ಯುವರಾಜ್ ಸಿಂಗ್ ರ ಆರು ಸಿಕ್ಸರ್ ಗಳು ನನ್ನನ್ನು….. : ಸ್ಟುವರ್ಟ್ ಬ್ರಾಡ್


Team Udayavani, Jul 30, 2023, 4:40 PM IST

ಯುವರಾಜ್ ಸಿಂಗ್ ರ ಆರು ಸಿಕ್ಸರ್ ಗಳು ನನ್ನನ್ನು….. : ಸ್ಟುವರ್ಟ್ ಬ್ರಾಡ್

ಲಂಡನ್: 2007 ರ ಟಿ20 ವಿಶ್ವಕಪ್‌ ನಲ್ಲಿ ಯುವರಾಜ್ ಸಿಂಗ್ ಅವರ ತಮ್ಮ ಓವರ್ ನಲ್ಲಿ ಚಚ್ಚಿದ ಆರು ಸಿಕ್ಸರ್‌ ಗಳು ನನ್ನನ್ನು ಇಂದಿನ ಕಠಿಣ ಸ್ಪರ್ಧಿಯಾಗಿಸಿತು ಎಂದು ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ಹೇಳಿದರು.

ಆ್ಯಶಸ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವೃತ್ತಿಜೀವನದ ಆರಂಭದಲ್ಲಿ ಈ ಘಟನೆ ಕಠಿಣ ಕಲಿಕೆಯ ಅನುಭವ ಮೂಡಿಸಿತ್ತು. ಅವರನ್ನು ಇಂದಿನ ಸ್ಪರ್ಧಿಯಾಗಿ ರೂಪಿಸಲು ಸಹಾಯ ಮಾಡಿತು ಎಂದರು.

ಆ್ಯಶಸ್ ಮೂರನೇ ದಿನದಾಟದ ಬಳಿಕ ಸ್ಟುವರ್ಟ್ ಬ್ರಾಡ್ ಅವರು ಕ್ರಿಕೆಟ್ ಜೀವನಕ್ಕೆ ತೆರೆ ಎಳೆಯುವ ನಿರ್ಧಾರ ಮಾಡಿದರು.

“ಅದು ನಡೆಯಬಾರದಿತ್ತು ಎಂದು ನಾನು ಬಯಸುತ್ತೇನೆ. ನನಗೆ ನಿಜವಾಗಿಯೂ ಸಹಾಯ ಮಾಡಿದ್ದು ಆ ಪಿಚ್ ಡೆಡ್ ರಬ್ಬರ್ ಆಗಿತ್ತು. ಇದು ನನ್ನನ್ನು ಇಂದಿಗೂ ನಾನು ಪ್ರತಿಸ್ಪರ್ಧಿಯನ್ನಾಗಿ ಮಾಡಲು ಪ್ರೇರೆಪಿಸಿತು. ನಾನು ಮುಂದೆ ಬೆಳೆಯುಂತೆ ಮಾಡಿತು” ಎಂದು ಬ್ರಾಡ್ ಹೇಳಿದ್ದಾರೆ.

2007ರ ಟಿ ವಿಶ್ವಕಪ್ ಕೂಟದಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸ್ಟುವರ್ಟ್ ಬ್ರಾಡ್ ಅವರ ಒಂದು ಓವರ್ ನಲ್ಲಿ ಎಲ್ಲಾ ಆರು ಎಸೆತಗಳನ್ನು ಯುವರಾಜ್ ಸಿಂಗ್ ಸಿಕ್ಸರ್ ಗೆ ಅಟ್ಟಿದ್ದರು. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಓವರ್ ನ ಎಲ್ಲಾ ಆರು ಎಸೆತಕ್ಕೆ ಆರು ಸಿಕ್ಸರ್ ಬಾರಿಸಿದ ಪ್ರಥಮ ನಿದರ್ಶನವಾಗಿತ್ತು.

ಇಂಗ್ಲೆಂಡ್ ಲೆಜೆಂಡ್: 600 ಟೆಸ್ಟ್ ವಿಕೆಟ್‌ ಗಳನ್ನು ಪಡೆದ ಇಬ್ಬರು ವೇಗಿಗಳಲ್ಲಿ ಒಬ್ಬರಾದ ಬ್ರಾಡ್, ಆ್ಯಶಸ್‌ ನಲ್ಲಿ 150+ ಟೆಸ್ಟ್ ವಿಕೆಟ್‌ಗಳನ್ನು ಗಳಿಸಿದ ಮೂರನೇ ಬೌಲರ್ ಆಗಿದ್ದಾರೆ. ಅವರು ಟೆಸ್ಟ್ ಕ್ರಿಕೆಟ್‌ ನಲ್ಲಿ ಐದನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ತಮ್ಮ ವೃತ್ತಿಜೀವನವನ್ನು ಮುಗಿಸುತ್ತಿದ್ದಾರೆ.

ಒಟ್ಟು 165 ಟೆಸ್ಟ್ ಪಂದ್ಯಗಳನ್ನು ಆಡಿರುವ ಬ್ರಾಡ್ 602 ವಿಕೆಟ್ ಕಬಳಿಸಿದ್ದಾರೆ. ಅಲ್ಲದೆ ಆರಂಭಿಕ ದಿನಗಳಲ್ಲಿ ತನ್ನ ಬ್ಯಾಟಿಂಗ್ ಗೂ ಹೆಸರಾಗಿದ್ದ ಬ್ರಾಡ್, 3656 ರನ್ ಕೂಡಾ ಗಳಿಸಿದ್ದಾರೆ. ಪಾಕಿಸ್ಥಾನ ವಿರುದ್ದದ 167 ರನ್ ಗಳಿಸಿದ್ದು ಅವರು ಜೀವನಶ್ರೇಷ್ಠ ಬ್ಯಾಟಿಂಗ್ ಸಾಧನೆ. 2016ರಲ್ಲಿ ಕೊನೆಯದಾಗಿ ಏಕದಿನ ಪಂದ್ಯವಾಡಿದ್ದ ಬ್ರಾಡ್ 178 ವಿಕೆಟ್ ಕಬಳಿಸಿದ್ದಾರೆ. ಟಿ20 ಕ್ರಿಕೆಟ್ ನಲ್ಲಿ 65 ವಿಕೆಟ್ ಕಿತ್ತಿದ್ದಾರೆ.

ಟಾಪ್ ನ್ಯೂಸ್

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.