ಸೈಯದ್‌ ಮುಷ್ತಾಕ್‌ ಅಲಿ ಟಿ20 : ಕರ್ನಾಟಕ ಸೂಪರ್‌ಲೀಗ್‌ಗೆ


Team Udayavani, Jan 15, 2018, 6:30 AM IST

Mayank-Agarwal.jpg

ವಿಶಾಖಪಟ್ಟಣ: ಅಮೋಘ ಹೋರಾಟ ಪ್ರದರ್ಶಿಸಿದ ಕರ್ನಾಟಕ ತಂಡ ಸೈಯದ್‌ ಮುಷ್ತಾಕ್‌ ಅಲಿ ಟಿ20 ಟೂರ್ನಿಯಲ್ಲಿ ಕೇರಳ ವಿರುದ್ಧ ಗೆಲುವು ಸಾಧಿಸಿ ಸೂಪರ್‌ ಲೀಗ್‌ ಹಂತಕ್ಕೇರಿದೆ. ಇದು ಕರ್ನಾಟಕ ತಂಡಕ್ಕೆ ಲೀಗ್‌ ಹಂತದಲ್ಲಿ ಕೊನೆಯ ಪಂದ್ಯವಾಗಿತ್ತು. ದಕ್ಷಿಣ ವಲಯ ಗುಂಪಿನಲ್ಲಿ ರಾಜ್ಯ ತಂಡ ಒಟ್ಟು 16 ಅಂಕ ಸಂಪಾದಿಸಿ ಅಗ್ರಸ್ಥಾನದಲ್ಲಿ ಸೂಪರ್‌ ಲೀಗ್‌ಗೆ ಪ್ರವೇಶಿಸಿದೆ. ಇದೇ ಗುಂಪಿನಲ್ಲಿರುವ ತಮಿಳುನಾಡು ತಂಡ ಕೂಡ 16 ಅಂಕ ಸಂಪಾದಿಸಿ ರನ್‌ರೇಟ್‌ ಆಧಾರದಲ್ಲಿ 2ನೇ ತಂಡವಾಗಿ ಸೂಪರ್‌ ಲೀಗ್‌ಗೇರಿದೆ.

ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕರ್ನಾಟಕ 20 ಓವರ್‌ಗೆ 6 ವಿಕೆಟ್‌ ಕಳೆದುಕೊಂಡು 181 ರನ್‌ ದಾಖಲಿಸಿತ್ತು. ಗುರಿ ಬೆನ್ನುಹತ್ತಿದ ಕೇರಳ ತಂಡ 19.2 ಓವರ್‌ಗೆ 161 ರನ್‌ ಬಾರಿಸಿ ಆಲೌಟ್‌ ಆಗಿದೆ.

ಆರಂಭದಲ್ಲಿ ಮಿನುಗಿದ ಕೇರಳ: ಗುರಿ ಬೆನ್ನುಹತ್ತಿದ ಕೇರಳ ತಂಡಕ್ಕೆ ಆರಂಭಿಕರಾದ ಸಂಜು ಸ್ಯಾಮ್ಸನ್‌ ಮತ್ತು ವಿಷ್ಣು ವಿನೋದ್‌ ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸಿ ಗೆಲುವಿನ ಭರವಸೆ ನೀಡಿದ್ದರು. ಈ ಜೋಡಿ ಮೊದಲ ವಿಕೆಟ್‌ಗೆ 9.3 ಓವರ್‌ಗೆ 109 ರನ್‌ ಬಾರಿಸಿತ್ತು. 

ಈ ಹಂತದಲ್ಲಿ ಕೇರಳ ತಂಡ ಸುಲಭ ಗೆಲುವು ಸಾಧಿಸುತ್ತೆ ಎಂದೇ ಅಂದಾಜಿಸಲಾಗಿತ್ತು. ಆದರೆ ನಂತರ ನಡೆದಿದ್ದೇ
ಬೇರೆ. ಕರ್ನಾಟಕದ ಬೌಲರ್‌ಗಳು ಭರ್ಜರಿ ದಾಳಿ ನಡೆಸುವ ಮೂಲಕ ಪಂದ್ಯದ ದಿಕ್ಕನ್ನು ಬದಲಿಸಿದರು. ಆ ನಂತರ ಬಂದ ಯಾವ ಬ್ಯಾಟ್ಸ್‌ಮನ್‌ ಕೂಡ ಕ್ರೀಸ್‌ನಲ್ಲಿ ಹೆಚ್ಚು ಹೊತ್ತು ನೀಲ್ಲದಿರುವುದೇ ಕೇರಳ ಸೋಲಿಗೆ ಕಾರಣವಾಯಿತು.

ಕೇರಳ ಪರ ಸ್ಯಾಮ್ಸನ್‌ (71 ರನ್‌), ವಿಷ್ಣು ವಿನೋದ್‌ (46ರನ್‌) ಗರಿಷ್ಠ ರನ್‌ ಬಾರಿಸಿದರು. ಕರ್ನಾಟಕದ ಪರ
ಪ್ರವೀಣ್‌ ದುಬೆ 3, ವಿನಯ್‌ ಕುಮಾರ್‌ 2 ವಿಕೆಟ್‌ ಪಡೆದರು.

ಅಗರ್ವಾಲ್‌ ಸ್ಫೋಟಕ ಬ್ಯಾಟಿಂಗ್‌: ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ ರಾಜ್ಯ ತಂಡಕ್ಕೆ ಆರಂಭಿಕ ಆಟಗಾರ
ಮಾಯಾಂಕ್‌ ಅಗರ್ವಾಲ್‌ ಆಸರೆಯಾದರು. ಮೊದಲ ವಿಕೆಟ್‌ಗೆ ಮಾಯಾಂಕ್‌ ಮತ್ತು ಕರುಣ್‌ ನಾಯರ್‌ 42 ರನ್‌
ಬಾರಿಸಿದರು. ಈ ಹಂತದಲ್ಲಿ ಕರುಣ್‌(18 ರನ್‌) ವಿಕೆಟ್‌ ಕಳೆದುಕೊಂಡರು. ನಂತರ ಬಂದ ಮನೀಶ್‌ ಪಾಂಡೆ (9
ರನ್‌) ಕೂಡ ಹೆಚ್ಚು ಹೊತ್ತು ನಿಲ್ಲಲಿಲ್ಲ. ಆದರೆ 3ನೇ ವಿಕೆಟ್‌ಗೆ ಜತೆಯಾದ ಮಾಯಾಂಕ್‌ ಮತ್ತು ಆರ್‌.ಸಮರ್ಥ್ ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶಿಸಿ ತಂಡ ಸ್ಪರ್ಧಾತ್ಮಕ ಮೊತ್ತ ದಾಖಲಿಸುವಲ್ಲಿ ನೆರವಾದರು. ಮಾಯಾಂಕ್‌ 58 ಎಸೆತದಲ್ಲಿ 86 ರನ್‌ ಬಾರಿಸಿ ಔಟ್‌ ಆದರು. ಅವರ ಆಟದಲ್ಲಿ 9 ಬೌಂಡರಿ, 3 ಸಿಕ್ಸರ್‌ ಸೇರಿತ್ತು. ಉಳಿದಂತೆ ಆರ್‌.ಸಮರ್ಥ (27 ರನ್‌), ಕೆ.ಗೌತಮ್‌ (21 ರನ್‌) ಉತ್ತಮ ಕೊಡುಗೆ ನೀಡಿದರು.

ಸಂಕ್ಷಿಪ್ತ ಸ್ಕೋರ್‌: ಕರ್ನಾಟಕ 20 ಓವರ್‌ಗೆ 181/6 (ಮಾಯಾಂಕ್‌ 86, ಆರ್‌.ಸಮರ್ಥ್ 27, ಕೆಎಂ ಆಸಿಫ್
34ಕ್ಕೆ 2), ಕೇರಳ 19.2 ಓವರ್‌ಗೆ 161/10 (ಸ್ಯಾಮ್ಸನ್‌ 71, ವಿಷ್ಣು ವಿನೋದ್‌ 46, ಪ್ರವೀಣ್‌ ದುಬೆ 35ಕ್ಕೆ 3)

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.