ರಾಜ್ಯ ಹಾಕಿ ಸಂಸ್ಥೆಯಿಂದಲೇ ಕಿರಿಯರಿಗೆ ಕತ್ತರಿ?


Team Udayavani, Dec 3, 2017, 6:15 AM IST

Karnataka-State-Hockey.jpg

ಬೆಂಗಳೂರು: ಕರ್ನಾಟಕದಲ್ಲಿ ಹಾಕಿ ಕುಸಿತಕ್ಕೆ ಕಾರಣಗಳೇನು? ಉತ್ತರ ಹುಡುಕುತ್ತಾ ಹೋದರೆ ಹಲವಾರು ಕಾರಣ ತೆರೆದುಕೊಳ್ಳುತ್ತದೆ. ತುಸು ಆತಂಕಕ್ಕೂ ಎಡೆಮಾಡಿಕೊಡುತ್ತದೆ.

ಸ್ವತಃ ರಾಜ್ಯ ಹಾಕಿ ಸಂಸ್ಥೆ ಬೇಜವಾಬ್ದಾರಿ ತನ, ಕೋಚ್‌ಗಳ ನಿರ್ಲಕ್ಷ್ಯದಿಂದ ರಾಜ್ಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕುಗ್ಗಿದೆ. ಹೀಗೊಂದು ಸ್ಫೋಟಕ ಸುದ್ದಿಯನ್ನು ಹಾಕಿ  ಕರ್ನಾಟಕದ ಹೆಸರು ಹೇಳಲಿಚ್ಛಿಸದ ವ್ಯಕ್ತಿಯೊಬ್ಬರು ಉದಯವಾಣಿಗೆ ತಿಳಿಸಿದ್ದಾರೆ. ಆದರೆ ಹಾಕಿ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಎಬಿ.ಸುಬ್ಬಯ್ಯ ಈ ಆರೋಪವನ್ನು ತಳ್ಳಿ ಹಾಕಿದ್ದಾರೆ.

ಹಾಕಿ ಕರ್ನಾಟಕ ನಿರ್ಲಕ್ಷ್ಯವೇ?: ಕಳೆದ 5-6 ವರ್ಷದಲ್ಲಿ ಹಾಕಿ ಕರ್ನಾಟಕ ಕಿರಿಯರಿಗಾಗಿ ಕೂಟವನ್ನು ಸರಿಯಾಗಿ ಆಯೋಜಿಸುತ್ತಿಲ್ಲ. ಇದರಿಂದ ಹಾಕಿ ಕರ್ನಾಟಕದ ಹುಡುಗರು ದೊಡ್ಡ ಮಟ್ಟದಲ್ಲಿ ಅವಕಾಶ ಕಳೆದುಕೊಳ್ಳುತ್ತಿದ್ದಾರೆ. ಸದ್ಯ ರಾಜ್ಯದಲ್ಲಿ ವರ್ಷಕ್ಕೆ 2 ಪ್ರಮುಖ ಕೂಟ ಆಯೋಜಿಸಿದರೆ ಅದುವೇ ದೊಡ್ಡದು. ಹೆಚ್ಚು ಕೂಟವನ್ನು ಆಡಿ, ಸಾಮರ್ಥ್ಯ, ಕೌಶಲ್ಯ ಹೆಚ್ಚಿಸಿಕೊಳ್ಳಬೇಕಾಗಿದ್ದು ಅಗತ್ಯ. ಆದರೆ ಕಿರಿಯ ಆಟಗಾರರನ್ನು ಸಂಪೂರ್ಣ ನಿರ್ಲಕ್ಷಿéಸಲಾಗಿದೆ. ಇದರಿಂದ ರಾಷ್ಟ್ರೀಯ ಕಿರಿಯರ ತಂಡದಲ್ಲಿ ರಾಜ್ಯ ಆಟಗಾರರಿಗೆ ಸ್ಥಾನ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹಾಕಿ ಕರ್ನಾಟಕದ ಆಡಳಿತಾಧಿಕಾರಿಯೊಬ್ಬರ ಬೇಸರ ವ್ಯಕ್ತಪಡಿಸಿದ್ದಾರೆ.

ಸತ್ಯಕ್ಕೆ ದೂರವಾದ ಆರೋಪ: ರಾಜ್ಯ ಆಟಗಾರರಿಗೆ ಭಾರತ ತಂಡದಲ್ಲಿ ಸ್ಥಾನ ಸಿಗದಿರಲು ಹಾಕಿ ಕರ್ನಾಟಕವೇ ಕಾರಣ ಅನ್ನುವ ಆರೋಪವನ್ನು ಹಾಕಿ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಎಬಿ.ಸುಬ್ಬಯ್ಯ ತಳ್ಳಿ ಹಾಕಿದ್ದಾರೆ. ಕಿರಿಯರ ಹಾಗೂ ಹಿರಿಯರ ಕೂಟ ಹೆಚ್ಚು ಆಯೋಜಿಸಲು ಆಗುವುದಿಲ್ಲ. ಹಾಗಂತ ಆಯೋಜಿಸಿಯೇ ಇಲ್ಲ ಎಂದು ಆರೋಪಿಸುತ್ತಿರುವುದು ಸತ್ಯಕ್ಕೆ ದೂರವಾದ ಮಾತು. ಅಖೀಲ ಭಾರತ ಮಟ್ಟದ ಒಂದು ಕೂಟವನ್ನು ಆಯೋಜಿಸಲು 60 ಲಕ್ಷ ರೂ. ಬೇಕು. 

ಅಷ್ಟೊಂದು ಹಣವನ್ನು ಖರ್ಚು ಮಾಡುವುದು ಸದ್ಯದ ಪರಿಸ್ಥಿತಿಯಲ್ಲಿ ಭಾರೀ ಕಷ್ಟದ ವಿಚಾರ. ನಮ್ಮಲ್ಲೂ ಕೆಲವೊಂದು ಸಮಸ್ಯೆಗಳಿವೆ ಅನ್ನುವುದನ್ನು ಯಾರೂ ಮರೆಯಬಾರದು ಎಂದು ತಿಳಿಸಿದರು.

ತರಬೇತುದಾರರ ಬೇಜವಾಬ್ದಾರಿ?: ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್‌)ದಲ್ಲಿ ರಾಜ್ಯದ 70ಕ್ಕೂ ಹೆಚ್ಚು ಹಾಕಿಪಟುಗಳು ತರಬೇತಿ ಪಡೆಯುತ್ತಿದ್ದಾರೆ. ಇವರೆಲ್ಲರೂ ಹಾಕಿ ಕರ್ನಾಟಕದಿಂದ ಮಾನ್ಯತೆ ಹೊಂದಿದವರು. ಆದರೆ ಅವರಿಗೆ ಕೋಚ್‌ಗಳಿಂದ ಪರಿಣಾಮಕಾರಿಯಾಗಿ ತರಬೇತಿ ಸಿಗುತ್ತಿಲ್ಲ ಎಂದು ಹಾಕಿ ಕೂರ್ಗ್‌ ಅಧ್ಯಕ್ಷ ಪಿ.ಇ.ಕಾಳಯ್ಯ ತಿಳಿಸಿದ್ದಾರೆ. 4 ವರ್ಷದ ಹಿಂದೆ ಬೆಂಗಳೂರಿನ ಸಾಯ್‌ನಿಂದ ನಿಕಿನ್‌ ತಿಮ್ಮಯ್ಯ ಮಾತ್ರ ಭಾರತೀಯ ತಂಡಕ್ಕೆ ಆಯ್ಕೆಯಾಗಿದ್ದರು. ಅವರ ಬಳಿಕ ಸಾಯ್‌ನಿಂದ ಒಬ್ಬ ಆಟಗಾರನೂ ಭಾರತ ತಂಡಕ್ಕೆ ಆಯ್ಕೆಯಾಗಿಲ್ಲ. ಇದು ತೀವ್ರ ಬೇಸರದ ಸಂಗತಿ ಎಂದು ಕಾಳಯ್ಯ ವಿವರಿಸಿದರು.

ಉತ್ತರ ಭಾರತ ಲಾಭಿ
ಕಿರಿಯರ ರಾಷ್ಟ್ರೀಯ ಕೂಟಕ್ಕೆ ರಾಜ್ಯದ ಆಟಗಾರರು ಏಕೆ ಆಯ್ಕೆಯಾಗುತ್ತಿಲ್ಲ. ಇದಕ್ಕೆ ಉತ್ತರ ಭಾರತದಲ್ಲಿ ನಡೆಯುವ ಲಾಭಿ ಕೂಡ ಒಂದು ಕಾರಣವಂತೆ. ಹೌದು. ಸ್ವತಃ ಸಾಯ್‌ ಕೋಚ್‌ವೊಬ್ಬರು ಇದನ್ನು ಉದಯವಾಣಿಗೆ ಖಚಿತಪಡಿಸಿದ್ದಾರೆ.

ಹೇಗೆ ನಡೆಯುತ್ತೆ ಲಾಭಿ?: ಉತ್ತರ ಭಾರತದಲ್ಲಿ ಮೊದಲು ಕ್ರೀಡೆ ಬಳಿಕ ಶಿಕ್ಷಣ. ಆದರೆ ದಕ್ಷಿಣ ಭಾರತದಲ್ಲಿ ಶಿಕ್ಷಣಕ್ಕೇ ಮೊದಲ ಆಧ್ಯತೆ. ಉದಾಹರಣೆಗೆ ಹಾಕಿ ಹುಡುಗನೊಬ್ಬ ಹಂತಹಂತವಾಗಿ ಬಂದು 10ನೇ ತರಗತಿಗೆ ತಲುಪುತ್ತಾನೆ. ಆಗ ಅವನಿಗೆ  16 ವರ್ಷ ಆಗಿರುತ್ತದೆ ಎಂದಿಟ್ಟುಕೊಳ್ಳೋಣ. ಆದರೆ ಉತ್ತರ ಭಾರತದಲ್ಲಿ ಹಾಕಿ ಪಟುಗಳು ಶಾಲೆಗೆ ಹೋಗುವುದಿಲ್ಲ. 20 ವರ್ಷದವನು ಕೂಡ ನಕಲಿ ಪ್ರಮಾಣ ಪತ್ರದೊಂದಿಗೆ ನೇರವಾಗಿ 10ನೇ ತರಗತಿ ಪರೀಕ್ಷೆ ಬರೆಯುತ್ತಾನೆ. ನಮ್ಮ ಹುಡುಗನಿಗಿಂತ 4 ವರ್ಷ ದೊಡ್ಡವನು ಮುಂದೆ ಜೂನಿಯರ್‌ ಹಾಕಿ ಆಯ್ಕೆಗೆ ಬರುತ್ತಾನೆ. ಅವನಿಗೆ ಅವಕಾಶ ಸಿಗುತ್ತದೆ. ನಮ್ಮವನಿಗೆ ನಿರಾಶೆಯಾಗುತ್ತದೆ. ಇದು ದೊಡ್ಡ ಮಟ್ಟದಲ್ಲಿ ನಡೆಯುವ ಲಾಭಿ. ಕಳೆದ ವಿಶ್ವಕಪ್‌ ವಿಜೇತ ಕಿರಿಯರ ತಂಡದಲ್ಲೂ ಅನೇಕ ಆಟಗಾರರಿಗೆ ಈ ರೀತಿಯಲ್ಲಿ ನಿರಾಶೆಯಾಗಿದೆ ಎಂದು ಕೋಚ್‌ ಅಸಮಾಧಾನ ವ್ಯಕ್ತಪಡಿಸಿದರು.

– ಹೇಮಂತ್‌ ಸಂಪಾಜೆ

ಟಾಪ್ ನ್ಯೂಸ್

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.