ಸುಣ್ಣಾರಿ: ರಾಜ್ಯ ಮಟ್ಟದ ವಾಲಿಬಾಲ್: ಉಡುಪಿ, ದ.ಕ. ತಂಡಗಳು ಸೆಮಿಫೈನಲ್ಗೆ
Team Udayavani, Dec 9, 2022, 11:25 PM IST
ಕುಂದಾಪುರ/ ತೆಕ್ಕಟ್ಟೆ: ಸುಣ್ಣಾರಿಯ ಎಕ್ಸಲೆಂಟ್ ಪ.ಪೂ. ಕಾಲೇಜಿನಲ್ಲಿ ನಡೆಯುತ್ತಿರುವ ಪ.ಪೂ. ವಿದ್ಯಾರ್ಥಿಗಳ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯ ಬಾಲ ಕರ ಹಾಗೂ ಬಾಲಕಿಯರ ವಿಭಾಗಗಳಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಂಡಗಳು ಸೆಮಿಫೈನಲ್ ಪ್ರವೇಶಿಸಿವೆ.
ಬಾಲಕಿಯರ ಕ್ವಾರ್ಟರ್ ಫೈನ ಲ್ನಲ್ಲಿ ಉಡುಪಿ ತಂಡ ಗದಗ ತಂಡದ ವಿರುದ್ಧ 25-17, 25-15 ಅಂತರದಿಂದ; ದ.ಕ. ತಂಡ ಬೆಳಗಾವಿ ವಿರುದ್ಧ 24-26, 25-15, ಟೈ ಬ್ರೇಕರ್ನಲ್ಲಿ 15-6ರಿಂದ ಜಯ ಸಾಧಿಸಿತು.
ಸೆಮಿಫೈನಲ್ನಲ್ಲಿ ಉಡುಪಿಯ ಬಾಲಕಿಯರ ತಂಡ ವಿಜಯನಗರ ತಂಡವನ್ನು, ದ.ಕ. ತಂಡ ಮೈಸೂರು ತಂಡವನ್ನು ಎದುರಿಸಲಿದೆ.
ಬಾಲಕರ ವಿಭಾಗ
ಬಾಲಕರ ವಿಭಾಗದಲ್ಲಿ ಉಡುಪಿ ತಂಡ ಚಾಮರಾಜನಗರ ತಂಡದ ವಿರುದ್ಧ 25-20, 24-26, ಟೈ ಬ್ರೇಕರ್ನಲ್ಲಿ 15-13ರಿಂದ ಜಯ ಸಾಧಿಸಿತು. ದ.ಕ. ತಂಡ ಚಿಕ್ಕಮ ಗಳೂರು ತಂಡದ ಎದುರು 25-18, 25-18 ಅಂತರದಿಂದ ಗೆಲುವು ಕಂಡಿತು. ವಿಜೇತ ತಂಡಗಳು ಕ್ರಮವಾಗಿ ತುಮಕೂರು ಹಾಗೂ ಮೈಸೂರು ತಂಡದ ವಿರುದ್ಧ ಸೆಮಿಫೈನಲ್ ಆಡಲಿವೆ. ಸೆಮಿಫೈನಲ್, ಫೈನಲ್ ಪಂದ್ಯಗಳು ಡಿ. 10ರಂದು ನಡೆಯಲಿವೆ.
ಗಮನಸೆಳೆದ ಕುಟ್ಟಪ್ಪ
ಅಪಘಾತದಲ್ಲಿ ಕಾಲು ಕಳೆದುಕೊಂಡ ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಆಟಗಾರ ಕುಟ್ಟಪ್ಪ ಅವರು ಕೃತಕ ಕಾಲಿನೊಂದಿಗೆ ಅದ್ಭುತ ಆಟ ಪ್ರದರ್ಶಿಸಿ, ಎಲ್ಲರ ಪ್ರಶಂಸೆಗೆ ಪಾತ್ರರಾದರು.
ಪ್ರಧಾನ ತೀರ್ಪುಗಾರರಾಗಿ ಉಡುಪಿ ಜಿಲ್ಲಾ ಪ.ಪೂ. ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಜೀವನ್ ಕುಮಾರ್ ಶೆಟ್ಟಿ ಹಾಗೂ ಇತರ ತೀರ್ಪುಗಾರರು ಭಾಗವಹಿಸಿ ದ್ದರು. ಈ ಸಂದರ್ಭದಲ್ಲಿ ಪ.ಪೂ. ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಎಕ್ಸಲೆಂಟ್ ಪ.ಪೂ. ಕಾಲೇಜಿನ ಪ್ರಾಂಶುಪಾಲ ಡಾ| ರಮೇಶ್ ಶೆಟ್ಟಿ, ಸುಜ್ಞಾನ್ ಎಜು ಕೇಶನ್ ಟ್ರಸ್ಟ್ನ ಕಾರ್ಯದರ್ಶಿ ಪ್ರತಾಪ್ಚಂದ್ರ ಶೆಟ್ಟಿ, ಕೋಶಾಧಿಕಾರಿ ಭರತ್ ಶೆಟ್ಟಿ, ಉಪನ್ಯಾಸಕ ವೃಂದ, ವಿವಿಧ ಕಾಲೇಜುಗಳ ದೈಹಿಕ ಶಿಕ್ಷಣ ಶಿಕ್ಷಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ