ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಬೌಲಿಂಗ್‌ನಲ್ಲಿ ಮಹಮ್ಮದ್‌ ಶಮಿಗೆ 3 ವಿಕೆಟ್‌

Team Udayavani, Oct 18, 2021, 11:16 PM IST

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ದುಬೈ: ಟಿ20 ವಿಶ್ವಕಪ್‌ ಆರಂಭಕ್ಕೂ ಮುನ್ನ ನಡೆದ ಅಭ್ಯಾಸ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ನೇತೃತ್ವದ ಭಾರತ ತಂಡ ಇಂಗ್ಲೆಂಡ್‌ ವಿರುದ್ಧ ಅಭೂತ ಗೆಲುವು ಸಾಧಿಸಿದೆ.

ಟಾಸ್‌ ಗೆದ್ದು ಬೌಲಿಂಗ್‌ ಆರಿಸಿಕೊಂಡಿದ್ದ ಕೊಹ್ಲಿಗೆ ಬೌಲರ್‌ಗಳಿಂದ ಅಷ್ಟೇನೂ ಬೆಂಬಲ ಸಿಗಲಿಲ್ಲ. ಹೀಗಾಗಿ ಇಂಗ್ಲೆಂಡ್‌ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 188 ರನ್‌ ಗಳಿಸಿತ್ತು. 189 ರನ್‌ಗಳ ಗುರಿ ಬೆನ್ನತ್ತಿದ ಭಾರತಕ್ಕೆ ಉತ್ತಮ ಆರಂಭ ಸಿಕ್ಕಿತು. ಇಶಾನ್‌ ಕಿಶನ್‌ 70, ಕೆ.ಎಲ್‌.ರಾಹುಲ್‌ 51 ರನ್‌ ಗಳಿಸಿ ಭದ್ರ ಬುನಾದಿ ಹಾಕಿಕೊಟ್ಟರು. ಬಳಿಕ ಬಂದ ವಿರಾಟ್‌ ಕೊಹ್ಲಿ ಬೇಗನೇ ನಿರ್ಗಮಿಸಿದರು. ರಿಷಭ್‌ ಪಂತ್‌ ಮತ್ತು ಹಾರ್ದಿಕ್‌ ಪಾಂಡ್ಯ ತಂಡವನ್ನು ಗೆಲುವಿನ ದಡಕ್ಕೆ ಹತ್ತಿಸಿದರು. ಕೊಹ್ಲಿ ಮತ್ತು ಸೂರ್ಯಕುಮಾರ್‌ ಮಾತ್ರ ಕಡಿಮೆ ಮೊತ್ತಕ್ಕೆ ಔಟಾದರು.  ಕಡೆಗೆ 19 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 192 ರನ್‌ ಗಳಿಸಿ ಭಾರತ ಜಯದ ನಗೆ ಬೀರಿತು.

ಇದಕ್ಕೂ ಮುನ್ನ ಬ್ಯಾಟಿಂಗ್‌ ನಡೆಸಿದ್ದ ಇಂಗ್ಲೆಂಡ್‌ ಜಾನಿ ಬೇರ್‌ಸ್ಟೊ ಮತ್ತು ಮೊಯಿನ್‌ ಅಲಿ ಅವರ ಮಿಂಚಿನ ಆಟದಿಂದ ಉತ್ತಮ ಮೊತ್ತವನ್ನೇ ಗಳಿಸಿತ್ತು,

ಬೇರ್‌ಸ್ಟೊ 36 ಎಸೆತಗಳಿಂದ ಸರ್ವಾಧಿಕ 49 ರನ್‌ ಬಾರಿಸಿದರೆ (4 ಬೌಂಡರಿ, 1 ಸಿಕ್ಸರ್‌), ಅಲಿ ಬರೀ 20 ಎಸೆತಗಳಿಂದ 43 ರನ್‌ ಮಾಡಿ ಅಜೇಯರಾಗಿ ಉಳಿದರು (4 ಫೋರ್‌, 2 ಸಿಕ್ಸರ್‌).

ಬೌಲಿಂಗ್‌ ಆಯ್ದುಕೊಂಡ ಭಾರತ ಪವರ್‌ ಪ್ಲೇ ಒಳಗಾಗಿ ಇಂಗ್ಲೆಂಡ್‌ ಆರಂಭಿಕರಿಬ್ಬರನ್ನೂ ಔಟ್‌ ಮಾಡಲು ಯಶಸ್ವಿಯಾಯಿತು. ಜಾಸ್‌ ಬಟ್ಲರ್‌ (18) ಮತ್ತು ಜಾಸನ್‌ ರಾಯ್‌ (17) ಇಬ್ಬರನ್ನೂ ಶಮಿ ಸತತ ಓವರ್‌ಗಳಲ್ಲಿ ಕೆಡವಿದರು. ಆರಂಭಿಕರಿಂದ 3.4 ಓವರ್‌ಗಳಿಂದ 36 ರನ್‌ ಒಟ್ಟುಗೂಡಿತು. ಮೊದಲ 6 ಓವರ್‌ಗಳಲ್ಲಿ ಇಂಗ್ಲೆಂಡ್‌ 2 ವಿಕೆಟಿಗೆ 51 ರನ್‌ ಗಳಿಸಿತು.

ಡೇವಿಡ್‌ ಮಾಲನ್‌ ಕೂಡ ಇನ್ನಿಂಗ್ಸ್‌ ವಿಸ್ತರಿಸಲು ವಿಫ‌ಲರಾದರು. ಅವರ ಆಟ 18 ರನ್ನಿಗೆ ಮುಗಿಯಿತು. ಈ ವಿಕೆಟ್‌ ಉರುಳಿಸಿದವರು ರಾಹುಲ್‌ ಚಹರ್‌. 10 ಓವರ್‌ ಅಂತ್ಯಕ್ಕೆ 3ಕ್ಕೆ 79 ರನ್‌ ಮಾಡಿದ್ದ ಇಂಗ್ಲೆಂಡ್‌ ಉತ್ತಮ ಮೊತ್ತದ ಸೂಚನೆ ನೀಡಿತು. 12.3 ಓವರ್‌ಗಳಲ್ಲಿ ಇಂಗ್ಲೆಂಡ್‌ ಮೊತ್ತ ನೂರರ ಗಡಿ ಮುಟ್ಟಿತು. ಬೇರ್‌ಸ್ಟೊ-ಲಿವಿಂಗ್‌ಸ್ಟೋನ್‌ 4ನೇ ವಿಕೆಟಿಗೆ 52 ರನ್‌ ಪೇರಿಸಿದರು. ಈ ಜೋಡಿಯನ್ನು ಶಮಿ ಬೇರ್ಪಡಿಸಿದರು. ಲಿವಿಂಗ್‌ಸ್ಟೋನ್‌ ಗಳಿಕೆ 20 ಎಸೆತಗಳಿಂದ 30 ರನ್‌ (4 ಬೌಂಡರಿ, 1 ಸಿಕ್ಸರ್‌). ಶಮಿ ಸಾಧನೆ 40ಕ್ಕೆ 3 ವಿಕೆಟ್‌.

ಬಹಳ ಸಮಯದ ಬಳಿಕ ಭಾರತದ ಪರ ಟಿ20 ಪಂದ್ಯ ಆಡಿದ ಅನುಭವಿ ಸ್ಪಿನ್ನರ್‌ ಆರ್‌. ಅಶ್ವಿ‌ನ್‌ ವಿಕೆಟ್‌ ಉರುಳಿಸುವಲ್ಲಿ ವಿಫ‌ಲರಾದರೂ 4 ಓವರ್‌ಗಳಲ್ಲಿ ಕೇವಲ 23 ರನ್‌ ನೀಡಿ ಉತ್ತಮ ನಿಯಂತ್ರಣ ಸಾಧಿಸಿದರು.

ಭುವನೇಶ್ವರ್‌ ಬಹಳ ದುಬಾರಿಯಾದರು. ಅವರ ಅಂತಿಮ ಓವರ್‌ನಲ್ಲಿ 21 ರನ್‌ ಸೋರಿ ಹೋಯಿತು. ಅಷ್ಟೂ ರನ್‌ ಮೊಯಿನ್‌ ಅಲಿ ಬಾರಿಸಿದರು. ಕೊನೆಯ 2 ಎಸೆತಗಳಲ್ಲಿ ಸಿಕ್ಸರ್‌ ಸಿಡಿಸಿದರು. ಭುವನೇಶ್ವರ್‌ 4 ಓವರ್‌ಗಳಿಂದ 54 ರನ್‌ ನೀಡಿದರು.

ಸಂಕ್ಷಿಪ್ತ ಸ್ಕೋರ್‌:ಇಂಗ್ಲೆಂಡ್‌-5 ವಿಕೆಟಿಗೆ 188 (ಬೇರ್‌ಸ್ಟೊ 49, ಅಲಿ ಔಟಾಗದೆ 43, ಲಿವಿಂಗ್‌ಸ್ಟೋನ್‌ 30, ಶಮಿ 40ಕ್ಕೆ 3).ಭಾರತ – 3 ವಿಕೆಟ್‌ಗೆ 192 (ಇಶನ್‌ ಕಿಶನ್‌ 70, ಕೆ.ಎಲ್‌. ರಾಹುಲ್‌ 51, ಡೆವಿಡ್‌ ವಿಲ್ಲಿ 16ಕ್ಕೆ 1)

ಟಾಪ್ ನ್ಯೂಸ್

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.