ಸಯ್ಯದ್‌ ಮುಷ್ತಾಕ್‌ ಅಲಿ ಟಿ20: ಮುಂಬಯಿಗೆ ಶರಣಾದ ಕರ್ನಾಟಕ


Team Udayavani, Nov 26, 2019, 5:20 AM IST

SURYAKUMAR-YADAV

ಸೂರತ್‌: ಸಯ್ಯದ್‌ ಮುಷ್ತಾಕ್‌ ಅಲಿ ಟಿ20 ಕ್ರಿಕೆಟ್‌ ಕೂಟದ ಕೊನೆಯ ಸೂಪರ್‌ ಲೀಗ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಕರ್ನಾಟಕ 7 ವಿಕೆಟ್‌ಗಳಿಂದ ಮುಂಬಯಿಗೆ ಶರಣಾಗಿದೆ. ಸೂರ್ಯಕುಮಾರ್‌ ಯಾದವ್‌ ಅವರ ಆರ್ಭಟಕ್ಕೆ ಕಡಿವಾಣ ಹಾಕಲು ವಿಫ‌ಲವಾದದ್ದು ಕರ್ನಾಟಕಕ್ಕೆ ಹಿನ್ನಡೆಯಾಗಿ ಪರಿಣಮಿಸಿತು.

“ಬಿ’ ವಿಭಾಗದ ಸೂಪರ್‌ ಲೀಗ್‌ನಲ್ಲಿ ಹ್ಯಾಟ್ರಿಕ್‌ ಜಯ ಸಾಧಿಸಿ ಮೆರೆಯುತ್ತಿದ್ದ ಕರ್ನಾಟಕ, ಕೂಟದಲ್ಲಿ ಸತತ 7 ಪಂದ್ಯಗಳನ್ನು ಗೆದ್ದು ಪ್ರಭುತ್ವ ಸಾಧಿಸಿತ್ತು. ಆದರೆ ಸೋಮವಾರದ ಪಂದ್ಯದಲ್ಲಿ ಮುಂಬಯಿ ಎದುರು ಪಾಂಡೆ ಪಡೆಯ ಆಟ ನಡೆಯಲಿಲ್ಲ.

ಕರ್ನಾಟಕ ಸೂಪರ್‌ ಲೀಗ್‌ ಹಂತದ ಎಲ್ಲ 4 ಪಂದ್ಯಗಳನ್ನು ಮುಗಿಸಿದ್ದು, 3 ಗೆಲುವು ಹಾಗೂ ಒಂದು ಸೋಲಿನೊಂದಿಗೆ ಒಟ್ಟು 12 ಅಂಕಗಳೊಂದಿಗೆ ಗುಂಪಿನ ಅಗ್ರಸ್ಥಾನಿಯಾಗಿದೆ. ಈ ಗುಂಪಿನಿಂದ ಅಗ್ರ 2 ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿದ್ದು, 3 ತಂಡಗಳು ರೇಸ್‌ನಲ್ಲಿವೆ. ಸದ್ಯ ಕರ್ನಾಟಕ ಸುರಕ್ಷಿತವಾಗಿದೆ.

ಮುಂಬಯಿ ಭರ್ಜರಿ ಚೇಸಿಂಗ್‌
ಮೊದಲು ಬ್ಯಾಟಿಂಗ್‌ಗೆ ಇಳಿದ ಕರ್ನಾಟಕ ತಂಡ ಆರಂಭಿಕ ಬ್ಯಾಟ್ಸ್‌ಮನ್‌ ದೇವದತ್ತ ಪಡಿಕ್ಕಲ್‌ (57) ಮತ್ತು ಮಧ್ಯಮ ಕ್ರಮಾಂಕ ಬ್ಯಾಟ್ಸ್‌ಮನ್‌ ರೋಹನ್‌ ಕದಮ್‌ (71) ಅವರ ಅರ್ಧ ಶತಕಗಳ ನೆರವಿನಿಂದ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 171 ರನ್‌ ಗಳಿಸಿತು. ಈ ಗುರಿ ಬೆನ್ನಟ್ಟಿದ ಮುಂಬಯಿ ತಂಡ ಸೂರ್ಯಕುಮಾರ್‌ ಯಾದವ್‌ ಅವರ ಸ್ಫೋಟಕ ಬ್ಯಾಟಿಂಗ್‌ (ಅಜೇಯ 94 ರನ್‌) ಹಾಗೂ ಆರಂಭಕಾರ ಪೃಥ್ವಿ ಶಾ (30) ಅವರ ದಿಟ್ಟ ಹೋರಾಟ ನೆರವಿನಿಂದ 19 ಓವರ್‌ಗಳಲ್ಲಿ ಮೂರೇ ವಿಕೆಟ್‌ ನಷ್ಟಕ್ಕೆ 174 ರನ್‌ ಗಳಿಸಿ ವಿಜಯದ ನಗು ಹೊಮ್ಮಿಸಿತು.

ಸೂರ್ಯಕುಮಾರ್‌ ಯಾದವ್‌ 53 ಎಸೆತಗಳಿಂದ 11 ಬೌಂಡರಿ, 4 ಸಿಕ್ಸರ್‌ ನೆರವಿನಿಂದ ಅಜೇಯ 94 ರನ್‌ ಸಿಡಿಸಿದರು. ಇವರೊಂದಿಗೆ ಶಿವಂ ದುಬೆ 22 ರನ್‌ ಮಾಡಿ ಔಟಾಗದೆ ಉಳಿದರು (18 ಎಸೆತ, 2 ಸಿಕ್ಸರ್‌). ಈ ಜೋಡಿಯಿಂದ 4ನೇ ವಿಕೆಟಿಗೆ 8.1 ಓವರ್‌ಗಳಿಂದ 84 ರನ್‌ ಹರಿದು ಬಂತು.

ಕರ್ನಾಟಕ ಕೆ.ಎಲ್‌. ರಾಹುಲ್‌ ಅವರನ್ನು ಶೂನ್ಯಕ್ಕೆ ಕಳೆದುಕೊಂಡಿತು. ನಾಯಕ ಮನೀಷ್‌ ಪಾಂಡೆ (4), ಕರುಣ್‌ ನಾಯರ್‌ (8) ಕೂಡ ಅಗ್ಗಕ್ಕೆ ಔಟಾದರು. 19 ರನ್ನಿಗೆ 3 ವಿಕೆಟ್‌ ಬಿದ್ದಾಗ ಜತೆಗೂಡಿದ ಪಡಿಕ್ಕಲ್‌-ಕದಮ್‌ 80 ರನ್‌ ಪೇರಿಸಿದರು.

ಸಂಕ್ಷಿಪ್ತ ಸ್ಕೋರ್‌
ಕರ್ನಾಟಕ-20 ಓವರ್‌ಗಳಲ್ಲಿ 6 ವಿಕೆಟಿಗೆ 171 (ಕದಮ್‌ 71, ಪಡಿಕ್ಕಲ್‌ 57, ಠಾಕೂರ್‌ 29ಕ್ಕೆ 2, ದುಬೆ 39ಕ್ಕೆ 2). ಮುಂಬಯಿ-19 ಓವರ್‌ಗಳಲ್ಲಿ 3 ವಿಕೆಟಿಗೆ 174 (ಸೂರ್ಯಕುಮಾರ್‌ ಔಟಾಗದೆ 94, ಶಾ 30, ದುಬೆ ಔಟಾಗದೆ 22).

ಸೆಮಿಫೈನಲ್‌ಗೆ ಪೈಪೋಟಿ
ಸೋಮವಾರದ ಫ‌ಲಿತಾಂಶದ ಬಳಿಕ “ಬಿ’ ವಿಭಾಗದಲ್ಲಿ ಜಾರ್ಖಂಡ್‌ ಹೊರತುಪಡಿಸಿ ಉಳಿದ ತಂಡಗಳು ಸೆಮಿಫೈನಲ್‌ ರೇಸ್‌ನಲ್ಲಿ ಉಳಿದುಕೊಂಡಿರುವ ಚಿತ್ರಣ ಲಭಿಸಿದೆ.
ಕರ್ನಾಟಕದೊಂದಿಗೆ ಪೈಪೋಟಿಯಲ್ಲಿರುವ ತಂಡಗಳೆಂದರೆ ತಮಿಳುನಾಡು (3 ಪಂದ್ಯ, 8 ಅಂಕ) ಮತ್ತು ಮುಂಬಯಿ (3 ಪಂದ್ಯ, 8 ಅಂಕ). ರನ್‌ರೇಟ್‌ನಲ್ಲಿ ಕರ್ನಾಟಕವೇ ಮುಂದಿದೆ (+0.762). ತಮಿಳುನಾಡು (+0.413) ಮತ್ತು ಮುಂಬಯಿ (-0.589) ಅನಂತರದ ಸ್ಥಾನದಲ್ಲಿವೆ. ಮುಂಬಯಿಯನ್ನು ಮಣಿಸಿದ್ದೇ ಆದಲ್ಲಿ ಕರ್ನಾಟಕ ಸೋಮವಾರವೇ ಸೆಮಿಫೈನಲ್‌ಗೆ ಲಗ್ಗೆ ಇರಿಸುತ್ತಿತ್ತು.

ದಿನದ ಇನ್ನೊಂದು ಪಂದ್ಯದಲ್ಲಿ ತಮಿಳುನಾಡು 4 ವಿಕೆಟ್‌ಗಳಿಂದ ಪಂಜಾಬ್‌ಗ ಸೋಲುಣಿಸಿತು. ತಮಿಳುನಾಡು ಬುಧವಾರದ ಕೊನೆಯ ಲೀಗ್‌ ಪಂದ್ಯದಲ್ಲಿ ಜಾರ್ಖಂಡ್‌ ವಿರುದ್ಧ ಆಡಲಿದೆ. ಮುಂಬಯಿ ತಂಡ ಪಂಜಾಬನ್ನು ಎದುರಿಸಲಿದೆ. ಪಂಜಾಬ್‌ 4 ಅಂಕ ಹೊಂದಿದ್ದು, +1.426ರಷ್ಟು ಅತ್ಯುತ್ತಮ ರನ್‌ರೇಟ್‌ ಹೊಂದಿದೆ. ಮುಂಬಯಿ ಎದುರು ಬೃಹತ್‌ ಗೆಲುವು ಸಾಧಿಸಿದರೆ ಪಂಜಾಬ್‌ಗೂ ಅವಕಾಶವಿದೆ. ಆದರೆ ತಮಿಳುನಾಡು ವಿರುದ್ಧ ಜಾರ್ಖಂಡ್‌ ಗೆಲ್ಲಬೇಕು!

ಟಾಪ್ ನ್ಯೂಸ್

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.