![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಸೈಯದ್ ಮುಷ್ತಾಕ್ ಅಲಿ: ಮಧ್ಯ ವಲಯಕ್ಕೆ 6 ವಿಕೆಟ್ ಜಯ
Team Udayavani, Feb 13, 2017, 3:45 AM IST
![PTI2_12_2.jpg](https://www.udayavani.com/wp-content/uploads/2017/02/12/PTI2_12_2-620x444.jpg)
ಮುಂಬಯಿ: ಹರ್ಪ್ರೀತ್ ಸಿಂಗ್ ಬಾರಿಸಿದ ಸ್ಫೋಟಕ ಅರ್ಧಶತಕದ ನೆರವಿನಿಂದ ಮಧ್ಯ ವಲಯ ತಂಡ ಸೈಯದ್ ಮುಷ್ತಾಕ್ ಅಲಿ ಅಂತರ್ ರಾಜ್ಯ ಟಿ20 ಟೂರ್ನಿಯಲ್ಲಿ ಪಶ್ಚಿಮ ವಲಯ ತಂಡವನ್ನು 6 ವಿಕೆಟ್ನಿಂದ ಸೋಲಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಪಶ್ಚಿಮ ವಲಯ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 160 ರನ್ ಬಾರಿಸಿತ್ತು. ಪಶ್ಚಿಮ ವಲಯ ಪರ ದೀಪಕ್ ಹೂಡಾ (ಅಜೇಯ 49 ರನ್), ಅದಿತ್ಯ ತಾರೆ (40 ರನ್) ಅತೀ ಹೆಚ್ಚು ರನ್ ಬಾರಿಸಿದರು. ಮಧ್ಯ ವಲಯದ ಪರ ಅಂಕಿತ್ ಚೌಧರಿ 3 ವಿಕೆಟ್ ಪಡೆದರೆ, ಅಮಿತ್ ಮಿಶ್ರಾ 2 ವಿಕೆಟ್ ಪಡೆದರು.
ಸ್ಪರ್ಧಾತ್ಮಕ ಮೊತ್ತವನ್ನು ಬೆನ್ನು ಹತ್ತಿದ ಮಧ್ಯ ವಲಯ 79 ರನ್ನಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಈ ಸಂದರ್ಭದಲ್ಲಿ ಜತೆಯಾದ ಹರ್ಪ್ರೀತ್ ಸಿಂಗ್ (62 ರನ್) ಮತ್ತು ಮಹೇಶ್ ರಾವತ್ (30 ರನ್) ಉತ್ತಮ ಜೊತೆಯಾಟ ಆಡುವ ಮೂಲಕ ತಂಡಕ್ಕೆ ಗೆಲುವು ತಂದರು.
ಸಂಕ್ಷಿಪ್ತ ಸ್ಕೋರ್:
ಪಶ್ಚಿಮ ವಲಯ 8 ವಿಕೆಟಿಗೆ 160 (ದೀಪಕ್ ಹೂಡ 49, ಆದಿತ್ಯ ತಾರೆ 40, ಅಂಕಿತ್ ಚೌಧರಿ 47ಕ್ಕೆ 3), ಮಧ್ಯ ವಲಯ 4 ವಿಕೆಟಿಗೆ 165 (ಹರ್ಪ್ರೀತ್ ಸಿಂಗ್ 62, ಮಹೇಶ್ ರಾವತ್ 30, ಈಶ್ವರ್ ಚೌಧರಿ 20ಕ್ಕೆ 2).
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.