ಸಯ್ಯದ್‌ ಮುಷ್ತಾಕ್‌ ಅಲಿ ಟಿ20: ಕರ್ನಾಟಕಕ್ಕೆ 9 ವಿಕೆಟ್‌ ಜಯ


Team Udayavani, Nov 9, 2019, 5:38 AM IST

padikal

ವಿಶಾಖಪಟ್ಟಣ: ಸಯ್ಯದ್‌ ಮುಷ್ತಾಕ್‌ ಅಲಿ ಟಿ20 ಕ್ರಿಕೆಟ್‌ ಕೂಟದ ಗುಂಪು “ಎ’ ವಿಭಾಗದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಉತ್ತರಾಖಂಡ ವಿರುದ್ಧ ಕರ್ನಾಟಕ 9 ವಿಕೆಟ್‌ಗಳ ಪ್ರಚಂಡ ಗೆಲುವು ಸಾಧಿಸಿದೆ. ಇದರೊಂದಿಗೆ ಕರ್ನಾಟಕ ಕೂಟದಲ್ಲಿ ಶುಭಾರಂಭ ಮಾಡಿದೆ.

ಶುಕ್ರವಾರ ಮೊದಲು ಬ್ಯಾಟಿಂಗಿಗೆ ಇಳಿದ ಉತ್ತರಾಖಂಡಕ್ಕೆ ಶುಭವಾಗಲಿಲ್ಲ. ಕರ್ನಾಟಕ ಬೌಲರ್‌ಗಳು ಫಾತಕವಾಗಿ ಅಪ್ಪಳಿಸಿದರು. ಪರಿಣಾಮ ಉತ್ತರಾಖಂಡದ ವಿಕೆಟ್‌ ಪಟಪಟನೆ ಉದುರಿಕೊಂಡಿತು. 20 ಓವರ್‌ಗಳಲ್ಲಿ 6 ವಿಕೆಟಿಗೆ 132 ರನ್‌ ಗಳಿಸಲಷ್ಟೇ ಶಕ್ತವಾಯಿತು. ಇದಕ್ಕೆ ಉತ್ತರವಾಗಿ ಕರ್ನಾಟಕ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ರೋಹನ್‌ ಕದಮ್‌ (ಅಜೇಯ 67 ರನ್‌) ಹಾಗೂ ದೇವದತ್ತ ಪಡಿಕ್ಕಲ್‌ (ಅಜೇಯ 53 ರನ್‌) ಅವರ ಅರ್ಧಶತಕಗಳ ನೆರವಿನಿಂದ ಕೇವಲ 15.4 ಓವರ್‌ಗಳಲ್ಲಿ 1 ವಿಕೆಟಿಗೆ 133 ರನ್‌ ಗಳಿಸಿ ಗೆಲುವು ಸಾಧಿಸಿತು. ಕರ್ನಾಟಕ ಶನಿವಾರ ನಡೆಯಲಿರುವ ತನ್ನ ಗುಂಪಿನ ಎರಡನೇ ಪಂದ್ಯದಲ್ಲಿ ಬರೋಡ ತಂಡವನ್ನು ಎದುರಿಸಲಿದೆ.

ರಾಜ್ಯದ ಅಬ್ಬರದ ಬ್ಯಾಟಿಂಗ್‌
ಸುಲಭ ಗುರಿಯನ್ನು ಬೆನ್ನಟ್ಟಿದ ಕರ್ನಾಟಕ ತಂಡವು ಒಟ್ಟು 25 ರನ್‌ಗಳಿಸುವಷ್ಟರಲ್ಲಿ ಆಘಾತ ಅನುಭವಿಸಿತು. ಆರ್‌.ಸಮರ್ಥ್ (7 ರನ್‌, 8 ಎಸೆತ, 1 ಬೌಂಡರಿ) ವಿಕೆಟ್‌ ಕಳೆದುಕೊಂಡರು. ಆದರೆ ಮತ್ತೋರ್ವ ಆರಂಭಿಕ ಬ್ಯಾಟ್ಸ್‌ಮನ್‌ ರೋಹನ್‌ ಕದಮ್‌ ಹಾಗೂ ಎರಡನೇ ವಿಕೆಟಿಗೆ ಕ್ರೀಸ್‌ಗೆ ಬಂದ ದೇವದತ್ತ ಪಡಿಕ್ಕಲ್‌ ಬಿರುಸಿನ ಬ್ಯಾಟಿಂಗ್‌ ನಡೆಸಿದರು. ಇವರಿಬ್ಬರು ಎರಡನೇ ವಿಕೆಟಿಗೆ ಒಟ್ಟಾರೆ 108 ರನ್‌ ಜತೆಯಾಟವಾಡಿದರು. ತಂಡವನ್ನು ಗೆಲುವಿನ ದಡ ಸೇರಿಸಿದರು. ರೋಹನ್‌ ಕದಮ್‌ 55 ಎಸೆತದಿಂದ 6 ಬೌಂಡರಿ, 3 ಸಿಕ್ಸರ್‌ಗಳಿಂದ ಅರ್ಧಶತಕ ಬಾರಿಸಿದರು. ದೇವದತ್‌ ಪಡಿಕ್ಕಲ್‌ ಕೂಡ ಅಷ್ಟೇ ಉತ್ತಮವಾಗಿ ಬ್ಯಾಟಿಂಗ್‌ ನಡೆಸಿದರು.

ಸತತ 15 ಗೆಲುವು
ಉತ್ತರಾಖಂಡ ವಿರುದ್ಧ ಸಯ್ಯದ್‌ ಮುಷ್ತಾಕ್‌ ಅಲಿ ಟಿ20 ಕೂಟದಲ್ಲಿ 9 ವಿಕೆಟ್‌ಗಳಿಂದ ಗೆದ್ದ ಬೆನ್ನಲ್ಲೇ ಕರ್ನಾಟಕ ತಂಡವು ಅವಧಿಯೊಂದರಲ್ಲಿ ಸತತ 15 ಪಂದ್ಯ ಗೆದ್ದ ದಾಖಲೆ ನಿರ್ಮಿಸಿದೆ. ಭಾರತದ ಮಟ್ಟಿಗೆ ಇದು ಮೊದಲ ದಾಖಲೆಯಾಗಿದೆ.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.