ಸಯ್ಯದ್‌ ಮುಷ್ತಾಕ್‌ ಅಲಿ ಟಿ20: ಕರ್ನಾಟಕಕ್ಕೆ ಸತತ 9ನೇ ಜಯ


Team Udayavani, Mar 10, 2019, 12:30 AM IST

ka-win-s.jpg

ಇಂದೋರ್‌ (ಮಧ್ಯಪ್ರದೇಶ):ಸಯ್ಯದ್‌ ಮುಷ್ತಾಕ್‌ ಅಲಿ ಟಿ20 ಕೂಟದಲ್ಲಿ ಕರ್ನಾಟಕದ ಭರ್ಜರಿ ಓಟ ಮುಂದುವರಿದಿದೆ. ಸೂಪರ್‌ ಲೀಗ್‌ ಹಂತದ ಪಂದ್ಯದಲ್ಲಿ ಉತ್ತರಪ್ರದೇಶ ವಿರುದ್ಧ  ರಾಜ್ಯ ತಂಡ 10 ರನ್‌ ಜಯ ಸಾಧಿಸಿದೆ. ಈ ಮೂಲಕ ಈ ಕೂಟದಲ್ಲಿ ಸತತ 9ನೇ ಗೆಲುವು ದಾಖಲಿಸಿದೆ. ಲೀಗ್‌ ಹಂತದಲ್ಲಿ ಸತತ 7 ಪಂದ್ಯದಲ್ಲಿ ಗೆಲುವು ಸಾಧಿಸಿದ್ದ ರಾಜ್ಯ,ಸೂಪರ್‌ ಲೀಗ್‌ನಲ್ಲೂ ಸತತ 2 ಜಯ ಕಂಡಿದೆ.

ಮನೀಶ್‌ ಪಾಂಡೆ ನಾಯಕತ್ವದ ಕರ್ನಾಟಕ ಮೊದಲು ಬ್ಯಾಟಿಂಗ್‌ ಮಾಡಿ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 149 ರನ್‌ ಗಳಿಸಿತು. ಇದನ್ನು ಬೆನ್ನತ್ತಿ ಹೊರಟ ಉತ್ತರಪ್ರದೇಶ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 139 ರನ್‌ ಮಾಡಲಷ್ಟೇ ಶಕ್ತವಾಯಿತು.ಹಿಂದಿನ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದ ಆರಂಭಕಾರ ರೋಹನ್‌ ಕದಂ 35 ರನ್‌ ಗಳಿಸಿದ್ದೇ ತಂಡದ ಗರಿಷ್ಠ ರನ್‌. ಇದನ್ನು ಹೊರತುಪಡಿಸಿದರೆ ಮಾಯಾಂಕ್‌ ಅಗರ್ವಾಲ್‌ 33 ರನ್‌, ನಾಯಕ ಮನೀಶ್‌ ಪಾಂಡೆ 22 ರನ್‌ ಮತ್ತು ಮನೋಜ್‌ ಭಾಂಡಗೆ 25 ರನ್‌ ಗಳಿಸಿದರು. ಉತ್ತರಪ್ರದೇಶ ಪರ ಅಂಕಿತ್‌ ರಜಪೂತ್‌, ಯಶ್‌ ದಯಾಲ್‌, ಸೌರಭ್‌ ಕುಮಾರ್‌ ಹಾಗೂ ಅಂಕಿತ್‌ ಚೌಧರಿ ತಲಾ ಒಂದು ವಿಕೆಟ್‌ ಕಿತ್ತರು.

ಸುಲಭ ಮೊತ್ತವನ್ನು ಬೆನ್ನತ್ತಿದ್ದ ಉತ್ತರಪ್ರದೇಶಕ್ಕೆ ಆರಂಭಕಾರ ನಾಯಕ ಆಕಾಶ್‌ ದೀಪ್‌ ನಾಥ್‌ 46 ರನ್‌, 3ನೇ ಕ್ರಮಾಂಕದ ಬ್ಯಾಟ್ಸ್‌ಮನ್‌ ಉಪೇಂದ್ರ ಯಾದವ್‌ 42 ರನ್‌ ಮಾಡಿ ಪಂದ್ಯವನ್ನು ಗೆಲುವಿನತ್ತ ಕೊಂಡೊಯ್ಯುತ್ತಿದ್ದರು. ಇವರಿಬ್ಬರ ಬಳಿಕ ಬಂದ ಬ್ಯಾಟ್ಸ್‌ಮನ್‌ಗಳಿಂದ ನಿರೀಕ್ಷಿತ ಪ್ರದರ್ಶನ ಕಂಡು ಬರಲಿಲ್ಲ. ಪರಿಣಾಮ ಕರ್ನಾಟಕದೆದರು ಸೋಲನುಭವಿಸುವಂತಾಯಿತು. ಕರ್ನಾಟಕದ ಪರ ಎಡಗೈ ವೇಗಿ ವಿ.ಕೌಶಿಕ್‌ 3 ವಿಕೆಟ್‌ ಕಿತ್ತರು. ಉಳಿದಂತೆ ಆರ್‌.ವಿನಯ್‌ ಕುಮಾರ್‌, ಜೆ.ಸುಚಿತ್‌ ತಲಾ 2 ವಿಕೆಟ್‌ ಕಿತ್ತ ತಂಡದ ಗೆಲುವಿಗೆ ಕಾರಣರಾದರು.

ಸಂಕ್ಷಿಪ್ತ ಸ್ಕೋರ್‌: ಕರ್ನಾಟಕ- 20 ಓವರ್‌ಗಳಲ್ಲಿ 6 ವಿಕೆಟಿಗೆ 149 (ರೋಹನ್‌ ಕದಂ 35, ಮಾಯಾಂಕ್‌ ಅಗರ್ವಾಲ್‌ 33, ಅಂಕಿತ್‌ ಚೌಧರಿ 26ಕ್ಕೆ 1). ಉತ್ತರಪ್ರದೇಶ- 20 ಓವರ್‌ಗಳಲ್ಲಿ 8 ವಿಕೆಟಿಗೆ 139(ಆಕಾಶ್‌ ದೀಪ್‌ ನಾಥ್‌ 46, ಉಪೇಂದ್ರ ಯಾದವ್‌ 42, ಕೌಶಿಕ್‌ 22ಕ್ಕೆ 3).

ಟಾಪ್ ನ್ಯೂಸ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.