ರೈನಾ ಕಾರು ಅಪಘಾತ;ಅಪಾಯದಿಂದ ಪಾರು
Team Udayavani, Sep 13, 2017, 7:45 AM IST
ಕಾನ್ಪುರ: ಕ್ರಿಕೆಟಿಗ ಸುರೇಶ್ ರೈನಾ ಕಾರು ಅಪಘಾತವೊಂದಕ್ಕೆ ಸಿಲುಕಿದ್ದು, ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಉತ್ತರ ಪ್ರದೇಶದ ಇಟಾವಾದಲ್ಲಿ ಈ ಘಟನೆ ಸಂಭವಿಸಿತ್ತು. ಆಗ ಸ್ವತಃ ರೈನಾ ಅವರೇ ಕಾರು ಚಲಾಯಿಸುತ್ತಿದ್ದರು.
ದುಲೀಪ್ ಟ್ರೋಫಿ ಪಂದ್ಯದಲ್ಲಿ ಪಾಲ್ಗೊಳ್ಳಲು ಹೊಸದಿಲ್ಲಿಯಿಂದ ಕಾನ್ಪುರಕ್ಕೆ ತಮ್ಮ ರೇಂಜ್ ರೋವರ್ ಎಸ್ಯುವಿ ಕಾರಿನಲ್ಲಿ ಹೋಗುತ್ತಿದ್ದಾಗ ಕಾರಿನ ಚಕ್ರವೊಂದು ಸ್ಫೋಟಗೊಂಡು ಅಪಘಾತ ಸಂಭವಿಸಿದ್ದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಆಗ ರೈನಾ ನಿಧಾನ ಗತಿಯಲ್ಲಿ ಕಾರು ಚಲಾಯಿಸುತ್ತಿದ್ದುದರಿಂದ ಯಾವುದೇ ಅನಾಹುತ ಸಂಭವಿಸಲಿಲ್ಲ.
ಅಪಘಾತದ ಬಳಿಕ ಸುರೇಶ್ ರೈನಾ ಅವರನ್ನು ಬೇರೊಂದು ಕಾರಿನಲ್ಲಿ ಕಾನ್ಪುರಕ್ಕೆ ತೆರಳಲು ವ್ಯವಸ್ಥೆ ಮಾಡಲಾಯಿತು. ದುಲೀಪ್ ಟ್ರೋಫಿಯಲ್ಲಿ ಅವರು ಇಂಡಿಯಾ ಬ್ಲೂ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ