ಸುಲ್ತಾನ್‌ ಅಜ್ಲಾನ್‌ ಷಾ ಹಾಕಿ: ಭಾರತದಿಂದ ಉತ್ತಮ ಹೋರಾಟ; ಸರ್ದಾರ್‌


Team Udayavani, Mar 1, 2018, 6:55 AM IST

Sardar-Singh-282015.jpg

ಹೊಸದಿಲ್ಲಿ: ಶನಿವಾರದಿಂದ ಮಲೇಶ್ಯದಲ್ಲಿ ಆರಂಭವಾಗಲಿರುವ ಪ್ರತಿಷ್ಠಿತ ಸುಲ್ತಾನ್‌ ಅಜ್ಲಾನ್‌ ಷಾ ಕಪ್‌ ಹಾಕಿ ಪಂದ್ಯಾವಳಿಯಲ್ಲಿ ಭಾರತ ಉತ್ತಮ ಹೋರಾಟ ನೀಡಲಿದೆ ಎಂದು ನಾಯಕ ಸರ್ದಾರ್‌ ಸಿಂಗ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಕೆಲವು ವಿದೇಶಿ ಸರಣಿಗಳಲ್ಲಿ ತಂಡ ಗಮನಾರ್ಹ ಪ್ರದರ್ಶನ ನೀಡಿದ್ದೇ ಸರ್ದಾರ್‌ ಅವರ ಆತ್ಮವಿಶ್ವಾಸಕ್ಕೆ ಕಾರಣ. ಭಾರತ ತನ್ನ ಶನಿವಾರದ ಆರಂಭಿಕ ಪಂದ್ಯದಲ್ಲಿ ಒಲಿಂಪಿಕ್‌ ಚಾಂಪಿಯನ್‌ ಆರ್ಜೆಂಟೀನಾವನ್ನು ಎದುರಿಸಲಿದೆ. ವಿಶ್ವದ ನಂ.1 ತಂಡವಾದ ಆಸ್ಟ್ರೇಲಿಯ ಕೂಡ ಕಣದಲ್ಲಿದೆ. ಇಂಗ್ಲೆಂಡ್‌, ಅಯರ್‌ಲ್ಯಾಂಡ್‌ ಮತ್ತು ಆತಿಥೇಯ ಮಲೇಶ್ಯ ಈ ಕೂಟದಲ್ಲಿ ಪಾಲ್ಗೊಳ್ಳಲಿರುವ ಇತರ ತಂಡಗಳು.

“ಪಂದ್ಯಾವಳಿಯನ್ನು ಗೆಲುವಿನೊಂದಿಗೆ ಆರಂಭಿಸುವುದು ಮುಖ್ಯ. ಇದು ನಮ್ಮ ಮೊದಲ ಗುರಿಯೂ ಹೌದು. ಆರ್ಜೆಂಟೀನಾ ವಿರುದ್ಧ ಉತ್ತಮ ಪ್ರದರ್ಶನ ನೀಡಿದರೆ ತಂಡದ ಆತ್ಮವಿಶ್ವಾಸ ಖಂಡಿತ ವೃದ್ಧಿಯಾಗಲಿದೆ. ಫೈನಲ್‌ ತಲುಪಬೇಕಾದರೆ ಗ್ರೂಪ್‌ ಹಂತದ ಪ್ರತಿಯೊಂದು ಪಂದ್ಯವೂ ಮುಖ್ಯ. ಹಿಂದೆ ನಾವು ಆಸ್ಟ್ರೇಲಿಯ, ಇಂಗ್ಲೆಂಡ್‌ ತಂಡಗಳನ್ನು ಸೋಲಿಸಿದ್ದೇವೆ. ಆರ್ಜೆಂಟೀನಾವನ್ನೂ ಮಣಿಸಿದ್ದೇವೆ. ತಂಡದ ಯೋಜನೆ ಹಾಗೂ ಕಾರ್ಯತಂತ್ರವನ್ನು ಪರಿಪೂರ್ಣ ರೀತಿಯಲ್ಲಿ ಜಾರಿಗೆ ತರುವುದು ಅತ್ಯಗತ್ಯ’ ಎಂದು ತಂಡ ಮಲೇಶ್ಯಕ್ಕೆ ವಿಮಾನವೇರುವ ಮುನ್ನ ಸರ್ದಾರ್‌ ಸಿಂಗ್‌ ಮಾಧ್ಯಮದವರಲ್ಲಿ ಹೇಳಿದರು.

ಕಳೆದ ಸಲದ ಸುಲ್ತಾನ್‌ ಅಜ್ಲಾನ್‌ ಷಾ ಹಾಕಿ ಪಂದ್ಯಾವಳಿಯಲ್ಲಿ ಭಾರತ 4-0 ಅಂತರದಿಂದ ನ್ಯೂಜಿಲ್ಯಾಂಡನ್ನು ಮಣಿಸಿ ತೃತೀಯ ಸ್ಥಾನ ಪಡೆದಿತ್ತು. ಆಸ್ಟ್ರೇಲಿಯವನ್ನು 4-3ರಿಂದ ಉರುಳಿಸಿದ ಇಂಗ್ಲೆಂಡ್‌ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು.

2016ರ ಫೈನಲ್‌ನಲ್ಲಿ ಆಸ್ಟ್ರೇಲಿಯದ ಕೈಯಲ್ಲಿ 0-4 ಗೋಲುಗಳ ಹೊಡೆತ ಅನುಭವಿಸಿದ ಭಾರತ ರನ್ನರ್ ಅಪ್‌ ಆಗಿತ್ತು. ಆಗಲೂ ಮಿಡ್‌ ಫೀಲ್ಡರ್‌ ಸರ್ದಾರ್‌ ಸಿಂಗ್‌ ಅವರೇ ಭಾರತ ತಂಡದ ನಾಯಕರಾಗಿದ್ದರು.

ಭಾರತದ ಪಂದ್ಯಗಳು
ಆರ್ಜೆಂಟೀನಾವನ್ನು ಎದುರಿಸಿದ ಬಳಿಕ ಭಾರತ ತಂಡ ಇಂಗ್ಲೆಂಡ್‌ (ಮಾ. 4), ಆಸ್ಟ್ರೇಲಿಯ (ಮಾ. 6), ಮಲೇಶ್ಯ (ಮಾ. 7) ಮತ್ತು ಅಯರ್‌ಲ್ಯಾಂಡ್‌ (ಮಾ. 9) ವಿರುದ್ಧ ಲೀಗ್‌ ಪಂದ್ಯಗಳನ್ನು ಆಡಲಿದೆ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.