ಸಯ್ಯದ್ ಮುಷ್ತಾಕ್ ಅಲಿ ಟಿ20: ಫೈನಲ್ ಹಾದಿಯಲ್ಲಿ ಕರ್ನಾಟ
Team Udayavani, Mar 11, 2019, 4:48 AM IST
ಇಂದೋರ್: ಸಯ್ಯದ್ ಮುಷ್ತಾಕ್ ಅಲಿ ಟಿ20 ಕ್ರಿಕೆಟ್ನಲ್ಲಿ ಕರ್ನಾಟಕ ತನ್ನ ಗೆಲುವಿನ ಓಟವನ್ನು ಮುಂದುವರಿಸಿದೆ. ಸೂಪರ್ ಲೀಗ್ನಲ್ಲಿ 3, ಲೀಗ್ನಲ್ಲಿ 7 ಸೇರಿ ಸತತ 10ನೇ ಜಯ ಸಾಧಿಸಿದೆ. ರವಿವಾರ ದಿಲ್ಲಿ ವಿರುದ್ಧ 8 ವಿಕೆಟ್ಗಳ ಜಯ ಸಾಧಿಸಿದ ಕರ್ನಾಟಕ, ಬಿ ಗುಂಪಿನಿಂದ ಫೈನಲ್ ಸ್ಥಾನವನ್ನು ಬಹುತೇಕ ಖಾತ್ರಿಪಡಿಸಿಕೊಂಡಿದೆ.
ಮೊದಲು ಬ್ಯಾಟಿಂಗ್ ಮಾಡಿದ ದಿಲ್ಲಿ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 109 ರನ್ ಗಳಿಸಿತು. ಇದನ್ನು ಬೆನ್ನತ್ತಿ ಹೊರಟ ಕರ್ನಾಟಕ ಕೇವಲ 15.3 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 112 ರನ್ ಗಳಿಸಿತು.
ದಿಲ್ಲಿ ಬ್ಯಾಟಿಂಗ್ ವೈಫಲ್ಯ
ದಿಲ್ಲಿ ಬ್ಯಾಟಿಂಗ್ನಲ್ಲಿ ಸಂಪೂರ್ಣ ವಿಫಲವಾಯಿತು. ನಿತೀಶ್ ರಾಣಾ 37 ರನ್ ಗಳಿಸಿದ್ದೇ ಗರಿಷ್ಠ ವೈಯಕ್ತಿಕ ಮೊತ್ತ. ಲಲಿತ್ ಯಾದವ್ 33 ರನ್ ಮಾಡಿದರು. ಎಡಗೈ ವೇಗಿ ವಿ. ಕೌಶಿಕ್ ಸತತ 2 ಪಂದ್ಯಗಳಲ್ಲಿ ಮಿಂಚಿ 4 ವಿಕೆಟ್ ಕಿತ್ತರು. ಲೆಗ್ಸ್ಪಿನ್ನರ್ ಕಾರಿಯಪ್ಪ 3 ವಿಕೆಟ್ ಕಬಳಿಸಿದರು.
ಕರ್ನಾಟಕ ತುಂಬು ಆತ್ಮವಿಶ್ವಾಸದಲ್ಲಿ ಬ್ಯಾಟಿಂಗ್ ಆರಂಭಿಸಿತು. ಆರಂಭಕಾರ ರೋಹನ್ ಕದಂ, ಬಿ.ಆರ್. ಶರತ್ 37 ರನ್ ಆಗಿದ್ದಾಗ ಔಟಾದರು. ಅನಂತರ ಒಟ್ಟುಗೂಡಿದ ಮಾಯಾಂಕ್ ಅಗರ್ವಾಲ್ ಹಾಗೂ ಕರುಣ್ ನಾಯರ್ ಅಜೇಯ ಜತೆಯಾಟ ದಾಖಲಿಸಿ ತಂಡವನ್ನು ದಡ ಮುಟ್ಟಿಸಿದರು. ಅಗರ್ವಾಲ್ 43 ರನ್ ಗಳಿಸಿದರೆ, ಸ್ಫೋಟಕ ಬ್ಯಾಟಿಂಗ್ ನಡೆಸಿದ ನಾಯರ್ 23 ಎಸೆತಗಳಲ್ಲಿ 42 ರನ್ ಬಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ