ಬಂಗಾಲವನ್ನು ಬಗ್ಗುಬಡಿದ ಕರ್ನಾಟಕ


Team Udayavani, Feb 23, 2019, 12:30 AM IST

z-9.jpg

ಕಟಕ್‌: ಸಯ್ಯದ್‌ ಮುಷ್ತಾಕ್‌ ಅಲಿ ಟಿ20 ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಕರ್ನಾಟಕ ಸತತ 2ನೇ ಗೆಲುವು ದಾಖಲಿಸಿದೆ. ಮೊದಲ ಪಂದ್ಯದಲ್ಲಿ ಅಸ್ಸಾಂಗೆ ಸೋಲುಣಿಸಿದ್ದ ಮನೀಷ್‌ ಪಾಂಡೆ ಪಡೆ, ಶುಕ್ರವಾರದ ದ್ವಿತೀಯ ಪಂದ್ಯದಲ್ಲಿ ಬಂಗಾಲವನ್ನು 9 ವಿಕೆಟ್‌ಗಳಿಂದ ಭರ್ಜರಿಯಾಗಿ ಮಣಿಸಿತು.

ಕಟಕ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಬಂಗಾಲ 19.4 ಓವರ್‌ಗಳಲ್ಲಿ 131 ರನ್ನುಗಳಿಗೆ ಕುಸಿದರೆ, ಕರ್ನಾಟಕ 15.5 ಓವರ್‌ಗಳಲ್ಲಿ ಒಂದೇ ವಿಕೆಟಿಗೆ 134 ರನ್‌ ಪೇರಿಸಿ ಗೆದ್ದು ಬಂದಿತು. ರವಿವಾರ ನಡೆಯುವ “ಡಿ’ ವಿಭಾಗದ ತನ್ನ 3ನೇ ಪಂದ್ಯದಲ್ಲಿ ಕರ್ನಾಟಕ ತಂಡ ದುರ್ಬಲ ಅರುಣಾಚಲ ಪ್ರದೇಶ ವಿರುದ್ಧ ಆಡಲಿದೆ.

ಕದಂ-ಶರತ್‌ ಶತಕದ ಜತೆಯಾಟ
ಅಭಿಮನ್ಯು ಮಿಥುನ್‌ (22ಕ್ಕೆ 3), ವಿನಯ್‌ ಕುಮಾರ್‌ (18ಕ್ಕೆ 2) ಮತ್ತು ಮನೋಜ್‌ ಭಾಂಡಗೆ (18ಕ್ಕೆ 2) ಬಂಗಾಲವನ್ನು ಸಾಮಾನ್ಯ ಮೊತ್ತಕ್ಕೆ ಹಿಡಿದು ನಿಲ್ಲಿಸಿದ ಬಳಿಕ ಆರಂಭಿಕರಾದ ರೋಹನ್‌ ಕದಂ ಮತ್ತು ಬಿ.ಆರ್‌. ಶರತ್‌ ಜೋಡಿಯ ಬ್ಯಾಟಿಂಗ್‌ ವೈಭವ ಮೊದಲ್ಗೊಂಡಿತು. ಬಂಗಾಲ ಬೌಲರ್‌ಗಳ ಮೇಲೇರಿ ಹೋದ ಇವರಿಬ್ಬರೂ ಸ್ಫೋಟಕ ಆಟದ ಮೂಲಕ ರಂಜಿಸತೊಡಗಿದರು. ಈ ಬ್ಯಾಟಿಂಗ್‌ ಆರ್ಭಟ ಕಂಡಾಗ ಇವರಿಬ್ಬರೇ ಸೇರಿಕೊಂಡು ಕರ್ನಾಟಕವನ್ನು ಗೆಲ್ಲಿಸುವ ಸಾಧ್ಯತೆಯೂ ಗೋಚರಿಸಿತ್ತು.

ರೋಹನ್‌-ಶರತ್‌ 14.3 ಓವರ್‌ಗಳ ಪ್ರಚಂಡ ಜತೆಯಾಟದಲ್ಲಿ 117 ರನ್‌ ಪೇರಿಸಿ ದರು. ಆಗ 37 ಎಸೆತಗಳಿಂದ 50 ರನ್‌ (9 ಬೌಂಡರಿ) ಹೊಡೆದ ಶರತ್‌ ಔಟಾದರು. ಈ ಏಕೈಕ ಯಶಸ್ಸು ಪ್ರದಿಪ್ತ ಪ್ರಾಮಾಣಿಕ್‌ ಪಾಲಾ ಯಿತು. ರೋಹನ್‌ ಕದಂ ಔಟಾಗದೆ 81 ರನ್‌ ಬಾರಿಸಿದರು. 55 ಎಸೆತ ಎದುರಿಸಿದ ಕದಂ 10 ಬೌಂಡರಿ ಜತೆಗೆ 2 ಸಿಕ್ಸರ್‌ ಬಾರಿಸಿ ಮೆರೆದರು.

ಬಂಗಾಲ ಪರ ಆರಂಭಕಾರ ಶ್ರೀವತ್ಸ ಗೋಸ್ವಾಮಿ 40, ನಾಯಕ ಮನೋಜ್‌ ತಿವಾರಿ 36 ರನ್‌ ಹೊಡೆದರು. 
ಮೊದಲ ಪಂದ್ಯದಲ್ಲಿ ದುರ್ಬಲ ಮಿಜೋರಂ ಮೇಲೆ ಸವಾರಿ ಮಾಡಿದ ಬಂಗಾಲ 159 ರನ್ನುಗಳ ಬೃಹತ್‌ ಗೆಲುವು ದಾಖಲಿಸಿತ್ತು.

ಸಂಕ್ಷಿಪ್ತ ಸ್ಕೋರ್‌: ಬಂಗಾಲ-19.4 ಓವರ್‌ಗಳಲ್ಲಿ 131 (ಗೋಸ್ವಾಮಿ 40, ತಿವಾರಿ 36, ಮಿಥುನ್‌ 22ಕ್ಕೆ 3, ವಿನಯ್‌ 18ಕ್ಕೆ 2, ಭಾಂಡಗೆ 18ಕ್ಕೆ 2). ಕರ್ನಾಟಕ-15.5 ಓವರ್‌ಗಳಲ್ಲಿ ಒಂದು ವಿಕೆಟಿಗೆ 134 (ಕದಂ ಔಟಾಗದೆ 81. ಶರತ್‌ 50).

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.