ್ಟು ಮಾಡಿದೆ. ಕೊನೆಗೆ ನನ್ನ ರಕ್ತ ಪರೀಕ್ಷೆ ಹಾಗೂ ಎಕ್ಸ್‌-ರೇ ಪರಿಶೀಲಿಸಿದ ವೈದ್ಯರು ಓಕೆ ಹೇಳಿದರು. ನನ್ನಲ್ಲಿ ಕೋವಿಡ್‌ನ‌ ಯಾವುದೇ ಲಕ್ಷಣವಿಲ್ಲ. ವೈದ್ಯರಿಗೆ ಕೃತಜ್ಞತೆಗಳು’ ಎಂದು ಗೆಲುವಿನ ಬಳಿಕ ಸೈನಾ ಹೇಳಿದರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.