ಕುಸ್ತಿಪಟು ಸುಶೀಲ್ ಕುಮಾರ್ ನನ್ನು ಗಲ್ಲಿಗೇರಿಸಿ: ಸಾಗರ್ ರಾಣಾ ಪೋಷಕರ ಆಕ್ರೋಶ
Team Udayavani, May 24, 2021, 12:11 PM IST
ಹೊಸದಿಲ್ಲಿ: ಕುಸ್ತಿಪಟುವೋರ್ವನ ಕೊಲೆ ಮಾಡಿರುವ ಆರೋಪ ಎದುರಿಸುತ್ತಿರುವ ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಸದ್ಯ ಪೊಲೀಸ್ ವಶದಲ್ಲಿದ್ದಾರೆ. ತಮ್ಮ ಮಗನನ್ನು ಕೊಂದಿರುವ ಸುಶೀಲ್ ಕುಮಾರ್ ನನ್ನು ಗಲ್ಲು ಶಿಕ್ಷೆಗೆ ಒಳಪಡಿಸಬೇಕು ಎಂದು ಮೃತ ಸಾಗರ್ ರಾಣಾ ನ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
23 ವರ್ಷದ ಕುಸ್ತಿಪಟು ಸಾಗರ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ, ಕುಸ್ತಿಪಟು ಸುಶೀಲ್ಕುಮಾರ್ ರನ್ನು ವಿಚಾರಣೆಗೊಳಪಡಿಸಲು ದೆಹಲಿ ಪೊಲೀಸರಿಗೆ ಅಲ್ಲಿನ ಮೆಟ್ರೋಪಾಲಿಟನ್ ನ್ಯಾಯಾಲಯ 6 ದಿನಗಳ ಕಾಲಾವಕಾಶ ನೀಡಿದೆ. 12 ದಿನಗಳು ಅವಕಾಶ ನೀಡಬೇಕೆಂಬ ಪೊಲೀಸರ ಬೇಡಿಕೆಯನ್ನು ನ್ಯಾಯಾಲಯ ತಿರಸ್ಕರಿಸಿ ಆರು ದಿನದ ಅವಕಾಶ ನೀಡಿದೆ.
ಇದನ್ನೂ ಓದಿ:ನಾರದ ಲಂಚ ಕೇಸ್: ಕೋಲ್ಕತಾ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಸಿಬಿಐ
ಸುಶೀಲ್ ಕುಮಾರ್ ತಮ್ಮ “ರಾಜಕೀಯ ಪ್ರಭಾವ” ವನ್ನು ಬಳಸಿಕೊಂಡು ತನಿಖೆಯ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಾರೆ ಎಂದು ಸಾಗರ್ ರಾಣಾ ಅವರ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಸುಶೀಲ್ ಅವರ ರಾಜಕೀಯ ಸಂಪರ್ಕಗಳು ಪೊಲೀಸ್ ತನಿಖೆಗೆ ಅಡ್ಡಿಯಾಗದಂತೆ ನ್ಯಾಯಾಲಯದ ವಿಚಾರಣೆ ನಡೆಸಬೇಕು ಎಂದು ಸಾಗರ್ ತಂದೆ ಅಶೋಕ್ ಹೇಳಿದ್ದಾರೆ.
“ನನ್ನ ಮಗನನ್ನು ಕೊಲೆ ಮಾಡಿದವನನ್ನು ಮಾರ್ಗದರ್ಶಕ ಎಂದು ಕರೆಯಲು ಅರ್ಹನಲ್ಲ. ಸುಶೀಲ್ ಕುಮಾರ್ ಗೆದ್ದ ಎಲ್ಲಾ ಪದಕಗಳನ್ನು ಅವನಿಂದ ಹಿಂಪಡೆದುಕೊಳ್ಳಬೇಕು. ಪೊಲೀಸರು ಸರಿಯಾಗಿ ತನಿಖೆ ನಡೆಸುತ್ತಾರೆ ಎಂದು ನಾವು ನಂಬುತ್ತೇವೆ. ಆದರೆ ಸುಶೀಲ್ ತನ್ನ ರಾಜಕೀಯ ಸಂಪರ್ಕಗಳನ್ನು ಬಳಸಿಕೊಂಡು ಅದರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಾನೆ” ಸಾಗರ್ ರಾಣಾ ತಾಯಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು