ಟಿ20 ಬೌಲಿಂಗ್ ರ್ಯಾಂಕಿಂಗ್: ಒಮ್ಮೆಲೇ 20 ಸ್ಥಾನ ಜಿಗಿದ ಲಸಿತ ಮಾಲಿಂಗ
Team Udayavani, Sep 8, 2019, 5:22 AM IST
ದುಬಾೖ: ನ್ಯೂಜಿಲ್ಯಾಂಡ್ ಎದುರಿನ ಅಂತಿಮ ಟಿ20 ಪಂದ್ಯದಲ್ಲಿ ಸತತ 4 ಎಸೆತಗಳಲ್ಲಿ 4 ವಿಕೆಟ್ ಉರುಳಿಸಿ, ಒಟ್ಟು 6 ರನ್ನಿಗೆ ಐವರನ್ನು ಪೆವಿಲಿಯನ್ನಿಗೆ ಅಟ್ಟಿ ಮ್ಯಾಜಿಕ್ ಮಾಡಿದ ಶ್ರೀಲಂಕಾದ ಲಸಿತ ಮಾಲಿಂಗ ನೂತನ ಟಿ20 ಬೌಲಿಂಗ್ ರ್ಯಾಂಕಿಂಗ್ನಲ್ಲಿ ಭರ್ಜರಿ ನೆಗೆತ ಕಂಡಿದ್ದಾರೆ. ಒಮ್ಮೆಲೇ 20 ಸ್ಥಾನ ಮೇಲೇರಿ 21ನೇ ಸ್ಥಾನ ಅಲಂಕರಿಸಿದ್ದಾರೆ.
ಲಸಿತ ಮಾಲಿಂಗ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 2 ಸಲ ಸತತ 4 ಎಸೆತಗಳಲ್ಲಿ 4 ವಿಕೆಟ್ ಹಾರಿಸಿದ ವಿಶ್ವದ ಮೊದಲ ಬೌಲಿಂಗ್ ಸಾಧಕ. ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಮಾಲಿಂಗ ಸಾಧಿಸಿದ 5ನೇ ಹ್ಯಾಟ್ರಿಕ್ ಇದಾಗಿದೆ. ಈ ಸಾಧನೆ ಯೊಂದಿಗೆ ಟಿ20 ಕ್ರಿಕೆಟ್ನಲ್ಲಿ 100 ವಿಕೆಟ್ ಉರುಳಿಸಿದ ಮೊದಲ ಬೌಲರ್ ಎಂಬ ದಾಖಲೆಗೂ ಪಾತ್ರರಾದರು. ಅವರೀಗ 76 ಟಿ20 ಪಂದ್ಯಗಳಿಂದ 104 ವಿಕೆಟ್ ಕೆಡವಿದ್ದಾರೆ.
ರಶೀದ್ , ಆಜಂ ನಂ.1
ಅಫ್ಘಾನಿಸ್ಥಾನದ ರಶೀದ್ ಖಾನ್ ಬೌಲಿಂಗ್ ರ್ಯಾಂಕಿಂಗ್ ಯಾದಿಯ ಅಗ್ರಸ್ಥಾನ ಅಲಂಕರಿಸಿದ್ದಾರೆ. ನ್ಯೂಜಿಲ್ಯಾಂಡ್ನ ಎಡಗೈ ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್ ಅವರದು 6 ಸ್ಥಾನಗಳ ಪ್ರಗತಿ. ಅವರೀಗ 5ನೇ ಸ್ಥಾನ ತಲುಪಿದ್ದಾರೆ. ಕುಲದೀಪ್ ಟಾಪ್-10 ಯಾದಿಯಲ್ಲಿರುವ ಭಾರತದ ಏಕೈಕ ಬೌಲರ್ (8).
ಟಿ20 ಬ್ಯಾಟಿಂಗ್ ರ್ಯಾಂಕಿಂಗ್ನಲ್ಲಿ ಪಾಕಿಸ್ಥಾನದ ಬಾಬರ್ ಆಜಂ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಕಾಲಿನ್ ಮುನ್ರೊ 2ರಿಂದ 3ಕ್ಕೆ ಇಳಿದರೆ, ಗ್ಲೆನ್ ಮ್ಯಾಕ್ಸ್ವೆಲ್ 3ರಿಂದ 2ನೇ ಸ್ಥಾನ ತಲುಪಿದ್ದಾರೆ. ಟಾಪ್-10 ಯಾದಿಯಲ್ಲಿರುವ ಭಾರತದ ಬ್ಯಾಟ್ಸ್ ಮನ್ಗಳೆಂದರೆ ಕೆ.ಎಲ್. ರಾಹುಲ್ (7) ಮತ್ತು ರೋಹಿತ್ ಶರ್ಮ (10).
ಮ್ಯಾಕ್ಸ್ವೆಲ್ ನಂ.1 ಆಲ್ರೌಂಡರ್
ಆಸ್ಟ್ರೇಲಿಯದ ಗ್ಲೆನ್ ಮ್ಯಾಕ್ಸ್ವೆಲ್ ಟಿ20ಯ ಅಗ್ರಮಾನ್ಯ ಆಲ್ರೌಂಡರ್ ಆಗಿದ್ದಾರೆ (390 ಅಂಕ). ದ್ವಿತೀಯ ಸ್ಥಾನದಲ್ಲಿರುವವರು ಬಾಂಗ್ಲಾದೇಶದ ಶಕಿಬ್ ಅಲ್ ಹಸನ್ (339). ಇವರಿಬ್ಬರ ನಡುವೆ 51 ಅಂಕಗಳ ಅಂತರವಿದೆ. ಅಫ್ಘಾನಿಸ್ಥಾನದ ಮೊಹಮ್ಮದ್ ನಬಿ 3ನೇ, ಬಾಂಗ್ಲಾದ ಮಹಮದುಲ್ಲ 4ನೇ ಸ್ಥಾನದಲ್ಲಿದ್ದಾರೆ. ಅಗ್ರ ಹತ್ತರಲ್ಲಿ ಭಾರತದ ಯಾವುದೇ ಕ್ರಿಕೆಟಿಗರಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ