ಸಯ್ಯದ್ ಮುಷ್ತಾಕ್ ಅಲಿ ಟಿ20: ದೇವದತ್ ಪಡಿಕಲ್ ಅಬ್ಬರ : ಕರ್ನಾಟಕಕ್ಕೆ 10 ರನ್ ಜಯ
Team Udayavani, Jan 14, 2021, 11:35 PM IST
ಬೆಂಗಳೂರು : ದೇವದತ್ ಪಡಿಕಲ್ (ಅಜೇಯ 99) ಆಕರ್ಷಕ ಅರ್ಧಶತಕ ಮತ್ತು ಬೌಲರ್ಗಳ ಸಂಘಟಿತ ಹೋರಾಟದ ಫಲವಾಗಿ ಕರ್ನಾಟಕ ತಂಡ ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಗೆಲುವಿನ ನಗೆ ಬೀರಿದೆ. ಗುರುವಾರ ಆಲೂರಿನ ಮೂರನೇ ಮೈದಾನದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಕರ್ನಾಟಕ 10 ರನ್ಗಳಿಂದ ತ್ರಿಪುರ ತಂಡವನ್ನು ಮಣಿಸುವಲ್ಲಿ ಯಶಸ್ವಿಯಾಯಿತು. ಇದರೊಂದಿಗೆ ಲೀಗ್ನಲ್ಲಿ ಇದುವರೆಗೆ ಆಡಿದ ಮೂರು ಪಂದ್ಯಗಳಲ್ಲಿ 2 ಜಯ ಹಾಗೂ ಒಂದು ಸೋಲು ಕಂಡ ಹಾಲಿ ಚಾಂಪಿಯನ್ ಕರ್ನಾಟಕ ಎಲೈಟ್ ಎ ಗುಂಪಿನಲ್ಲಿ ಮೂರನೇ ಸ್ಥಾನದಲ್ಲಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಕರ್ನಾಟಕ ನಿಗದಿತ 20 ಒವರ್ಗಳಲ್ಲಿ 5 ವಿಕೆಟಿಗೆ 167ರನ್ ಕಲೆಹಾಕಿತು. ಗುರಿ ಬೆನ್ನತ್ತಿದ ತ್ರಿಪರಕ್ಕೆ ನಾಯಕ ಮಣಿಶಂಕರ್ ಮುರಾಸಿಂಗ್ (ಅಜೇಯ 61), ರಜತ್ ಡೇ (ಅಜೇಯ 44) ಜೋಡಿಯ ಪ್ರತಿಹೋರಾಟದ ನಡುವೆಯೂ 4 ವಿಕೆಟಿಗೆ 157ರನ್ ಗಳಿಸಲಷ್ಟೆ ಶಕ್ತವಾಯಿತು.
ಸಂಕ್ಷಿಪ್ತ ಸ್ಕೋರ್: ಕರ್ನಾಟಕ 5 ವಿಕೆಟಿಗೆ 167 (ಪಡಿಕಲ್ ಅಜೇಯ 99, ರೋಹನ್ ಕದಂ 31, ರಾಣಾ ದತ್ತಾ 41ಕ್ಕೆ 2, ಮಣಿಶಂಕರ್ 27ಕ್ಕೆ 1), ತ್ರಿಪುರ 4 ವಿಕೆಟಿಗೆ 157 (ಮಣಿಶಂಕರ್ ಅಜೇಯ 61, ರಜತ್ ಡೇ ಅಜೇಯ 44, ಪ್ರವಿಣ್ ದುಬೆ 20ಕ್ಕೆ 1, ಕೆ. ಗೌತಮ್ 26ಕ್ಕೆ 1).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ