ಇವರಿಬ್ಬರಿಗೆ ಇನ್ನು ಉಳಿದಿರುವುದು ಒಂದೇ ಇನ್ನಿಂಗ್ಸ್..: ಎಚ್ಚರಿಕೆ ನೀಡಿದ ಗವಾಸ್ಕರ್
Team Udayavani, Jan 4, 2022, 4:24 PM IST
ಮುಂಬೈ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯದ ಜೋಹಾನ್ಸ್ ಬರ್ಗ್ ನ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡ ಕೇವಲ 202 ರನ್ ಗಳಿಗೆ ಗಂಟುಮೂಟೆ ಕಟ್ಟಿದೆ. ಹಂಗಾಮಿ ನಾಯಕ ಕೆ ಎಲ್ ರಾಹುಲ್ ಮತ್ತು ಅಶ್ವಿನ್ ಹೊರತುಪಡಿಸಿ ಉಳಿದ ಯಾವುದೇ ಆಟಗಾರನ ಬ್ಯಾಟ್ ನಿಂದ ನಿರೀಕ್ಷಿತ ರನ್ ಬರಲಿಲ್ಲ.
ಟೆಸ್ಟ್ ಸ್ಪೆಷಲಿಸ್ಟ್ ಗಳಾದ ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯ ರಹಾನೆ ಕಳಪೆ ಫಾರ್ಮ್ ಮತ್ತೆ ಮುಂದುವರಿದಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಪೂಜಾರ ಮೂರು ರನ್ ಗಳಿಸಿದರೆ, ರಹಾನೆ ಗೋಲ್ಡನ್ ಡಕ್ ಗೆ ಬಲಿಯಾದರು.
ಮಾಜಿ ಆಟಗಾರ ಸುನೀಲ್ ಗಾವಸ್ಕರ್ ಈ ಬಗ್ಗೆ ಮಾತನಾಡಿದ್ದು, “ಪೂಜಾರ ಮತ್ತು ರಹಾನೆಗೆ ತಮ್ಮ ಕ್ರಿಕೆಟ್ ಜೀವನ ಉಳಿಸಿಕೊಳ್ಳಲು ಕೇವಲ ಒಂದು ಇನ್ನಿಂಗ್ಸ್ ಬಾಕಿ ಉಳಿದಿದೆ” ಎಂದಿದ್ದಾರೆ.
ಇದನ್ನೂ ಓದಿ:ಜೋಹಾನ್ಸ್ ಬರ್ಗ್ ಟೆಸ್ಟ್: ರಬಾಡಾ, ಅಂಪೈರ್ ಗೆ ಕ್ಷಮೆ ಕೇಳಿದ ಕೆ.ಎಲ್.ರಾಹುಲ್
“ತಂಡದಲ್ಲಿ ಅವರಿಬ್ಬರ ಸ್ಥಾನದ ಕುರಿತು ಈಗಾಗಲೇ ಮಾತುಗಳು ಆರಂಭವಾಗಿದೆ. ಬಹುಶಃ ಇಬ್ಬರಿಗೂ ಇನ್ನು ಒಂದು ಇನ್ನಿಂಗ್ಸ್ ಉಳಿದಿದೆ. ತಮ್ಮ ಕ್ರಿಕೆಟ್ ಜೀವನವನ್ನು ಉಳಿಸಿಕೊಳ್ಳಲು ಪೂಜಾರ ಮತ್ತು ರಹಾನೆ ಆ ಒಂದು ಇನ್ನಿಂಗ್ಸ್ ನಲ್ಲಿ ರನ್ ಗಳಿಸಬೇಕಾಗಿದೆ” ಎಂದು ಗಾವಸ್ಕರ್ ಅಭಿಪ್ರಾಯಪಟ್ಟಿದ್ದಾರೆ.
ಪೂಜಾರ ಮತ್ತು ರಹಾನೆ ಇಬ್ಬರೂ ಕಳಪೆ ಫಾರ್ಮ್ ನಲ್ಲಿದ್ದಾರೆ. ಪೂಜಾರ 2019ರಿಂದ ಒಂದೂ ಶತಕ ಗಳಿಸಿಲ್ಲ. ಈ ಪಂದ್ಯದಲ್ಲಿ ವಿರಾಟ್ ಬೆನ್ನುನೋವಿನ ಕಾರಣದಿಂದ ಆಡಲಿಳಿಯಲಿಲ್ಲ. ಹೀಗಾಗಿ ವಿರಾಟ್ ಬದಲಿಗೆ ಹನುಮ ವಿಹಾರಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಮುಂದಿನ ಪಂದ್ಯದಲ್ಲಿ ವಿರಾಟ್ ಗಾಗಿ ರಹಾನೆ ಅಥವಾ ಪೂಜಾರ ಸ್ಥಾನ ಕಳೆದುಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ