ODI World Cup 2023: ಅಭ್ಯಾಸ ಪಂದ್ಯದಲ್ಲಿ ಹ್ಯಾಟ್ರಿಕ್ ಪಡೆದ ಸ್ಟಾರ್ಕ್; ವಿಡಿಯೋ ನೋಡಿ


Team Udayavani, Oct 1, 2023, 8:36 AM IST

Starc Takes Hat-Trick in ODI World Cup 2023 warm up match

ತಿರುವನಂತಪುರಂ: ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಕ್ರೀಡಾಕೂಟಕ್ಕೆ ಸಿದ್ದತೆ ನಡೆಸುತ್ತಿರುವ ಆಸ್ಟ್ರೇಲಿಯಾ ತಂಡವು ಶನಿವಾರ ಅಭ್ಯಾಸ ಪಂದ್ಯವಾಡಿದೆ. ನೆದರ್ಲ್ಯಾಂಡ್ ವಿರುದ್ದ ತಿರುವನಂತಪುರಂನಲ್ಲಿ ನಡೆದ ಪಂದ್ಯಕ್ಕೆ ಮಳೆ ಅಡ್ಡಿಯಾದರೂ ಆಸೀಸ್ ಸಿಕ್ಕ ಸಮಯದಲ್ಲಿ ಮೇಲಗೈ ಸಾಧಿಸಿತು.

ಈ ಪಂದ್ಯದಲ್ಲಿ ಆಸೀಸ್ ಪ್ರಮುಖ ವೇಗಿ ಮಿಚೆಲ್ ಸ್ಟಾರ್ಕ್ ಅವರು ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದರು. ಮೊದಲ ಓವರ್ ನ ಕೊನೆಯ ಎರಡು ಎಸೆತ ಮತ್ತು ತನ್ನ ಎರಡನೇ ಓವರ್ ನ ಮೊದಲ ಎಸೆತದಲ್ಲಿ ವಿಕೆಟ್ ಪಡೆದ ಮಿಚ್ ಸ್ಟಾರ್ಕ್ ನೆದರ್ಲ್ಯಾಂಡ್ ಬೌಲರ್ ಗಳಿಗೆ ಸಿಂಹಸ್ವಪ್ನರಾಗಿ ಕಾಡಿದರು. ಎಲ್ಲಾ ಮೂರು ವಿಕೆಟ್ ಗಳು ಬೌಲ್ಡ್ ರೂಪದಲ್ಲಿ ಬಂದಿದ್ದು ವಿಶೇಷ.

ಇನ್ನಿಂಗ್ಸ್ ನ ಮೊದಲ ಓವರ್ ನ ಐದನೇ ಬಾಲ್ ನಲ್ಲಿ ಡಚ್ ಆರಂಭಿಕ ಆಟಗಾರ ಮ್ಯಾಕ್ಸ್ ಒ’ಡೌಡ್ ಬೌಲ್ಡ್ ಆದರು. ಇನ್ ಸ್ವಿಂಗ್ ಆಗಿ ಬಂದ ಚೆಂಡು ಮಧ್ಯದ ಸ್ಟಂಪ್ ಎಗರಿಸಿತು.

ಓವರ್ ನ ಕೊನೆಯ ಎಸೆತ ಎದುರಿಸಲು ಬಂದ ವೆಸ್ಲಿ ಬರ್ರೆಸಿ ಅವರು ಗೋಲ್ಡನ್ ಡಕ್ ಗೆ ಬಲಿಯಾದರು. ಮತ್ತೊಂದು ಇನ್ ಸ್ವಿಂಗರ್ ಎಸೆದ ಸ್ಟಾರ್ಕ್ ಈ ಬಾರಿ ಆಫ್ ಸ್ಟಂಪ್ ಎಗರಿಸಿದರು.

ಇನ್ನಿಂಗ್ ನ 2.1 ಓವರ್ ನಲ್ಲಿ ಸ್ಟಾರ್ಕ್ ಗೆ ಹ್ಯಾಟ್ರಿಕ್ ಅವಕಾಶ ಮುಂದಿತ್ತು. ಸ್ಟ್ರೈಕ್ ನಲ್ಲಿದ್ದ ಬಾಸ್ ಡಿಲೀಡ್ ಅವರಿಗೆ ಫಾಸ್ಟ್ ಇನ್ ಸ್ವಿಂಗರ್ ಯಾರ್ಕರ್ ಎಸೆದ ಸ್ಟಾರ್ಕ್ ಮಧ್ಯದ ಸ್ಟಂಪ್ ಗಾಳಿಯಲ್ಲಿ ಹಾರುವಂತೆ ಮಾಡಿದರು. ಈ ಮೂಲಕ ಅಭ್ಯಾಸ ಪಂದ್ಯದಲ್ಲೇ ಹ್ಯಾಟ್ರಿಕ್ ಪಡೆದು ಬೀಗಿದರು.

ಗಾಯದ ಕಾರಣದಿಂದ ಹಲವು ಕಾಲದಿಂದ ಮೈದಾನದಿಂದ ಹೊರಗಿದ್ದ ಮಿಚ್ ಸ್ಟಾರ್ಕ್ ಸರಿಯಾದ ಸಮಯಕ್ಕೆ ತನ್ನ ಆಗಮನವನ್ನು ಸಾರಿದ್ದಾರೆ. ಈ ಬಾರಿಯ ವಿಶ್ವಕಪ್ ನಲ್ಲಿ ತನ್ನ ಖದರ್ ತೋರಿಸುವುದನ್ನು ಆರಂಭದಲ್ಲೇ ಹ್ಯಾಟ್ರಿಕ್ ಮೂಲಕ ಘೋಷಿಸಿಕೊಂಡಿದ್ದಾರೆ.

ಮಳೆಯ ಕಾರಣದಿಂದ ತಲಾ 23 ಓವರ್ ಗಳಿಗೆ ನಿಗದಿ ಪಡಿಸಲಾದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸೀಸ್ ಏಳು ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿತು. ಆದರೆ ನೆದರ್ಲ್ಯಾಂಡ್ ತಂಡವು 14.2 ಓವರ್ ಗಳಲ್ಲಿ ಆರು ವಿಕೆಟ್ ಕಳೆದುಕೊಂಡು 84 ರನ್ ಗಳಿಸಿದ್ದ ವೇಳೆ ಮತ್ತೆ ಮಳೆ ಬಂದ ಕಾರಣ ಪಂದ್ಯವನ್ನು ಸ್ಥಗಿತಗೊಳಿಸಲಾಯಿತು.

ಟಾಪ್ ನ್ಯೂಸ್

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Life Lesson: ಜಾತ್ರೆಯಲ್ಲಿ ಸಿಕ್ಕಾಕೆ ಕಲಿಸಿದ ಪಾಠ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.