BCCI ನೂತನ ಮಂಡಳಿಗೆ ವಿನೋದ್ ರಾಯ್ ಬಾಸ್; ಸಮಿತಿಯಲ್ಲಿ ಗುಹಾಗೂ ಸ್ಥಾನ
Team Udayavani, Jan 30, 2017, 4:38 PM IST
ನವದೆಹಲಿ: ಬಿಸಿಸಿಐನ ನೂತನ ಆಡಳಿತ ಮಂಡಳಿಗೆ ಮಾಜಿ ಸಿಎಜಿ ವಿನೋದ್ ಯಾರ್ ಅವರನ್ನು ಮುಖ್ಯಸ್ಥರನ್ನಾಗಿ ಸುಪ್ರೀಂಕೋರ್ಟ್ ಸೋಮವಾರ ನೇಮಕ ಮಾಡಿದೆ.
ಸುಪ್ರೀಂಕೋರ್ಟ್ ರಚಿಸಿರುವ ನಾಲ್ವರ ಸದಸ್ಯರ ಸಮಿತಿಯಲ್ಲಿ ರಾಯ್ ಅವರನ್ನು ಮುಖ್ಯಸ್ಥರನ್ನಾಗಿ ಮಾಡಿದ್ದು, ಹೆಸರಾಂತ ಇತಿಹಾಸಕಾರ ರಾಮಚಂದ್ರ ಗುಹಾ, ಮಾಜಿ ಕ್ರಿಕೆಟಿಗ ಡಯಾನಾ ಎಡುಲ್ಜಿ ಹಾಗೂ ಐಡಿಎಫ್ ಸಿ ಅಧಿಕಾರಿ ವಿಕ್ರಮ್ ಲಿಮಯೆ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಬಿಸಿಸಿಐ ಅರ್ಜಿ ವಿಚಾರಣೆ ವೇಳೆ, ಕ್ರೀಡಾ ಸಚಿವಾಲಯದ ಕಾರ್ಯದರ್ಶಿಯನ್ನು ಬಿಸಿಸಿಐನ ಸದಸ್ಯರನ್ನಾಗಿ ನೇಮಕ ಮಾಡಬೇಕೆಂಬ ಕೇಂದ್ರ ಸರ್ಕಾರದ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಬಿಸಿಸಿಐ ಕುರಿತು ಈ ಮೊದಲು ಸುಪ್ರೀಂಕೋರ್ಟ್ ನೀಡಿದ್ದ ತೀರ್ಪಿನಲ್ಲಿ ಬಿಸಿಸಿಐನಲ್ಲಿ ಸಚಿವರು ಮತ್ತು ಸರ್ಕಾರಿ ಅಧಿಕಾರಿಗಳು ಹುದ್ದೆ ಅಲಂಕರಿಸಬಾರದು ಎಂದು ಹೇಳಿತ್ತು.
ಅಷ್ಟೇ ಅಲ್ಲ ಬಿಸಿಸಿಐಗೆ ಅಮಿತಾಬ್ ಚೌಧರಿ, ಅನಿರುದ್ಧ ಚೌಧರಿಯನ್ನು ಸುಪ್ರೀಂಕೋರ್ಟ್ ಹೆಸರಿಸಿದ್ದು, ಫೆಬ್ರುವರಿ ಮೊದಲ ವಾರ ನಡೆಯಲಿರುವ ಐಸಿಸಿ ಸಭೆಗೆ ವಿಕ್ರಮ್ ಲಿಮಯೆ ಅವರು ಬಿಸಿಸಿಐ ಪ್ರತಿನಿಧಿಯಾಗಿ ಭಾಗವಹಿಸಯುವಂತೆ ನಿರ್ದೇಶನ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ