ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಬೌಲಿಂಗ್‌ನಲ್ಲಿ ಮಹಮ್ಮದ್‌ ಶಮಿಗೆ 3 ವಿಕೆಟ್‌

Team Udayavani, Oct 18, 2021, 11:16 PM IST

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ದುಬೈ: ಟಿ20 ವಿಶ್ವಕಪ್‌ ಆರಂಭಕ್ಕೂ ಮುನ್ನ ನಡೆದ ಅಭ್ಯಾಸ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ನೇತೃತ್ವದ ಭಾರತ ತಂಡ ಇಂಗ್ಲೆಂಡ್‌ ವಿರುದ್ಧ ಅಭೂತ ಗೆಲುವು ಸಾಧಿಸಿದೆ.

ಟಾಸ್‌ ಗೆದ್ದು ಬೌಲಿಂಗ್‌ ಆರಿಸಿಕೊಂಡಿದ್ದ ಕೊಹ್ಲಿಗೆ ಬೌಲರ್‌ಗಳಿಂದ ಅಷ್ಟೇನೂ ಬೆಂಬಲ ಸಿಗಲಿಲ್ಲ. ಹೀಗಾಗಿ ಇಂಗ್ಲೆಂಡ್‌ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 188 ರನ್‌ ಗಳಿಸಿತ್ತು. 189 ರನ್‌ಗಳ ಗುರಿ ಬೆನ್ನತ್ತಿದ ಭಾರತಕ್ಕೆ ಉತ್ತಮ ಆರಂಭ ಸಿಕ್ಕಿತು. ಇಶಾನ್‌ ಕಿಶನ್‌ 70, ಕೆ.ಎಲ್‌.ರಾಹುಲ್‌ 51 ರನ್‌ ಗಳಿಸಿ ಭದ್ರ ಬುನಾದಿ ಹಾಕಿಕೊಟ್ಟರು. ಬಳಿಕ ಬಂದ ವಿರಾಟ್‌ ಕೊಹ್ಲಿ ಬೇಗನೇ ನಿರ್ಗಮಿಸಿದರು. ರಿಷಭ್‌ ಪಂತ್‌ ಮತ್ತು ಹಾರ್ದಿಕ್‌ ಪಾಂಡ್ಯ ತಂಡವನ್ನು ಗೆಲುವಿನ ದಡಕ್ಕೆ ಹತ್ತಿಸಿದರು. ಕೊಹ್ಲಿ ಮತ್ತು ಸೂರ್ಯಕುಮಾರ್‌ ಮಾತ್ರ ಕಡಿಮೆ ಮೊತ್ತಕ್ಕೆ ಔಟಾದರು.  ಕಡೆಗೆ 19 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 192 ರನ್‌ ಗಳಿಸಿ ಭಾರತ ಜಯದ ನಗೆ ಬೀರಿತು.

ಇದಕ್ಕೂ ಮುನ್ನ ಬ್ಯಾಟಿಂಗ್‌ ನಡೆಸಿದ್ದ ಇಂಗ್ಲೆಂಡ್‌ ಜಾನಿ ಬೇರ್‌ಸ್ಟೊ ಮತ್ತು ಮೊಯಿನ್‌ ಅಲಿ ಅವರ ಮಿಂಚಿನ ಆಟದಿಂದ ಉತ್ತಮ ಮೊತ್ತವನ್ನೇ ಗಳಿಸಿತ್ತು,

ಬೇರ್‌ಸ್ಟೊ 36 ಎಸೆತಗಳಿಂದ ಸರ್ವಾಧಿಕ 49 ರನ್‌ ಬಾರಿಸಿದರೆ (4 ಬೌಂಡರಿ, 1 ಸಿಕ್ಸರ್‌), ಅಲಿ ಬರೀ 20 ಎಸೆತಗಳಿಂದ 43 ರನ್‌ ಮಾಡಿ ಅಜೇಯರಾಗಿ ಉಳಿದರು (4 ಫೋರ್‌, 2 ಸಿಕ್ಸರ್‌).

ಬೌಲಿಂಗ್‌ ಆಯ್ದುಕೊಂಡ ಭಾರತ ಪವರ್‌ ಪ್ಲೇ ಒಳಗಾಗಿ ಇಂಗ್ಲೆಂಡ್‌ ಆರಂಭಿಕರಿಬ್ಬರನ್ನೂ ಔಟ್‌ ಮಾಡಲು ಯಶಸ್ವಿಯಾಯಿತು. ಜಾಸ್‌ ಬಟ್ಲರ್‌ (18) ಮತ್ತು ಜಾಸನ್‌ ರಾಯ್‌ (17) ಇಬ್ಬರನ್ನೂ ಶಮಿ ಸತತ ಓವರ್‌ಗಳಲ್ಲಿ ಕೆಡವಿದರು. ಆರಂಭಿಕರಿಂದ 3.4 ಓವರ್‌ಗಳಿಂದ 36 ರನ್‌ ಒಟ್ಟುಗೂಡಿತು. ಮೊದಲ 6 ಓವರ್‌ಗಳಲ್ಲಿ ಇಂಗ್ಲೆಂಡ್‌ 2 ವಿಕೆಟಿಗೆ 51 ರನ್‌ ಗಳಿಸಿತು.

ಡೇವಿಡ್‌ ಮಾಲನ್‌ ಕೂಡ ಇನ್ನಿಂಗ್ಸ್‌ ವಿಸ್ತರಿಸಲು ವಿಫ‌ಲರಾದರು. ಅವರ ಆಟ 18 ರನ್ನಿಗೆ ಮುಗಿಯಿತು. ಈ ವಿಕೆಟ್‌ ಉರುಳಿಸಿದವರು ರಾಹುಲ್‌ ಚಹರ್‌. 10 ಓವರ್‌ ಅಂತ್ಯಕ್ಕೆ 3ಕ್ಕೆ 79 ರನ್‌ ಮಾಡಿದ್ದ ಇಂಗ್ಲೆಂಡ್‌ ಉತ್ತಮ ಮೊತ್ತದ ಸೂಚನೆ ನೀಡಿತು. 12.3 ಓವರ್‌ಗಳಲ್ಲಿ ಇಂಗ್ಲೆಂಡ್‌ ಮೊತ್ತ ನೂರರ ಗಡಿ ಮುಟ್ಟಿತು. ಬೇರ್‌ಸ್ಟೊ-ಲಿವಿಂಗ್‌ಸ್ಟೋನ್‌ 4ನೇ ವಿಕೆಟಿಗೆ 52 ರನ್‌ ಪೇರಿಸಿದರು. ಈ ಜೋಡಿಯನ್ನು ಶಮಿ ಬೇರ್ಪಡಿಸಿದರು. ಲಿವಿಂಗ್‌ಸ್ಟೋನ್‌ ಗಳಿಕೆ 20 ಎಸೆತಗಳಿಂದ 30 ರನ್‌ (4 ಬೌಂಡರಿ, 1 ಸಿಕ್ಸರ್‌). ಶಮಿ ಸಾಧನೆ 40ಕ್ಕೆ 3 ವಿಕೆಟ್‌.

ಬಹಳ ಸಮಯದ ಬಳಿಕ ಭಾರತದ ಪರ ಟಿ20 ಪಂದ್ಯ ಆಡಿದ ಅನುಭವಿ ಸ್ಪಿನ್ನರ್‌ ಆರ್‌. ಅಶ್ವಿ‌ನ್‌ ವಿಕೆಟ್‌ ಉರುಳಿಸುವಲ್ಲಿ ವಿಫ‌ಲರಾದರೂ 4 ಓವರ್‌ಗಳಲ್ಲಿ ಕೇವಲ 23 ರನ್‌ ನೀಡಿ ಉತ್ತಮ ನಿಯಂತ್ರಣ ಸಾಧಿಸಿದರು.

ಭುವನೇಶ್ವರ್‌ ಬಹಳ ದುಬಾರಿಯಾದರು. ಅವರ ಅಂತಿಮ ಓವರ್‌ನಲ್ಲಿ 21 ರನ್‌ ಸೋರಿ ಹೋಯಿತು. ಅಷ್ಟೂ ರನ್‌ ಮೊಯಿನ್‌ ಅಲಿ ಬಾರಿಸಿದರು. ಕೊನೆಯ 2 ಎಸೆತಗಳಲ್ಲಿ ಸಿಕ್ಸರ್‌ ಸಿಡಿಸಿದರು. ಭುವನೇಶ್ವರ್‌ 4 ಓವರ್‌ಗಳಿಂದ 54 ರನ್‌ ನೀಡಿದರು.

ಸಂಕ್ಷಿಪ್ತ ಸ್ಕೋರ್‌:ಇಂಗ್ಲೆಂಡ್‌-5 ವಿಕೆಟಿಗೆ 188 (ಬೇರ್‌ಸ್ಟೊ 49, ಅಲಿ ಔಟಾಗದೆ 43, ಲಿವಿಂಗ್‌ಸ್ಟೋನ್‌ 30, ಶಮಿ 40ಕ್ಕೆ 3).ಭಾರತ – 3 ವಿಕೆಟ್‌ಗೆ 192 (ಇಶನ್‌ ಕಿಶನ್‌ 70, ಕೆ.ಎಲ್‌. ರಾಹುಲ್‌ 51, ಡೆವಿಡ್‌ ವಿಲ್ಲಿ 16ಕ್ಕೆ 1)

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.