T20 series; ಯುಎಸ್ ವಿರುದ್ಧ ಸರಣಿ ಸೋತ ಬಾಂಗ್ಲಾ ಹುಲಿಗಳು; ಎರಡನೇ ಪಂದ್ಯದಲ್ಲೂ ಸೋಲು


Team Udayavani, May 24, 2024, 8:08 AM IST

T20 series; Bangladesh lost series against USA

ಹ್ಯೂಸ್ಟನ್: ಟಿ20 ವಿಶ್ವಕಪ್ ತಯಾರಿಗೆಂದು ಯುಎಸ್ ಪ್ರವಾಸ ನಡೆಸಿದ ಬಾಂಗ್ಲಾದೇಶ ತಂಡ ಸರಣಿ ಸೋಲಿನ ಅವಮಾನ ಎದುರಿಸಿದೆ. ಮೊದಲ ಟಿ20 ಪಂದ್ಯದಲ್ಲಿ ಅಚ್ಚರಿಯ ರೀತಿಯಲ್ಲಿ ಗೆಲುವು ಕಂಡಿದ್ದ ಯುಎಸ್, ಇದೀಗ ಎರಡನೇ ಪಂದ್ಯದಲ್ಲೂ ಗೆದ್ದು ಸರಣಿ ಜಯ ಸಾಧಿಸಿದೆ.

ಹೂಸ್ಟನ್ ಪ್ರೈರೀ ವ್ಯೂ ಕ್ರಿಕೆಟ್ ಕಾಂಪ್ಲೆಕ್ಸ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಯುಎಸ್ ಆರು ವಿಕೆಟ್ ನಷ್ಟಕ್ಕೆ 144 ರನ್ ಮಾಡಿದರೆ, ಬಾಂಗ್ಲಾದೇಶ ತಂಡವು 138 ರನ್ ಗಳಿಗೆ ಆಲೌಟಾಯಿತು. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಯುಎಸ್ 2-0 ಅಂತರದ ಮುನ್ನಡೆ ಸಾಧಿಸಿದೆ.

ಟಾಸ್ ಸೋತು ಬ್ಯಾಟಿಂಗ್ ಅವಕಾಶ ಪಡೆದ ಯುಎಸ್ ಸ್ಟೀವನ್ ಟೇಲರ್ ಮತ್ತು ನಾಯಕ ಮೊನಾಂಕ್ ಪಟೇಲ್ ಉತ್ತಮ ಆರಂಭ ಒದಗಿಸಿದರು. ಸ್ಟೀವನ್ 31 ರನ್ ಮಾಡಿದರೆ ಪಟೇಲ್ 42 ರನ್ ಗಳಿಸಿದರು. ಉಳಿದಂತೆ ಆ್ಯರೋನ್ ಜೋನ್ಸ್ 35 ರನ್ ಗಳಿಸಿದರು.

ಬಾಂಗ್ಲಾ ಪರ ಮುಸ್ತಫಿಜುರ್, ಶೊರಿಫುಲ್ ಇಸ್ಲಾಂ ಮತ್ತು ರಿಷಾದ್ ಹೊಸೈನ್ ತಲಾ ಎರಡು ವಿಕೆಟ್ ಕಿತ್ತರು.

ಗುರಿ ಬೆನ್ನಟ್ಟಿದ ಬಾಂಗ್ಲಾ ಮೊದಲ ಓವರ್ ನಲ್ಲೇ ಸೌಮ್ಯ ಸರ್ಕಾರ್ ವಿಕೆಟ್ ಕಳೆದುಕೊಂಡಿತು. ನಾಯಕ ನಜ್ಮುಲ್ ಶಾಂಟೋ 36 ರನ್ ಗಳಿಸಿದರೆ, ಅನುಭವಿ ಶಕೀಬ್ 30 ರನ್ ಮಾಡಿದರು. ಆದರೆ ಬಳಿಕ ಸತತ ವಿಕೆಟ್ ಕಳೆದುಕೊಂಡ ಬಾಂಗ್ಲಾ ಸೋಲಿಗೆ ಶರಣಾಯಿತು.

ಯುಎಸ್ ಪರ ಆಲಿ ಖಾನ್ ಮೂರು ವಿಕೆಟ್ ಪಡೆದರೆ, ಸೌರಭ್ ನೇತ್ರಾವಲ್ಕರ್ ಮತ್ತು ಶಾಡ್ಲೆ ವ್ಯಾನ್ ಎರಡು ವಿಕೆಟ್ ಕಿತ್ತರು. ಪೂರ್ಣ ಪ್ರಮಾಣದ ತಂಡದೆದುರು ಮೊದಲ ಬಾರಿಗೆ ಯುಎಸ್ ಟಿ20 ಸರಣಿ ಜಯ ಸಾಧಿಸಿತು.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

1-paris-11

Paris Olympics; ಸೀನ್ ನದಿಯ ಉದ್ದಕ್ಕೂ ನಡೆದ ಅತ್ಯಾಕರ್ಷಕ ಉದ್ಘಾಟನಾ ಸಮಾರಂಭ

Suryakumar Yadav

Leadership ನಾನು ಸಂಭ್ರಮಿಸುತ್ತೇನೆ, ಕೆಲವು ನಾಯಕರಿಂದ ಹಲವು ಕಲಿತಿದ್ದೇನೆ: ಸೂರ್ಯ ಕುಮಾರ್

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.