ಶ್ರೀಶಾಂತ್ ನಿಷೇಧ ವಿಚಾರ: ಬಿಸಿಸಿಐಗೆ ಸುಪ್ರೀಂ ನೋಟಿಸ್
Team Udayavani, Feb 6, 2018, 6:05 AM IST
ನವದೆಹಲಿ: ಕ್ರಿಕೆಟಿಗ ಶ್ರೀಶಾಂತ್ ಪ್ರಕರಣದಲ್ಲಿ ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ)ಗೆ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.
2013ರ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಬಿಸಿಸಿಐ ಶ್ರೀಶಾಂತ್ಗೆ ಆಜೀವ ನಿಷೇಧ ಹೇರಿತ್ತು. ಇದನ್ನು ಶ್ರೀಶಾಂತ್ ದಿಲ್ಲಿ ಅಧೀನ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ದರು. 2 ವರ್ಷದ ಹಿಂದೆ ಅವರನ್ನು ನ್ಯಾಯಾಲಯ ಧೋಷ ಮುಕ್ತರನ್ನಾಗಿ ಮಾಡಿತ್ತು. ಆದರೆ ಬಿಸಿಸಿಐ ಮಾತ್ರ ಇವರ ಮೇಲಿನ ನಿಷೇಧವನ್ನು ಹಿಂದಕ್ಕೆ ತೆಗೆದುಕೊಂಡಿರಲಿಲ್ಲ. ಅಷ್ಟೇ ಅಲ್ಲ ಇವರು ಇತ್ತೀಚೆಗೆ ಕೇರಳ ಹೈಕೋರ್ಟ್ನಲ್ಲಿ ಅರ್ಜಿ ಹಾಕಿ ನಿಷೇಧಕ್ಕೆ ಬಿಸಿಸಿಐ ಅಡ್ಡಿಪಡಿಸುತ್ತಿದೆ ಎಂದಿದ್ದರು. ಅಲ್ಲಿಯೂ ನ್ಯಾಯಾಲಯ ಶ್ರೀಶಾಂತ್ ಆಜೀವ ನಿಷೇಧವನ್ನು ಹಿಂದಕ್ಕೆ ರದ್ದುಗೊಳಿಸಿತ್ತು. ಆದರೆ ಬಿಸಿಸಿಐ ಅದನ್ನೂ ನಿರಾಕರಿಸಿತ್ತು. ಈ ನಡುವೆ ತನಗೆ ನ್ಯಾಯ ನೀಡಿ ಎಂದು ಶ್ರೀಶಾಂತ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾ.ದೀಪಕ್ ಮಿಶ್ರಾ ಒಳಗೊಂಡ ತ್ರಿಸದಸ್ಯ ಪೀಠ ಬಿಸಿಸಿಐಗೆ ನಾಲ್ಕು ವಾರಗಳ ಸಮಯ ನೀಡಿದೆ. ಇದರೊಳಗೆ ಉತ್ತರ ನೀಡುವಂತೆ ಬಿಸಿಸಿಐಗೆ ಸೂಚಿಸಿದೆ. ಬಿಸಿಸಿಐ ಪರ ಹಿರಿಯ ವಕೀಲ ಪರಾಗ್ ತ್ರಿಪಾಠಿ ನೋಟಿಸ್ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ