ಸಯ್ಯದ್‌ ಮುಷ್ತಾಕ್‌ ಅಲಿ ಟಿ20: ಸತತ 5ನೇ ಜಯ; ಕರ್ನಾಟಕ ಅಜೇಯ


Team Udayavani, Feb 28, 2019, 12:30 AM IST

syed-mushtaq-ali-t20-karnataka-win.jpg

ಕಟಕ್‌: ದಿಟ್ಟ ಹೋರಾಟ ನೀಡಿದ ಛತ್ತೀಸ್‌ಗಢವನ್ನು 4 ವಿಕೆಟ್‌ಗಳಿಂದ ಮಣಿಸಿದ ಕರ್ನಾಟಕ, “ಸಯ್ಯದ್‌ ಮುಷ್ತಾಕ್‌ ಅಲಿ ಟಿ20′ ಕ್ರಿಕೆಟ್‌ ಸರಣಿಯಲ್ಲಿ ಸತತ 5 ಗೆಲುವುಗಳೊಂದಿಗೆ ಅಜೇಯ ಓಟ ಬೆಳೆಸಿದೆ. “ಡಿ’ ವಿಭಾಗದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.

ಬುಧವಾರ ಕಟಕ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ನಡೆಸಿದ ಛತ್ತೀಸ್‌ಗಢ 3 ವಿಕೆಟಿಗೆ 171 ರನ್‌ ಪೇರಿಸಿದರೆ, ಕರ್ನಾಟಕ 19.2 ಓವರ್‌ಗಳಲ್ಲಿ 6 ವಿಕೆಟಿಗೆ 175 ರನ್‌ ಬಾರಿಸಿ ಜಯ ಸಾಧಿಸಿತು. ಕರ್ನಾಟಕವಿನ್ನು ಒಡಿಶಾ (ಫೆ. 28) ಮತ್ತು ಹರ್ಯಾಣ (ಮಾ. 2) ವಿರುದ್ಧ ಕೊನೆಯ 2 ಲೀಗ್‌ ಪಂದ್ಯಗಳನ್ನು ಆಡಲಿದೆ.

ವಿನಯ್‌, ಸುಚಿತ್‌, ಮಿಥುನ್‌ ಸಾಹಸ
ಕೊನೆಯ 5 ಓವರ್‌ಗಳಲ್ಲಿ ಸಿಡಿಲಬ್ಬರ ಬ್ಯಾಟಿಂಗ್‌ ಪ್ರದರ್ಶಿಸುವ ಮೂಲಕ ಕರ್ನಾಟಕ ಗೆಲುವಿನ ಸಂಭ್ರಮ ಆಚರಿಸಿತು. ಮೊದಲ 15 ಓವರ್‌ಗಳಲ್ಲಿ 5 ವಿಕೆಟಿಗೆ 109 ರನ್‌ ಗಳಿಸಿ ಸೋಲಿನ ಅಂಚಿನಲ್ಲಿದ್ದ ಕರ್ನಾಟಕ, ಬಳಿಕ ಜಗದೀಶ್‌ ಸುಚಿತ್‌, ವಿನಯ್‌ ಕುಮಾರ್‌ ಮತ್ತು ಅಭಿಮನ್ಯು ಮಿಥುನ್‌ ಅವರ ಆಕ್ರಮಣಕಾರಿ ಬ್ಯಾಟಿಂಗ್‌ ಮೂಲಕ ಛತ್ತೀಸ್‌ಗಢದ ಗೆಲುವಿನ ಕನಸನ್ನು ಛಿದ್ರಗೊಳಿಸಿತು. ಕೊನೆಯ 4.2 ಓವರ್‌ಗಳಲ್ಲಿ ಈ ಮೂವರು 66 ರನ್‌ ಪೇರಿಸಿ ಅಮೋಘ ಗೆಲುವನ್ನು ತಂದಿತ್ತರು.

ಅತ್ಯಂತ ಆಕ್ರಮಣಕಾರಿಯಾಗಿ ಬ್ಯಾಟ್‌ ಬೀಸಿದ ವಿನಯ್‌ ಕುಮಾರ್‌ 13 ಎಸೆತಗಳಿಂದ ಅಜೇಯ 34 ರನ್‌ (4 ಸಿಕ್ಸರ್‌), ಜಗದೀಶ್‌ ಸುಚಿತ್‌ 24 ಎಸೆತಗಳಿಂದ 34 ರನ್‌ (3 ಬೌಂಡರಿ, 1 ಸಿಕ್ಸರ್‌) ಮತ್ತು ಮಿಥುನ್‌ 7 ಎಸೆತಗಳಿಂದ ಅಜೇಯ 18 ರನ್‌ (1 ಬೌಂಡರಿ, 2 ಸಿಕ್ಸರ್‌) ಸಿಡಿಸಿ ತಂಡವನ್ನು ದಡ ಮುಟ್ಟಿಸಿದರು.ಅಗ್ರ ಕ್ರಮಾಂಕದ ಬ್ಯಾಟಿಂಗ್‌ನಲ್ಲಿ ರೋಹನ್‌ ಕದಮ್‌ 16, ಮಾಯಾಂಕ್‌ ಅಗರ್ವಾಲ್‌ 21 ಮತ್ತು ಕರುಣ್‌ ನಾಯರ್‌ 35 ರನ್‌ ಮಾಡಿದರು. ಆದರೆ ನಾಯಕ ಮನೀಷ್‌ ಪಾಂಡೆ (9), ಶರತ್‌ ಬಿ.ಆರ್‌. (0) ವಿಫ‌ಲರಾದರು.

ಹರ್‌ಪ್ರೀತ್‌ ಕಪ್ತಾನನ ಆಟ
ಛತ್ತೀಸ್‌ಗಢ ಪರ ನಾಯಕ ಹರ್‌ಪ್ರೀತ್‌ ಸಿಂಗ್‌ 79 ರನ್‌ (56 ಎಸೆತ, 8 ಬೌಂಡರಿ, 3 ಸಿಕ್ಸರ್‌), ಅಮನ್‌ದೀಪ್‌ ಖಾರೆ ಔಟಾಗದೆ 45 ರನ್‌ (31 ಎಸೆತ, 4 ಬೌಂಡರಿ, 2 ಸಿಕ್ಸರ್‌) ಹೊಡೆದು ತಂಡದ ಸವಾಲಿನ ಮೊತ್ತಕ್ಕೆ ಕಾರಣರಾದರು. ಆರಂಭಕಾರ ರಿಷಭ್‌ ತಿವಾರಿ ಕೊಡುಗೆ 33 ರನ್‌.

ಛತ್ತೀಸ್‌ಗಢದ ಬ್ಯಾಟಿಂಗ್‌ ಅಬ್ಬರದ ವೇಳೆ ಕರ್ನಾಟಕದ ಬೌಲಿಂಗ್‌ ಸಂಪೂರ್ಣ ದಿಕ್ಕು ತಪ್ಪಿತು.

ಸಂಕ್ಷಿಪ್ತ ಸ್ಕೋರ್‌: ಛತ್ತೀಸ್‌ಗಢ-3 ವಿಕೆಟಿಗೆ 171 (ಹರ್‌ಪ್ರೀತ್‌ ಔಟಾಗದೆ 79, ಅಮನ್‌ದೀಪ್‌ ಔಟಾಗದೆ 45, ರಿಷಭ್‌ 33, ಶ್ರೇಯಸ್‌ ಗೋಪಾಲ್‌ 19ಕ್ಕೆ 1, ಕೌಶಿಕ್‌ 36ಕ್ಕೆ 1, ಮಿಥುನ್‌ 46ಕ್ಕೆ 1). ಕರ್ನಾಟಕ-19.2 ಓವರ್‌ಗಳಲ್ಲಿ 6 ವಿಕೆಟಿಗೆ 175 (ನಾಯರ್‌ 35, ಸುಚಿತ್‌ 34, ವಿನಯ್‌ ಔಟಾಗದೆ 34, ಮೌರ್ಯ 13ಕ್ಕೆ 2, ಶುಭಂ 35ಕ್ಕೆ 2, ವಿಶಾಲ್‌ 40ಕ್ಕೆ 2).

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.