ವಿರಾಟ್ ಕೊಹ್ಲಿಯ ಆ ಒಂದು ಹೇಳಿಕೆಯೇ ಇಷ್ಟೆಲ್ಲಾ ಮನಸ್ಥಾಪಕ್ಕೆ ಕಾರಣ: ಸುನೀಲ್ ಗಾವಸ್ಕರ್
Team Udayavani, Dec 16, 2021, 10:12 AM IST
ಮುಂಬೈ: ಕಳೆದ ಕೆಲವು ದಿನಗಳಿಂದ ಭಾರತ ತಂಡದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಇದೀಗ ಮತ್ತೊಂದು ಹಂತ ತಲುಪಿದೆ. ಭಾರತ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದು, ಬದಲಾಗೊ ಬಿಸಿಸಿಐ ಗೆ ಟಾಂಗ್ ನೀಡಿದ್ದಾರೆ.
ನಾಯಕತ್ವ ಬದಲಾವಣೆ ಕುರಿತಂತೆ ಟಿ20 ನಾಯಕತ್ವ ಬಿಡದಂತೆ ಕೇಳಲಾಗಿತ್ತು ಎಂಬ ಗಂಗೂಲಿ ಹೇಳಿಕೆಗೆ ವಿರಾಟ್ ತಿರುಗೇಟು ನೀಡಿದ್ದು, ನನ್ನಲ್ಲಿ ಯಾವುದೇ ರೀತಿಯ ಮಾತುಕತೆ ನಡೆಸಿಲ್ಲ ಎಂದಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಬಳಿಕ ಮಾಜಿ ಆಟಗಾರ ಸುನೀಲ್ ಗಾವಸ್ಕರ್ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಈ ವರ್ಷದ ಸೆಪ್ಟೆಂಬರ್ ನಲ್ಲಿ ಟಿ 20 ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ಘೋಷಿಸಿದಾಗ ಕೊಹ್ಲಿ ನೀಡಿದ ಹೇಳಿಕೆಯೇ ಇದಕ್ಕೆ ಕಾರಣ ಎಂದು ಗಾವಸ್ಕರ್ ಹೇಳಿದ್ದಾರೆ. ಇಂಡಿಯಾ ಟುಡೆಯೊಂದಿಗೆ ಮಾತನಾಡಿದ ಗಾವಸ್ಕರ್, ಕೊಹ್ಲಿ ತನ್ನ ವಿದಾಯ ಪತ್ರದಲ್ಲಿ ಬರೆದ ಸಾಲಿನಿಂದ ಬಿಸಿಸಿಐನ ಉನ್ನತ ಅಧಿಕಾರಿಗಳ ಭಾವನೆಗಳಿಗೆ ನೋವುಂಟು ಮಾಡಿರಬಹುದು ಎಂದು ಹೇಳಿದ್ದಾರೆ.
ಇದನ್ನೂ ಓದಿ:ವನಿತಾ ಏಕದಿನ ವಿಶ್ವಕಪ್ -2022: ಭಾರತದ ಮೊದಲ ಎದುರಾಳಿ ಪಾಕಿಸ್ಥಾನ
ವಿದಾಯ ಪತ್ರದಲ್ಲಿ ವಿರಾಟ್, “ಇನ್ನು ಮುಂದೆ ನಾನು ಏಕದಿನ ಮತ್ತು ಟೆಸ್ಟ್ ತಂಡದ ನಾಯಕನಾಗಿ ಮುಂದುವರಿಯುತ್ತೇನೆ” ಎಂದು ಬರೆದುಕೊಂಡಿದ್ದರು.
“ಟೆಸ್ಟ್ ಮತ್ತು ಏಕದಿನ ತಂಡಗಳಿಗೆ ಅವರು ನಾಯಕರಾಗುತ್ತಾರೆ ಎಂಬ ಸಾಲುಗಳು ಅವರ ವಿರುದ್ಧ ಈ ಸಣ್ಣ ವಿರೋಧಿ ಭಾವನೆ ಇರಲು ಒಂದು ಕಾರಣವಾಗಿರಬಹುದು. ಇಲ್ಲದಿದ್ದರೆ ಅವರು ಎಲ್ಲೆಡೆ ಗೆದ್ದ ದಾಖಲೆಗಳನ್ನು ಹೊಂದಿದ್ದಾರೆ. ಅವರು ಐಸಿಸಿ ಈವೆಂಟ್ಗಳನ್ನು ಗೆದ್ದಿಲ್ಲ ಆದರೆ ದ್ವಿಪಕ್ಷೀಯ ಸರಣಿಗಳನ್ನು ಗೆದ್ದಿದ್ದಾರೆ. ತವರಿನಲ್ಲಿ ಅಥವಾ ವಿದೇಶದಲ್ಲಿ ಅವರು ಭಾರತ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ. ಹಾಗಾಗಿ ಅವರ ನಾಯಕತ್ವದ ಸಾಮರ್ಥ್ಯದ ಬಗ್ಗೆ ಜನರು ಅತೃಪ್ತಿ ಹೊಂದಲು ಯಾವುದೇ ಕಾರಣವಿಲ್ಲ. ಆದರೆ ಈ ಅತೃಪ್ತಿ ಪ್ರಾರಂಭವಾಗಲು ಒಂದು ಸಾಲು ಕಾರಣವಾಗಿರಬಹುದು ಎಂದು ನಾನು ಭಾವಿಸುತ್ತೇನೆ” ಎಂದು ಗಾವಸ್ಕರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’