
ಏಕದಿನ ಸರಣಿಗೆ ನಟರಾಜನ್: ಟೆಸ್ಟ್ ನಿಂದ ಇಶಾಂತ್ ಔಟ್, ರೋಹಿತ್ ಅನಿಶ್ಚಿತತೆ ಮುಂದುವರಿಕೆ
Team Udayavani, Nov 27, 2020, 9:58 AM IST

ಸಿಡ್ನಿ: ಐಪಿಎಲ್ ನಲ್ಲಿ ನೀಡಿದ ಅದ್ಭುತ ಪ್ರದರ್ಶನದ ಕಾರಣ ಆಸೀಸ್ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿದ್ದ ತಮಿಳುನಾಡು ವೇಗಿ ಟಿ ನಟರಾಜನ್ ರನ್ನು ಏಕದಿನ ಸರಣಿಗೂ ಆಯ್ಕೆ ಮಾಡಲಾಗಿದೆ. ಆದರೆ ಗಾಯದ ಸಮಸ್ಯೆಯಿಂದ ಎನ್ ಸಿಬಿಯಲ್ಲಿರುವ ಇಶಾಂತ್ ಶರ್ಮಾ ಆಸೀಸ್ ಸರಣಿಯಿಂದ ಹೊರಬಿದ್ದಿದ್ದಾರೆ.
ಬಿಸಿಸಿಐ ಅಧಿಕೃತ ಪ್ರಕಟಣೆ ಈ ಬಗ್ಗೆ ತಿಳಿಸಿದ್ದು, ರೋಹಿತ್ ಶರ್ಮಾ ಬಗ್ಗೆ ಕಾದು ನೋಡುವ ತಂತ್ರ ಅನುಸರಿಸಿದೆ.
ರೋಹಿತ್ ಶರ್ಮಾ ಮತ್ತು ಇಶಾಂತ್ ಶರ್ಮಾ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್ ನೆಸ್ ಟ್ರೈನಿಂಗ್ ಪಡೆಯುತ್ತಿದ್ದಾರೆ. ರೋಹಿತ್ ಶರ್ಮಾ ಅವರ ಬಗ್ಗೆ ಡಿಸೆಂಬರ್ 11ರವರೆಗೆ ಕಾದು ನಂತರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಬಿಸಿಸಿಐ ತಿಳಿಸಿದೆ.
ಇದನ್ನೂ ಓದಿ:ಭಾರತ- ಆಸೀಸ್ ಮೊದಲ ಏಕದಿನ ಪಂದ್ಯ: ಟಾಸ್ ಗೆದ್ದ ಆಸೀಸ್ ಬ್ಯಾಟಿಂಗ್ : ಮಯಾಂಕ್ ಓಪನಿಂಗ್
ಆಸೀಸ್ ವಿರುದ್ಧದ ಟೆಸ್ಟ್ ಸರಣಿ ಡಿಸೆಂಬರ್ 17ರಿಂದ ಆರಂಭವಾಗಲಿದೆ. ಆಸೀಸ್ ನಲ್ಲಿ 14 ದಿನಗಳ ಕಾಲ ಕ್ವಾರಂಟೈನ್ ಅವಧಿ ಇರುವ ಕಾರಣ ಡಿ.11ರ ನಂತರ ರೋಹಿತ್ ತೆರಳಿದರೆ ಮೊದಲ ಎರಡು ಟೆಸ್ಟ್ ಪಂದ್ಯಗಳನ್ನು ತಪ್ಪಿಸಿಕೊಳ್ಳಲಿದ್ದಾರೆ.
ನಟರಾಜನ್ ಆಯ್ಕೆ: ವೇಗಿ ನವದೀಪ್ ಸೈನಿ ಗಾಯಗೊಂಡಿದ್ದ ಕಾರಣ ನಟರಾಜನ್ ಅವರನ್ನು ಏಕದಿನ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಆದರೆ ನವದೀಪ್ ಸೈನಿ ಫಿಟ್ ಆಗಿದ್ದು, ಇಂದಿನ ಪಂದ್ಯದಲ್ಲಿ ಆಡಲಿಳಿದಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವನಿತಾ ಅಂಡರ್ 19 ವಿಶ್ವಕಪ್: ಕಿವೀಸ್ ವಿರುದ್ಧ ಗೆದ್ದು ಫೈನಲ್ ಪ್ರವೇಶಿಸಿದ ಟೀಂ ಇಂಡಿಯಾ

ರಾಹುಲ್-ಅಥಿಯಾ ಮದುವೆಗೆ ದುಬಾರಿ ಗಿಫ್ಟ್ ಬಂದಿದ್ದು ನಿಜವೇ? ಇಲ್ಲಿದೆ ಸ್ಪಷ್ಟನೆ

ರನ್ನರ್ ಅಪ್ ಪ್ರಶಸ್ತಿಯೊಂದಿಗೆ ಸಾನಿಯಾ ಮಿರ್ಜಾ ಸುದೀರ್ಘ ಗ್ರ್ಯಾಂಡ್ ಸ್ಲ್ಯಾಮ್ ಪಯಣ ಅಂತ್ಯ

ಅ-19 ಮಹಿಳಾ ಟಿ20 ವಿಶ್ವಕಪ್: ಇಂದು ಭಾರತ-ನ್ಯೂಜಿಲೆಂಡ್ ಉಪಾಂತ್ಯ

ಪುರುಷರ ಹಾಕಿ ವಿಶ್ವಕಪ್: ಇಂದು ಸೆಮಿಫೈನಲ್ ಹೋರಾಟ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
