“ಮತ್ತೆ ಕಡೆಗಣನೆ..” ಭಾರತೀಯ ತಂಡ ಸೇರಲು ಈತ ಇನ್ನೆಷ್ಟು ಉತ್ತಮ ಪ್ರದರ್ಶನ ತೋರಬೇಕು?


Team Udayavani, Oct 27, 2020, 12:27 PM IST

“ಮತ್ತೆ ಕಡೆಗಣನೆ..” ಭಾರತೀಯ ತಂಡ ಸೇರಲು ಈತ ಇನ್ನೆಷ್ಟು ಉತ್ತಮ ಪ್ರದರ್ಶನ ತೋರಬೇಕು?

ಮುಂಬೈ: 13ನೇ ಆವೃತ್ತಿಯ ಐಪಿಎಲ್ ಕೊನೆಯ ಹಂತ ತಲುಪುತ್ತಿದೆ. ಕೆಲವು ನಿರೀಕ್ಷೆ ಮೂಡಿಸಿದ್ದ ಆಟಗಾರರು ವಿಫಲರಾದರೆ, ಕೆಲವು ಯುವ ಪ್ರತಿಭೆಗಳು ಮಿಂಚುತ್ತಿದ್ದಾರೆ. ಇದರ ನಡುವೆ ಮುಂದಿನ ಆಸ್ಟ್ರೇಲಿಯಾ ಸರಣಿಗೆ ಟೀಂ ಇಂಡಿಯಾದ ಆಯ್ಕೆ ಮಾಡಲಾಗಿದೆ. ಕನ್ನಡಿಗ ಕೆ ಎಲ್ ರಾಹುಲ್ ಅವರನ್ನು ನಿಗದಿತ ಮಾದರಿ ತಂಡಕ್ಕೆ ಉಪನಾಯಕನ್ನಾಗಿ ಆಯ್ಕೆ ಮಾಡಲಾಗಿದೆ.

ಈ ನಡುವೆ ಓರ್ವ ಭಾರತೀಯ ಪ್ರತಿಭೆಯ ಬಗ್ಗೆ ಚರ್ಚೆ ನಡೆಯುತ್ತಿದೆ. ಪ್ರಥಮ ದರ್ಜೆ ಕ್ರಿಕೆಟ್, ಐಪಿಎಲ್ ನಲ್ಲಿ ಎಷ್ಟೇ ಉತ್ತಮ ಪ್ರದರ್ಶನ ನೀಡಿದರೂ ಭಾರತೀಯ ತಂಡಕ್ಕೆ ಆಯ್ಕೆಯಾಗುತ್ತಿಲ್ಲ. ರಾಷ್ಟ್ರೀಯ ತಂಡದ ಆಯ್ಕೆಗಾರರು ಪದೇ ಪದೇ ಕಡೆಗಣಿಸುತ್ತಿದ್ದಾರೆ. ಆ ಆಟಗಾರನೇ ಸದ್ಯ ಮುಂಬೈ ಇಂಡಿಯನ್ಸ್ ಪರ ಆಡುತ್ತಿರುವ ಸೂರ್ಯಕುಮಾರ್ ಯಾದವ್.

30 ವರ್ಷದ ಮುಂಬೈ ಮೂಲದ ಆಟಗಾರ ಸೂರ್ಯಕುಮಾರ್ ಯಾದವ್ ಕಳೆದ ಕೆಲವು ವರ್ಷಗಳಿಂದ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಕಳೆದ ಕೆಲವು ಐಪಿಎಲ್ ನಲ್ಲೂ ಮಿಂಚು ಹರಿಸಿದ್ದಾರೆ. ಯಾವುದೇ ಕ್ರಮಾಂಕದಲ್ಲೂ ಆಡುವ ಸೂರ್ಯಕುಮಾರ್ ರತ್ತ ಮಾತ್ರ ರಾಷ್ಟ್ರೀಯ ತಂಡದ ಆಯ್ಕೆಗಾರರು ಬೆಳಕು ಹರಿಸುತ್ತಿಲ್ಲ.

ಸೂರ್ಯಕುಮಾರ್ ಯಾದವ್

ಸೂರ್ಯಕುಮಾರ್ ಕಡೆಗಣನೆ ಬಗ್ಗೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ್ರಿಕೆಟಿಗರಾದ ಹರ್ಭಜನ್ ಸಿಂಗ್ ಮತ್ತು ಮನೋಜ್ ತಿವಾರಿ ಕೂಡಾ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಆಸ್ಟ್ರೇಲಿಯ ಪ್ರವಾಸ : ರೋಹಿತ್‌ ಗೈರು, ರಾಹುಲ್‌ ಉಪನಾಯಕ

ಭಾರತ ಟಿ20 ತಂಡ: ವಿರಾಟ್‌ ಕೊಹ್ಲಿ (ನಾಯಕ), ಶಿಖರ್‌ ಧವನ್‌, ಮಾಯಾಂಕ್‌ ಅಗರ್ವಾಲ್‌, ಕೆ.ಎಲ್‌. ರಾಹುಲ್‌ (ಉಪನಾಯಕ), ಶ್ರೇಯಸ್‌ ಅಯ್ಯರ್‌, ಮನೀಷ್‌ ಪಾಂಡೆ, ಹಾರ್ದಿಕ್‌ ಪಾಂಡ್ಯ, ಸಂಜು ಸ್ಯಾಮ್ಸನ್‌, ರವೀಂದ್ರ ಜಡೇಜ, ವಾಷಿಂಗ್ಟನ್‌ ಸುಂದರ್‌, ಯಜುವೇಂದ್ರ ಚಹಲ್‌, ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್‌ ಶಮಿ, ನವದೀಪ್‌ ಸೈನಿ, ದೀಪಕ್‌ ಚಹರ್‌, ವರುಣ್‌ ಚಕ್ರವರ್ತಿ.

ಏಕದಿನ ತಂಡ: ವಿರಾಟ್‌ ಕೊಹ್ಲಿ (ನಾಯಕ), ಶಿಖರ್‌ ಧವನ್‌, ಶುಭಮನ್‌ ಗಿಲ್‌, ಕೆ.ಎಲ್‌. ರಾಹುಲ್‌ (ಉಪನಾಯಕ), ಶ್ರೇಯಸ್‌ ಅಯ್ಯರ್‌, ಮನೀಷ್‌ ಪಾಂಡೆ, ಹಾರ್ದಿಕ್‌ ಪಾಂಡ್ಯ, ಮಾಯಾಂಕ್‌ ಅಗರ್ವಾಲ್‌, ರವೀಂದ್ರ ಜಡೇಜ, ಯಜುವೇಂದ್ರ ಚಹಲ್‌, ಕುಲದೀಪ್‌ ಯಾದವ್‌, ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್‌ ಶಮಿ, ನವದೀಪ್‌ ಸೈನಿ, ಶಾರ್ದೂಲ್ ಠಾಕೂರ್‌.

ಟೆಸ್ಟ್‌ ತಂಡ: ವಿರಾಟ್‌ ಕೊಹ್ಲಿ (ನಾಯಕ), ಮಾಯಾಂಕ್‌ ಅಗರ್ವಾಲ್‌, ಪೃಥ್ವಿ ಶಾ, ಕೆ.ಎಲ್‌. ರಾಹುಲ್‌, ಚೇತೇಶ್ವರ್‌ ಪೂಜಾರ, ಅಜಿಂಕ್ಯ ರಹಾನೆ (ಉಪನಾಯಕ), ಹನುಮ ವಿಹಾರಿ, ಶುಭಮನ್‌ ಗಿಲ್‌, ವೃದ್ಧಿಮಾನ್‌ ಸಾಹಾ, ರಿಷಭ್‌ ಪಂತ್‌, ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್‌ ಶಮಿ, ಉಮೇಶ್‌ ಯಾದವ್‌, ನವದೀಪ್‌ ಸೈನಿ, ಕುಲದೀಪ್‌ ಯಾದವ್‌, ರವೀಂದ್ರ ಜಡೇಜ, ಆರ್‌. ಅಶ್ವಿ‌ನ್‌, ಮೊಹಮ್ಮದ್‌ ಸಿರಾಜ್‌.

ಟಾಪ್ ನ್ಯೂಸ್

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.