ಗಾಯಾಳು ಸ್ಟಾರ್ಕ್‌, ಪಾಂಡ್ಯ ಸರಣಿಯಿಂದ ಔಟ್‌


Team Udayavani, Mar 11, 2017, 12:05 PM IST

11-REPORTER-15.jpg

ರಾಂಚಿ: ಬೆಂಗಳೂರು ಟೆಸ್ಟ್‌ ಪಂದ್ಯದಲ್ಲಿ ಸೋತು ಆಘಾತಕ್ಕೆ ಸಿಲುಕಿರುವ ಪ್ರವಾಸಿ ಆಸ್ಟ್ರೇಲಿಯಕ್ಕೆ ಈಗ ಗಾಯದ ಮೇಲೆ ಸತತ ಬರೆಗಳು ಬೀಳಲಾರಂಭಿಸಿವೆ. ಆಲ್‌ರೌಂಡರ್‌ ಮಿಚೆಲ್‌ ಮಾರ್ಷ್‌ ಗಾಯಾಳಾಗಿ ಹೊರಬಿದ್ದ ಬೆನ್ನಲ್ಲೇ ತಂಡದ ಪ್ರಧಾನ ವೇಗಿ ಮಿಚೆಲ್‌ ಸ್ಟಾರ್ಕ್‌ ಕೂಡ ಬೇರ್ಪಟ್ಟಿದ್ದಾರೆ. ಅವರ ಬಲಗಾಲಿನ ಪಾದದ ಮೂಳೆಯಲ್ಲಿ ಸೂಕ್ಷ್ಮ ಬಿರುಕು ಕಾಣಿಸಿಕೊಂಡಿದೆ. 

ಇದೇ ವೇಳೆ ಉಳಿದೆರಡು ಟೆಸ್ಟ್‌ ಪಂದ್ಯಗಳಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆದರೆ ಭುಜದ ನೋವಿನಿಂದ ಇನ್ನೂ ಚೇತರಿಸದ ಹಾರ್ದಿಕ್‌ ಪಾಂಡ್ಯ ಅವರನ್ನು ಕೈಬಿಡಲಾಗಿದೆ. ಇವರ ಬದಲು ಬೇರೆ ಆಟಗಾರನನ್ನು ತಂಡಕ್ಕೆ ಸೇರಿಸಿಲ್ಲ.

ಸ್ಟಾರ್ಕ್‌ ಆಲೌರೌಂಡ್‌ ಶೋ 
ಪ್ರಸಕ್ತ ಸರಣಿ ಯಲ್ಲಿ ಮಿಚೆಲ್‌ ಸ್ಟಾರ್ಕ್‌ ಬೌಲಿಂಗ್‌ ಹಾಗೂ ಬ್ಯಾಟಿಂಗ್‌ಗಳೆರಡರಲ್ಲೂ ಮಿಂಚಿ ಗಮನ ಸೆಳೆದಿದ್ದರು. ಮುಖ್ಯವಾಗಿ, ಆಸೀಸ್‌ ಗೆಲುವಿಗೆ ಕಾರಣವಾದ ಪುಣೆ ಟೆಸ್ಟ್‌ನಲ್ಲಿ ಸ್ಟಾರ್ಕ್‌ ಆಲ್‌ರೌಂಡ್‌ ಶೋ ಮೂಲಕ ಮಿಂಚಿದ್ದರು. ಅವರ ಅರ್ಧ ಶತಕ ಆಸೀಸ್‌ ಜಯದಲ್ಲಿ ಪ್ರಮುಖ ಪಾತ್ರ ವಹಿಸಿತ್ತು. ಬೆಂಗಳೂರು ಟೆಸ್ಟ್‌ನಲ್ಲೂ ಅವರು ಘಾತಕ ದಾಳಿ ಸಂಘಟಿಸಿದ್ದರು. ದ್ವಿತೀಯ ಸರದಿಯಲ್ಲಿ ರಹಾನೆ ಮತ್ತು ನಾಯರ್‌ ಅವರನ್ನು ಸತತ ಎಸೆತಗಳಲ್ಲಿ ಕೆಡವಿ ತಂಡಕ್ಕೆ ಮೇಲುಗೈ ಒದಗಿಸಿದ್ದರು.

“ಬೆಂಗಳೂರು ಟೆಸ್ಟ್‌ ವೇಳೆ ಸ್ಟಾರ್ಕ್‌ ಬಲಗಾಲಿನ ನೋವಿಗೆ ಒಳಗಾಗಿದ್ದರು. ಇದರಿಂದ ಅವರು ಚೇತರಿಸಿಕೊಳ್ಳಬಹುದೆಂದು ನಾವು ಈವರೆಗೆ ಕಾದೆವು. ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ಸ್ಕ್ಯಾನ್‌ ಮಾಡಿದಾಗ ಯಾವುದೇ ಚೇತರಿಕೆಯ ವರದಿ ಲಭ್ಯವಾಗಲಿಲ್ಲ. ಹೀಗಾಗಿ ಸರಣಿಯ ಉಳಿದೆರಡು ಟೆಸ್ಟ್‌ಗಳಿಗೆ ಸ್ಟಾರ್ಕ್‌ ಲಭ್ಯರಿರುವುದಿಲ್ಲ. ಅವರು ಶೀಘ್ರವೇ ಆಸ್ಟ್ರೇಲಿಯಕ್ಕೆ ವಾಪಸಾಗುತ್ತಾರೆ…’ ಎಂದು ಆಸೀಸ್‌ ತಂಡದ ಫಿಸಿಯೋ ಡೇವಿಡ್‌ ಬೀಕ್ಲಿ ಹೇಳಿದ್ದಾರೆ.

ಸ್ಟಾರ್ಕ್‌ ಸ್ಥಾನಕ್ಕೆ ಯಾರು ಎಂಬುದನ್ನು ಆಸ್ಟ್ರೇಲಿಯ ಆಯ್ಕೆ ಸಮಿತಿ ಶೀಘ್ರದಲ್ಲೇ ನಿರ್ಧರಿಸಲಿದೆ. ಸದ್ಯ ತಂಡದಲ್ಲಿರುವ ಹೆಚ್ಚುವರಿ ವೇಗಿಯೆಂದರೆ ಜಾಕ್ಸನ್‌ ಬರ್ಡ್‌ ಮಾತ್ರ. ತವರಿನ ಶೆಫೀಲ್ಡ್‌ ಶೀಲ್ಡ್‌ ಪಂದ್ಯಾವಳಿಯಲ್ಲಿ ಆತ್ಯಧಿಕ ವಿಕೆಟ್‌ ಕಿತ್ತ ಶಾಡ್‌ ಸೇಯರ್, ಪಶ್ಚಿಮ ಆಸ್ಟ್ರೇಲಿಯದ ಎಡಗೈ ವೇಗಿ ಜಾಸನ್‌ ಬೆಹೆಡಾಫ್ì ಮತ್ತು ಪ್ಯಾಟ್‌ ಕಮಿನ್ಸ್‌ ರೇಸ್‌ನಲ್ಲಿದ್ದಾರೆ.

ಸರಣಿಯ 3ನೇ ಟೆಸ್ಟ್‌ ಮಾ. 16ರಿಂದ ರಾಂಚಿ ಯಲ್ಲಿ ಆರಂಭವಾಗಲಿದೆ.

ಪಾಂಡ್ಯ ಹೊರಕ್ಕೆ 
ಸರಣಿಯ ಉಳಿದೆರಡು ಟೆಸ್ಟ್‌ ಪಂದ್ಯಗಳಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಗಾಯಾಳು ಹಾರ್ದಿಕ್‌ ಪಾಂಡ್ಯ ಅವರನ್ನು ಕೈಬಿಡಲಾಗಿದೆ. ಹೀಗಾಗಿ ಈ ಸರಣಿಯಲ್ಲಿ ಟೆಸ್ಟ್‌ ಕ್ಯಾಪ್‌ ಧರಿಸುವ ಪಾಂಡ್ಯ ಕನಸು ಭಗ್ನಗೊಂಡಿದೆ. ಎಡ ಭುಜದ ನೋವಿಗೊಳಗಾಗಿ ಬೆಂಗಳೂರು ಟೆಸ್ಟ್‌ ಪಂದ್ಯದಿಂದ ಹೊರಗುಳಿದಿದ್ದ ಆರಂಭಕಾರ ಮುರಳಿ ವಿಜಯ್‌ ಸ್ಥಾನ ಉಳಿಸಿಕೊಂಡಿದ್ದಾರೆ. ವಿಜಯ್‌ ರಾಂಚಿಯಲ್ಲಿ ನಡೆಯುವ ಮೂರನೇ ಟೆಸ್ಟ್‌ನಲ್ಲಿ  ಆಡುವ ಸಾಧ್ಯತೆ ಇದೆ.

ಭಾರತ ತಂಡ 
ವಿರಾಟ್‌ ಕೊಹ್ಲಿ (ನಾಯಕ), ಕೆ.ಎಲ್‌. ರಾಹುಲ್‌, ಮುರಳಿ ವಿಜಯ್‌, ಚೇತೇಶ್ವರ್‌ ಪೂಜಾರ, ಅಜಿಂಕ್ಯ ರಹಾನೆ, ಕರುಣ್‌ ನಾಯರ್‌, ವೃದ್ಧಿಮಾನ್‌ ಸಾಹಾ, ಆರ್‌. ಅಶ್ವಿ‌ನ್‌, ರವೀಂದ್ರ ಜಡೇಜ, ಜಯಂತ್‌ ಯಾದವ್‌, ಉಮೇಶ್‌ ಯಾದವ್‌, ಇಶಾಂತ್‌ ಶರ್ಮ, ಭುವನೇಶ್ವರ್‌ ಕುಮಾರ್‌, ಕುಲದೀಪ್‌ ಯಾದವ್‌, ಅಭಿನವ್‌ ಮುಕುಂದ್‌.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.