ಸುಶೀಲ್ ಕುಮಾರ್ ಬಂಧನ ಊಹಾಪೋಹ: ಅಧಿಕೃತ ಮಾಹಿತಿ ನೀಡಿದ ದೆಹಲಿ ಪೊಲೀಸರು
Team Udayavani, May 23, 2021, 11:19 AM IST
ಹೊಸದಿಲ್ಲಿ: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಬಂಧನಕ್ಕೆ ಸಂಬಂಧಿಸಿದಂತೆ ಉಂಟಾಗಿದ್ದ ಊಹಾಪೋಹಗಳಿಗೆ ದೆಹಲಿ ಪೊಲೀಸರು ತೆರೆ ಎಳೆದಿದ್ದಾರೆ.
ಕುಸ್ತಿಪಟು ಸುಶೀಲ್ ಕಮಾರ್ ಮತ್ತು ಆತನ ಸಹವರ್ತಿಯನ್ನು ಇಂದು ಮುಂಜಾನೆ ದೆಹಲಿಯ ಮುಂದ್ಕಾ ಪ್ರದೇಶದಲ್ಲಿ ಸೆರೆಹಿಡಿಯಲಾಗಿದೆ ಎಂದು ದೆಹಲಿ ಪೊಲೀಸರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಸ್ತಿ ಕೂಟದ ವೇಳೆ ಯುವ ಕುಸ್ತಿಪಟು ಸಾಗರ್ ರಾಣಾ ಅವರ ಕೊಲೆ ಪ್ರಕರಣದಲ್ಲಿ ಸುಶೀಲ್ ಕುಮಾರ್ ಹೆಸರು ಪ್ರಮುಖವಾಗಿ ಕೇಳಿಬಂದಿತ್ತು. ಘಟನೆ ನಡೆದ ದಿನದಿಂದಲೇ ನಾಪತ್ತೆಯಾಗಿದ್ದರು.
ಇದನ್ನೂ ಓದಿ:ಮೂರು ಮದುವೆ, ಒಂದು ಅಂತ್ಯಸಂಸ್ಕಾರ: ಈ ಗ್ರಾಮದಲ್ಲಿ ಒಂದೇ ದಿನ 95 ಜನರಿಗೆ ಕೋವಿಡ್ ಪಾಸಿಟಿವ್
ವಿಶೇಷ ತಂಡದ ಇನ್ಸ್ ಪೆಕ್ಟರ್ ಶಿವಕುಮಾರ್ ಮತ್ತು ಕರಂಬೀರ್ ಹಾಗೂ ಎಸಿಪಿ ಅತ್ತರ್ ಸಿಂಗ್ ಅವರ ತಂಡವು ಸುಶೀಲ್ ಕುಮಾರ್ ಮತ್ತು ಅಜಯ್ ರನ್ನು ಮುಂದ್ಕಾ ಪ್ರದೇಶದಲ್ಲಿ ಸೆರೆ ಹಿಡಿಯಲಾಗಿದೆ ಎಂದು ಪೊಲೀಸ್ ಅಧಿಕಾರಿ ನೀರಜ್ ಥಾಕೂರ್ ಹೇಳಿಕೆ ನೀಡಿದ್ದಾರೆ.
ಸುಶೀಲ್ ಕುಮಾರ್ ಬಂಧನಕ್ಕೆ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದರು. ಕುಸ್ತಿಪಟು ಬಗ್ಗೆ ಮಾಹಿತಿ ನೀಡಿದವರಿಗೆ ಒಂದು ಲಕ್ಷ ರೂ ನೀಡುವುದಾಗಿ ಘೋಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ