ಟಿ20 ವಿಶ್ವಕಪ್ 2021: ಪಾಕಿಸ್ಥಾನ ಅಜೇಯ ಓಟ


Team Udayavani, Nov 7, 2021, 11:05 PM IST

ಟಿ20 ವಿಶ್ವಕಪ್ 2021: ಪಾಕಿಸ್ಥಾನ ಅಜೇಯ ಓಟ

ಶಾರ್ಜಾ: ಸ್ಕಾಟ್ಲೆಂಡ್‌ ವಿರುದ್ಧದ ತನ್ನ ಅಂತಿಮ ಸೂಪರ್‌-12 ಪಂದ್ಯವನ್ನು 72 ರನ್ನುಗಳಿಂದ ಗೆದ್ದ ಪಾಕಿಸ್ಥಾನ ಅಜೇಯವಾಗಿ ಸೆಮಿಫೈನಲ್‌ ತಲುಪಿದೆ.

ಪಾಕ್‌ 4 ವಿಕೆಟಿಗೆ 189 ರನ್‌ ಬಾರಿಸಿ ಸವಾಲೊಡ್ಡಿದರೆ, ಸ್ಕಾಟ್ಲೆಂಡ್‌ 6 ವಿಕೆಟಿಗೆ 117 ರನ್‌ ಮಾಡಿ ಎಲ್ಲ 5 ಪಂದ್ಯಗಳಲ್ಲಿ ಸೋಲುಂಡಿತು.

ಗ್ರೂಪ್‌ ಎರಡರ ಅಗ್ರಸ್ಥಾನಿಯಾದ ಪಾಕಿಸ್ಥಾನ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯವನ್ನು ಎದುರಿಸಲಿದೆ. ಮೊದಲ ಸೆಮಿಫೈನಲ್‌ ಇಂಗ್ಲೆಂಡ್‌-ನ್ಯೂಜಿಲ್ಯಾಂಡ್‌ ನಡುವೆ ನಡೆಯಲಿದೆ.

ನಾಯಕ ಬಾಬರ್‌ ಆಜಂ ಮತ್ತು ಶೋಯಿಬ್‌ ಮಲಿಕ್‌ ಅವರ ಅರ್ಧ ಶತಕ ಪಾಕಿಸ್ಥಾನ ಸರದಿಯ ಆಕರ್ಷಣೆಯಾಗಿತ್ತು. 18ನೇ ಓವರ್‌ ತನಕ ಕ್ರೀಸ್‌ ಆಕ್ರಮಿಸಿಕೊಂಡ ಬಾಬರ್‌ 47 ಎಸೆತ ಎದುರಿಸಿ 66 ರನ್‌ ಬಾರಿಸಿದರು. ಸ್ಕಾಟ್ಲೆಂಡ್‌ ಬೌಲರ್‌ಗಳನ್ನು ದಂಡಿಸುತ್ತ ಸಾಗಿ 5 ಬೌಂಡರಿ, 3 ಸಿಕ್ಸರ್‌ ಸಿಡಿಸಿದರು.

ಇದನ್ನೂ ಓದಿ:ಮುಸ್ಲಿಮೇತರರಿಗೆ ಕೌಟುಂಬಿಕ ಕಾನೂನು ಸವಲತ್ತು : ಅಬುಧಾಬಿ ಸರ್ಕಾರದಿಂದ ಮಹತ್ವದ ನಿರ್ಧಾರ

ಕಪ್ತಾನನಿಗೆ ಅನುಭವಿ ಮೊಹಮ್ಮದ್‌ ಹಫೀಜ್‌ (31) ಉತ್ತಮ ಬೆಂಬಲವಿತ್ತರು. 3ನೇ ವಿಕೆಟಿಗೆ 53 ರನ್‌ ಒಟ್ಟುಗೂಡಿತು. ಕೊನೆಯಲ್ಲಿ ಶೋಯಿಬ್‌ ಮಲಿಕ್‌ ಬಿರುಸಿನ ಆಟಕ್ಕಿಳಿದರು. ಕೇವಲ 18 ಎಸೆತಗಳಿಂದ 54 ರನ್‌ ಬಾರಿಸಿದರು. ಈ ಸಿಡಿಲಬ್ಬರ ಆಟದಲ್ಲಿ 6 ಪ್ರಚಂಡ ಸಿಕ್ಸರ್‌, ಒಂದು ಬೌಂಡರಿ ಸೇರಿತ್ತು. ಇನ್ನಿಂಗ್ಸಿನ ಕೊನೆಯ 4 ಎಸೆತಗಳಲ್ಲಿ ಒಂದು ಫೋರ್‌ ಹಾಗೂ 3 ಸಿಕ್ಸರ್‌ ಎತ್ತಿ ಅಬ್ಬರಿಸಿದರು. ಇದರೊಂದಿಗೆ ಟಿ20 ವಿಶ್ವಕಪ್‌ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ ಅರ್ಧ ಶತಕ ಹೊಡೆದ ಪಾಕ್‌ ದಾಖಲೆ ಸ್ಥಾಪಿಸಿದರು.

ಸಂಕ್ಷಿಪ್ತ ಸ್ಕೋರ್‌: ಪಾಕಿಸ್ಥಾನ-4 ವಿಕೆಟಿಗೆ 189 (ಮಲಿಕ್‌ ಔಟಾಗದೆ 54, ಬಾಬರ್‌ 66, ಹಫೀಜ್‌ 31, ಗ್ರೀವ್ಸ್‌ 43ಕ್ಕೆ 2). ಸ್ಕಾಟ್ಲೆಂಡ್‌-6 ವಿಕೆಟಿಗೆ 117 (ಬೆರಿಂಗ್ಟನ್‌ ಅಜೇಯ 54, ಮುನ್ಸಿ 17, ಶದಾಬ್‌ 14ಕ್ಕೆ 2).

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.