ಸುದಿರ್ಮನ್‌ ಕಪ್‌: ಭಾರತ ಹೊರಕ್ಕೆ

ಚೀನ ವಿರುದ್ಧ 0-5 ಸೋಲು ; ವರ್ಮ, ಸೈನಾಗೆ ಆಘಾತ

Team Udayavani, May 23, 2019, 11:00 PM IST

SAMEER-VARMA

ಹೊಸದಿಲ್ಲಿ: ಚೀನ ವಿರುದ್ಧ 0-5 ಅಂತರದಿಂದ ಹೀನಾಯ ಸೋಲು ಕಂಡ ಭಾರತವು ಸುದಿರ್ಮನ್‌ ಕಪ್‌ ಕೂಟದ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಿಂದ ಹೊರಬಿತ್ತು.


“ಡಿ’ ಬಣದ ಮೊದಲ ಪಂದ್ಯಾಟದಲ್ಲಿ ಮಲೇಶ್ಯ ವಿರುದ್ಧ 2-3 ಅಂತರದಿಂದ ಸೋತ ಭಾರತಕ್ಕೆ ಚೀನ ವಿರುದ್ಧ ಗೆಲ್ಲಲೇಬೇಕಾದ ಒತ್ತಡವಿತ್ತು. ಆದರೆ 10 ಬಾರಿಯ ಚಾಂಪಿಯನ್‌ ಚೀನ ಅದ್ಭುತ ರೀತಿಯಲ್ಲಿ ಆಡಿ ಭಾರತಕ್ಕೆ ಪ್ರಬಲ ಹೊಡೆತ ನೀಡಿತು. ಚೀನ ಆಟಗಾರರ ನಿಖರ ಆಟಕ್ಕೆ ಉತ್ತರಿಸಲು ಭಾರತದ ಯಾವುದೇ ಆಟಗಾರರಿಗೆ ಸಾಧ್ಯವಾಗಲಿಲ್ಲ.

ಭಾರತದ ಮಿಕ್ಸೆಡ್‌ ಡಬಲ್ಸ್‌ ಜೋಡಿ ಪ್ರಣವ್‌ ಜೆರ್ರಿ ಚೋಪಾx ಮತ್ತು ಎನ್‌. ಸಿಕ್ಕಿ ರೆಡ್ಡಿ ಅವರು ಮತ್ತೂಮ್ಮೆ ಚೀನದ ವಾಂಗ್‌ ಯಿಲ್ಯು ಮತ್ತು ಹುವಾಂಗ್‌ ಡಾಂಗ್‌ಪಿಂಗ್‌ ಅವರಿಗೆ 5-21, 11-21 ಗೇಮ್‌ಗಳಿಂದ ಸುಲಭವಾಗಿ ಶರಣಾದರು.

ಅಭ್ಯಾಸದ ವೇಳೆ ಗಾಯಗೊಂಡ ಕಿದಂಬಿ ಶ್ರೀಕಾಂತ್‌ ಬದಲು ಸಿಂಗಲ್ಸ್‌ನಲ್ಲಿ ಆಡಲಿಳಿದ ಸಮೀರ್‌ ವರ್ಮ ಒಲಿಂಪಿಕ್‌ ಚಾಂಪಿಯನ್‌ ಚೆನ್‌ ಲಾಂಗ್‌ ವಿರುದ್ಧ ಜಯಕ್ಕಾಗಿ ದೀರ್ಘ‌ ಹೋರಾಟ ನಡೆಸಿದರು. ಮೊದಲ ಗೇಮ್‌ನಲ್ಲಿ 17-21ರಿಂದ ಸೋತರೂ ವರ್ಮ ದ್ವಿತೀಯ ಗೇಮ್‌ನಲ್ಲಿ ಇನ್ನಷ್ಟು ಛಲದಿಂದ ಆಡಿದರು. ಆದರೂ ಒಲಿಂಪಿಕ್‌ ಜಾಂಪಿಯನ್‌ ಲಾಂಗ್‌ 22-20ರಿಂದ ಪಂದ್ಯ ಗೆಲ್ಲಲು ಯಶಸ್ವಿಯಾಗಿ ಚೀನಕ್ಕೆ 2-0 ಮುನ್ನಡೆ ಒದಗಿಸಿದರು.

ಸಾತ್ವಿಕ್‌ರಾಜ್‌ ರಾಂಕಿರೆಡ್ಡಿ ಮತ್ತು ಚಿರಾಗ್‌ ಶೆಟ್ಟಿ ಅವರಿಂದಲೂ ಭಾರತಕ್ಕೆ ಮುನ್ನಡೆ ಒದಗಿಸಲು ಸಾಧ್ಯವಾಗಲಿಲ್ಲ. ಮೂರು ಗೇಮ್‌ಗಳ ಹೋರಾಟದಲ್ಲಿ ಅವರು ಹಾನ್‌ ಚೆಂಗ್‌ಕಾಯ್‌ ಮತ್ತು ಝೋ ವಿರುದ್ಧ 21-18, 15-21, 17-21 ಗೇಮ್‌ಗಳಿಂದ ಸೋತರು.

ನಿರಂತರ ಮೂರು ಪಂದ್ಯ ಸೋತ ಭಾರತಕ್ಕೆ ಸೈನಾ ನೆಹ್ವಾಲ್‌ ಕೂಡ ಆಸರೆಯಾಗಿ ನಿಲ್ಲಲಿಲ್ಲ. ಅವರು ಆಲ್‌ ಇಂಗ್ಲೆಂಡ್‌ ಜಾಂಪಿಯನ್‌ ಚೆನ್‌ ಯುಫೆಯಿ ಅವರಿಗೆ 33 ನಿಮಿಷಗಳ ಕಾದಾಟದಲ್ಲಿ 12-21, 17-21 ಗೇಮ್‌ಗಳಿಂದ ಶರಣಾದರು.

ವನಿತಾ ಡಬಲ್ಸ್‌ನಲ್ಲಿ ಅಶ್ವಿ‌ನಿ ಪೊನ್ನಪ್ಪ ಮತ್ತು ಸಿಕ್ಕಿ ಅವರು ಚೆನ್‌ ಕ್ವಿಂಗ್‌ಚೆನ್‌ ಮತ್ತು ಜಿಯಾ ಯಿಫಾನ್‌ ಅವರಿಗೆ 12-21, 15-21 ಗೇಮ್‌ನಿಂದ ಸೋತರು.

2017ರಲ್ಲಿ ಕ್ವಾರ್ಟರ್‌ಫೈನಲ್‌
ಭಾರತ ಈ ಹಿಂದೆ 2011 ಮತ್ತು 2017ರಲ್ಲಿ ನಡೆದ ಸುದೀರ್ಮನ್‌ ಕಪ್‌ ಕೂಟದಲ್ಲಿ ಕ್ವಾರ್ಟರ್‌ಫೈನಲ್‌ ಹಂತ ತಲುಪಿತ್ತು. ಈ ಬಾರಿ ಬಣ ಹಂತದಲ್ಲಿ ಆಡಿದ ಎರಡು ಪಂದ್ಯಾಟದಲ್ಲಿ ಸೋತು ಕೂಟದಿಂದ ನಿರ್ಗಮಿಸಿದೆ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.