ಟಿ20 ತಂಡದ ನಾಯಕತ್ವಕ್ಕೆ ಹೊಸ ಹೆಸರು ಸೂಚಿಸಿದ ಸುನೀಲ್ ಗಾವಸ್ಕರ್
Team Udayavani, Sep 17, 2021, 10:03 AM IST
ಮುಂಬೈ: ಹಲವು ಗುಮಾನಿಗಳ ಬಳಿಕ ಭಾರತದ ಮೂರು ಮಾದರಿ ಕ್ರಿಕೆಟ್ ತಂಡದ ನಾಯಕನಾಗಿದ್ದ ವಿರಾಟ್ ಕೊಹ್ಲಿ ಮಹತ್ವದ ನಿರ್ಧಾರವೊಂದನ್ನು ಘೋಷಣೆ ಮಾಡಿದ್ದಾರೆ. ಮುಂದಿನ ಟಿ20 ವಿಶ್ವಕಪ್ ಬಳಿಕ ಟಿ20 ತಂಡದ ನಾಯಕತ್ವವನ್ನು ತ್ಯಜಿಸಲಿದ್ದೇನೆ ಎಂದು ವಿರಾಟ್ ಗುರುವಾರ ಹೇಳಿದ್ದಾರೆ.
ಇದೀಗ ಮುಂದಿನ ನಾಯಕನ ಬಗ್ಗೆ ಚರ್ಚೆ ಆರಂಭವಾಗಿದೆ. ಸಹಜವಾಗಿಯೇ ಉಪ ನಾಯಕ ರೋಹಿತ್ ಶರ್ಮಾ ಹೆಸರು ಮುಂಚೂಣಿಯಲ್ಲಿದೆ. ಮುಂಬೈ ಇಂಡಿಯನ್ಸ್ ತಂಡವನ್ನು ಐದು ಬಾರಿ ಚಾಂಪಿಯನ್ ಮಾಡಿದ ರೋಹಿತ್ ಟಿ20 ತಂಡದ ನಾಯಕತ್ವಕ್ಕೆ ಸಹಜವಾಗಿಯೇ ಪ್ರಬಲ ಸ್ಪರ್ಧಿ. ಆದರೆ 34 ವರ್ಷದ ರೋಹಿತ್ ಇನ್ನೆಷ್ಟು ವರ್ಷ ಆಡುತ್ತಾರೆ ಎನ್ನುವುದೇ ಇಲ್ಲಿ ಅವರ ಆಯ್ಕೆಗೆ ಅಡಚಣೆಯಾಗವಹುದು ಎನ್ನುವುದು ಹಲವರ ವಾದ.
ಭಾರತದ ಮಾಜಿ ನಾಯಕ ಸುನೀಲ್ ಗಾವಸ್ಕರ್ ಕೂಡಾ ಈ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸ್ಪೋರ್ಟ್ಸ್ ತಕ್ ಜೊತೆಗೆ ಮಾತನಾಡಿದ ಅವರು, ಭವಿಷ್ಯದ ಬಗ್ಗೆ ಯೋಚನೆ ಮಾಡುವುದಾದರೆ ಕೆ.ಎಲ್.ರಾಹುಲ್ ಟಿ20 ತಂಡದ ನಾಯಕತ್ವಕ್ಕೆ ಸೂಕ್ತ ವ್ಯಕ್ತಿ ಎಂದಿದ್ದಾರೆ.
“ನೀವು ಹೊಸ ನಾಯಕನ ಬಗ್ಗೆ ಯೋಚಿಸುತ್ತಿದ್ದರೆ, ಕೆಎಲ್ ರಾಹುಲ್ ಅವರನ್ನು ನೋಡಬಹುದು ಎಂದು ನಾನು ಭಾವಿಸುತ್ತೇನೆ. ಅವರ ಕಾರ್ಯಕ್ಷಮತೆ ತುಂಬಾ ಚೆನ್ನಾಗಿದೆ. ಇಂಗ್ಲೆಂಡಿನಲ್ಲಿಯೂ ಅವರ ಬ್ಯಾಟಿಂಗ್ ತುಂಬಾ ಚೆನ್ನಾಗಿತ್ತು. ಅವರು ಐಪಿಎಲ್ ಮತ್ತು 50 ಓವರ್ಗಳ ಕ್ರಿಕೆಟ್ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಅವರನ್ನು ಉಪನಾಯಕನನ್ನಾಗಿ ಮಾಡಬಹುದು” ಎಂದು ಸುನೀಲ್ ಗಾವಸ್ಕರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ