ಕೊಲೆ ಪ್ರಕರಣ: ಸುಶೀಲ್ ಬಂಧನ
Team Udayavani, May 22, 2021, 11:00 PM IST
ಹೊಸದಿಲ್ಲಿ: ಖ್ಯಾತ ಕುಸ್ತಿಪಟು ಸುಶೀಲ್ ಕುಮಾರ್ ಪಂಜಾಬ್ನ ಭಟಿಂಡಾದಲ್ಲಿ ಶನಿವಾರ ಬಂಧನಕ್ಕೊಳಗಾಗಿದ್ದಾರೆ. ಕೊಲೆ ಪ್ರಕರಣದಲ್ಲಿ ಆರೋಪಿ ಯಾಗಿ ತಲೆಮರೆಸಿಕೊಂಡಿದ್ದ ಅವರನ್ನು ಬಂಧಿಸಲು ಕಡೆಗೂ ದಿಲ್ಲಿ ಪೊಲೀಸರು ಯಶಸ್ವಿಯಾದರು. ಅವರನ್ನು ಹೆಚ್ಚಿನ ವಿಚಾರಣೆಗಾಗಿ ಹೊಸದಿಲ್ಲಿಗೆ ಒಯ್ಯಲಾಗಿದೆ.
ಹೊಸದಿಲ್ಲಿಯ ಛತ್ರಸಾಲ ಮೈದಾನದಲ್ಲಿ ಮೇ 4ರ ರಾತ್ರಿ ನಡೆದ ಯುವ ಕುಸ್ತಿಪಟು ಸಾಗರ್ ರಾಣಾ ಕೊಲೆ ಪ್ರಕರಣದಲ್ಲಿ ಸುಶೀಲ್ ಹೆಸರು ಕೇಳಿಬಂದಿತ್ತು. ತಮ್ಮ ಬೆಂಬಲಿಗರೊಂದಿಗೆ ಸೇರಿಕೊಂಡು ಅವರು ಈ ಹತ್ಯೆ ಮಾಡಿದ್ದಾರೆಂಬುದು ಸುಶೀಲ್ ಮೇಲಿನ ಆರೋಪವಾಗಿತ್ತು. ಬಳಿಕ ಸುಶೀಲ್ ತಲೆಮರೆಸಿಕೊಂಡಿದ್ದರು. ಬಂಧನದಿಂದ ತಪ್ಪಿಸಿಕೊಳ್ಳಲು ನಿರೀಕ್ಷಣಾ ಜಾಮೀನಿಗೆ ಅರ್ಜಿಯನ್ನೂ ಸಲ್ಲಿಸಿದ್ದರು.
ಇದನ್ನು ದಿಲ್ಲಿ ಸ್ಥಳೀಯ ನ್ಯಾಯಾಲಯ ತಿರಸ್ಕರಿಸಿತ್ತು. ಬೀಜಿಂಗ್ ಒಲಿಂಪಿಕ್ಸ್ನಲ್ಲಿ ಕಂಚು, ಲಂಡನ್ ಕೂಟದಲ್ಲಿ ಬೆಳ್ಳಿ ಗೆದ್ದಿದ್ದ ಸುಶೀಲ್ ಅವರನ್ನು ಲಕ್ಷಾಂತರ ಭಾರತೀಯರು ಆರಾಧಿಸುತ್ತಿದ್ದರು. ಈಗ ತಮ್ಮ ಹೆಸರು ಕೆಡಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ