VIDEO: ಬಸ್ ನಲ್ಲಿ ಅರ್ಶದೀಪ್ ವಿರುದ್ಧ ಕೂಗಾಡಿದ ಸೂರ್ಯಕುಮಾರ್ ಯಾದವ್
Team Udayavani, Dec 16, 2023, 9:11 AM IST
ಜೋಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಭಾರತ ತಂಡವು ಟಿ20 ಸರಣಿಯನ್ನು ಸಮಬಲಗೊಳಿಸುವಲ್ಲಿ ಸಫಲವಾಗಿದೆ. ಅಂತಿಮ ಟಿ20 ಪಂದ್ಯದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಶತಕದ ನೆರವಿನಿಂದ ಭಾರತ ತಂಡ ಭರ್ಜರಿ ಗೆಲುವು ಸಾಧಿಸಿತ್ತು.
ಪಂದ್ಯದ ಬಳಿಕ ನಾಯಕ ಸೂರ್ಯ ಕುಮಾರ್, ಬೌಲರ್ ಅರ್ಶದೀಪ್ ಸಿಂಗ್ ವಿರುದ್ಧ ಕೋಪಗೊಂಡಿದ್ದಾರೆ. ಟೀಂ ಬಸ್ ನಲ್ಲಿ ಅರ್ಶದೀಪ್ ಕುಳಿತಿದ್ದರು. ಈ ವೇಳೆ ಬಂದ ಸೂರ್ಯಕುಮಾರ್ ಕೈಸನ್ನೆ ಮಾಡಿ ಎಚ್ಚರಿಕೆ ನೀಡಿದಂತೆ ಮಾತನಾಡಿದ್ದಾರೆ.
ಸೂರ್ಯಕುಮಾರ್ ಕೋಪಕ್ಕೆ ನಿಖರವಾದ ಕಾರಣ ತಿಳಿದಿಲ್ಲ. ಸೂರ್ಯಕುಮಾರ್ ಯಾದವ್ ಮತ್ತು ಅರ್ಶದೀಪ್ ಸಿಂಗ್ ನಡುವಿನ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.
Suryakumar Yadav intense reaction to Arshdeep Singh following the third T20I against South Africa 👀#SAvsIND #SuryakumarYadav #CricketTwitter pic.twitter.com/HvYLsyIcKQ
— OneCricket (@OneCricketApp) December 15, 2023
ಜೋಹಾನ್ಸ್ ಬರ್ಗ್ ನಲ್ಲಿ ನಡೆದಿದ್ದ ಮೂರನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಭಾರತ ತಂಡವು ಭರ್ಜರಿ ಗೆಲುವು ಸಾಧಿಸಿದೆ. ನಾಯಕ ಸೂರ್ಯಕುಮಾರ್ ಯಾದವ್ ಎಂಟು ಸಿಕ್ಸರ್ ನೆರವಿನಿಂದ ನೂರು ರನ್ ಗಳಿಸಿದ್ದರು.
ಟಿ20 ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸಿದ ಭಾರತ ಏಕದಿನ ಸರಣಿಗೆ ಸಿದ್ದವಾಗಿದೆ. ಮೂರು ಪಂದ್ಯಗಳ ಏಕದಿನ ಸರಣಿಯು ಡಿಸೆಂಬರ್ 17ರಂದು ಆರಂಭವಾಗಲಿದೆ. ಈ ಸರಣಿಯಲ್ಲಿ ಭಾರತ ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ