ಹೋಲಿಕೆಗೆ ಕೊನೆಯಿಲ್ಲ ,ಸ್ವಾರಸ್ಯಕ್ಕೆ  ಸಾಟಿಯಿಲ್ಲ

ಏಕದಿನ ವಿಶ್ವಕಪ್‌ 1992-ಟಿ20 ವಿಶ್ವಕಪ್‌ 2022

Team Udayavani, Nov 12, 2022, 8:15 AM IST

ಹೋಲಿಕೆಗೆ ಕೊನೆಯಿಲ್ಲ ,ಸ್ವಾರಸ್ಯಕ್ಕೆ  ಸಾಟಿಯಿಲ್ಲ

ಮೆಲ್ಬರ್ನ್: ಐರ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ ಮಣ್ಣು ಮುಕ್ಕುತ್ತದೆ, ಆ ಇಂಗ್ಲೆಂಡ್‌ ನೆಚ್ಚಿನ ಭಾರತವನ್ನು 10 ವಿಕೆಟ್‌ಗಳಿಂದ ಉರುಳಿಸಿ ಫೈನಲ್‌ ಪ್ರವೇಶಿಸುತ್ತದೆ. ಜಿಂಬಾಬ್ವೆ ಜಬರ್ದಸ್ತ್ ಪ್ರದರ್ಶನದ ಮೂಲಕ ಪಾಕಿಸ್ಥಾನವನ್ನು ಸದೆಬಡಿಯುತ್ತದೆ, ಆ ಪಾಕಿಸ್ಥಾನ ನೆದರ್ಲೆಂಡ್ಸ್‌ ಪರಾಕ್ರಮದಿಂದ ನಾಕೌಟ್‌ ಪ್ರವೇಶಿಸಿ ಪ್ರಶಸ್ತಿ ಸುತ್ತಿಗೂ ಲಗ್ಗೆ ಇಡುತ್ತದೆ… ಈ ರೀತಿಯಾಗಿ ಹಲವು ಅಚ್ಚರಿ, ಆಘಾತ, ಏರುಪೇರು, ಕೌತುಕದ ಪರಾಕಾಷ್ಠೆಯನ್ನು ತಲುಪಿದ ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿ ಈಗ ಕ್ಲೈಮ್ಯಾಕ್ಸ್‌ ಹಂತ ತಲುಪಿದೆ.

ರವಿವಾರ ಪಾಕಿಸ್ಥಾನ-ಇಂಗ್ಲೆಂಡ್‌ ಪ್ರಶಸ್ತಿ ಕಾಳಗದಲ್ಲಿ ಪರಸ್ಪರ ಎದುರಾಗಲಿವೆ. ಯಾರೇ ಗೆದ್ದರೂ ಎರಡನೇ ಸಲ ಟಿ20 ವಿಶ್ವಕಪ್‌ ಎತ್ತಿದ ಎರಡನೇ ತಂಡವೆಂಬ ದಾಖಲೆ ನಿರ್ಮಾಣವಾಗಲಿದೆ; ಆ ತಂಡ ವೆಸ್ಟ್‌ ಇಂಡೀಸ್‌ ಸಾಲಿನಲ್ಲಿ ವಿರಾಜಮಾನವಾಗಲಿದೆ.

30 ವರ್ಷಗಳ ಹಿಂದಿನ ಕಥನ
ಈ ಸಂದರ್ಭದಲ್ಲಿ ಎಲ್ಲರನ್ನೂ ಫ್ಲ್ಯಾಶ್‌ಬ್ಯಾಕ್‌ಗೆ ತಳ್ಳಿರುವುದು, ಸರಿಯಾಗಿ 30 ವರ್ಷಗಳ ಹಿಂದೆ ಆಸ್ಟ್ರೇಲಿಯದಲ್ಲೇ ನಡೆದ “ಬೆನ್ಸನ್‌ ಆ್ಯಂಡ್‌ ಹೆಜಸ್‌’ ಏಕದಿನ ವಿಶ್ವಕಪ್‌ ಪಂದ್ಯಾವಳಿ. 1992ರ ಈ 5ನೇ ವಿಶ್ವಕಪ್‌ನಲ್ಲಿ ಇಮ್ರಾನ್‌ ಖಾನ್‌ ಸಾರಥ್ಯದ ಪಾಕಿಸ್ಥಾನ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. ಅಂದಿನ ಏಕದಿನ ವಿಶ್ವಕಪ್‌ಗ್ೂ ಇಂದಿನ ಟಿ20 ವಿಶ್ವಕಪ್‌ ಬಹಳಷ್ಟು ಸಾಮ್ಯತೆ ಇರುವುದು ವಿಶೇಷ.

ರವಿವಾರದ ಫೈನಲ್‌ನಲ್ಲಿ ಪಾಕಿಸ್ಥಾನ ಅಂದಿನ ಇಮ್ರಾನ್‌ ಖಾನ್‌ ಬಳಗದಿಂದ ಸ್ಫೂರ್ತಿ ಪಡೆಯಬೇಕು ಎಂಬುದಾಗಿ ಮೆಂಟರ್‌ ಮ್ಯಾಥ್ಯೂ ಹೇಡನ್‌ ಹೇಳಿದ್ದಾರೆ. ಸುನೀಲ್‌ ಗಾವಸ್ಕರ್‌ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಪಾಕಿಸ್ಥಾನ ಕಪ್‌ ಗೆದ್ದರೆ ಬಾಬರ್‌ ಆಜಂ ಮುಂದೊಂದು ದಿನ ಪಾಕಿಸ್ಥಾನದ ಪ್ರಧಾನಿ ಆಗಲಿದ್ದಾರೆ ಎಂದು ಭವಿಷ್ಯವನ್ನೂ ನುಡಿದಾಗಿದೆ!

ಆಸೀಸ್‌ ಹಾಲಿ ಚಾಂಪಿಯನ್‌
1992ರ ವಿಶ್ವಕಪ್‌ “ರೌಂಡ್‌ ರಾಬಿನ್‌ ಲೀಗ್‌’ ಮಾದರಿಯಲ್ಲಿ ನಡೆದಿತ್ತು. ಇಲ್ಲಿ ಎಲ್ಲ ತಂಡಗಳು ಎಲ್ಲರ ವಿರುದ್ಧವೂ ಆಡಿದ್ದವು. ಅಗ್ರ 4 ತಂಡಗಳಿಗೆ ಸೆಮಿಫೈನಲ್‌ ಪ್ರವೇಶ ಲಭಿಸಿತ್ತು. ಅಂದಿನ ಕೂಟವನ್ನು ಇಂದಿನ ಟಿ20 ವಿಶ್ವಕಪ್‌ಗೆ ಹೋಲಿಕೆ ಮಾಡಿದಾಗ ಅನೇಕ ಸ್ವಾರಸ್ಯಕರ ಸಂಗತಿಗಳು ಬಿಚ್ಚಿಕೊಳ್ಳತೊಡಗುತ್ತವೆ.

1987ರ ವಿಶ್ವಕಪ್‌ ವಿಜೇತ ತಂಡವಾದ ಆಸ್ಟ್ರೇಲಿಯ ಅಂದಿನ ಹಾಲಿ ಚಾಂಪಿಯನ್‌ ಆಗಿತ್ತು. ಅದು ಸೆಮಿಫೈನಲಿಗೂ ಬರಲಿಲ್ಲ. ಈ ಸಲವೂ ಚಾಂಪಿಯನ್‌ ಆರನ್‌ ಫಿಂಚ್‌ ಪಡೆಗೆ ಇಂಥದೇ ಅವಸ್ಥೆ ಎದುರಾಯಿತು!

ಅಂದಿನ ಉದ್ಘಾಟನ ಪಂದ್ಯದಲ್ಲಿ ಆಸ್ಟ್ರೇಲಿಯ-ನ್ಯೂಜಿಲ್ಯಾಂಡ್‌ ತಂಡಗಳೇ ಎದುರಾಗಿದ್ದವು. ನ್ಯೂಜಿಲ್ಯಾಂಡ್‌ 37 ರನ್ನುಗಳಿಂದ ಗೆದ್ದು ಆಸೀಸ್‌ಗೆ ಆಘಾತವಿಕ್ಕಿತ್ತು. ಇಲ್ಲಿನ ಉದ್ಘಾಟನ ಸಮರದಲ್ಲೂ ಕಾಂಗರೂ ಪಡೆಯ ವಿರುದ್ಧ ನ್ಯೂಜಿಲ್ಯಾಂಡ್‌ ಜಯ ಸಾಧಿಸಿತು.

ಅಂದಿನ ಲೀಗ್‌ ಹಂತದಲ್ಲಿ ಭಾರತದ ವಿರುದ್ಧ ಪಾಕಿಸ್ಥಾನ ಪರಾಭವಗೊಂಡಿತ್ತು. ಇದು ಭಾರತ-ಪಾಕಿಸ್ಥಾನ ನಡುವಿನ ವಿಶ್ವಕಪ್‌ ಇತಿಹಾಸದ ಮೊದಲ ಮುಖಾಮುಖೀ ಎಂಬುದನ್ನು ಮರೆಯುವಂತಿಲ್ಲ. ಈ ಸಲವೂ ಪಾಕ್‌ ಸೂಪರ್‌-12 ಸುತ್ತಿನಲ್ಲಿ ಭಾರತಕ್ಕೆ ಶರಣಾಯಿತು.

ಅಂದು ಮಳೆಯಿಂದ ಜೀವದಾನ
1992ರಲ್ಲೂ ಪಾಕಿಸ್ಥಾನ ಲೀಗ್‌ ಹಂತದಲ್ಲೇ ಹೊರಬೀಳುವ ಅಪಾಯ ದಲ್ಲಿತ್ತು. ಅಲ್ಲಿ ಇಮ್ರಾನ್‌ ಬಳಗಕ್ಕೆ ಜೀವದಾನ ನೀಡಿದ್ದು ಮಳೆ. ಇಂಗ್ಲೆಂಡ್‌ ವಿರುದ್ಧ ಅಡಿಲೇಡ್‌ನ‌ಲ್ಲಿ ನಡೆದ ಪಂದ್ಯದಲ್ಲಿ ಪಾಕ್‌ 74 ರನ್ನಿಗೆ ಪಲ್ಟಿ. ಸೋಲು ಖಾತ್ರಿ. ಆದರೆ ಇಂಗ್ಲೆಂಡ್‌ ಚೇಸಿಂಗ್‌ ವೇಳೆ ಧೋ ಎಂದು ಮಳೆ ಸುರಿಯಿತು. ಪಂದ್ಯ ರದ್ದು.
ಪಾಕ್‌ಗೆ “ಬೋನಸ್‌’ ಅಂಕ! ಈ ಅಂಕದ ಬಲದಿಂದ ಅದು ಸೆಮಿಫೈನಲ್‌ಗೆ ಬಂತೆಂಬುದನ್ನು ಮರೆಯುವಂತಿಲ್ಲ. ಇಲ್ಲಿ ಲೈಫ್ ಕೊಟ್ಟದ್ದು ನೆದರ್ಲೆಂಡ್ಸ್‌. ಇಲ್ಲವಾದರೆ ಭಾರತದೊಂದಿಗೆ ದಕ್ಷಿಣ ಆಫ್ರಿಕಾ ಮುನ್ನಡೆಯುತ್ತಿತ್ತು.

ಮತ್ತೆ ಕಿವೀಸ್‌,
ಇಂಗ್ಲೆಂಡ್‌, ಮೆಲ್ಬರ್ನ್
ಅಂದಿನ ಆಕ್ಲಂಡ್‌ ಸೆಮಿಫೈನಲ್‌ನಲ್ಲಿ ಪಾಕಿಸ್ಥಾನಕ್ಕೆ ಎದುರಾದದ್ದು ನ್ಯೂಜಿಲ್ಯಾಂಡ್‌. ಪಾಕ್‌ ಗೆಲುವಿನ ಅಂತರ 4 ವಿಕೆಟ್‌. ಇಲ್ಲಿಯೂ ಸೆಮಿಯಲ್ಲಿ ಸಿಕ್ಕಿದ್ದು ನ್ಯೂಜಿಲ್ಯಾಂಡ್‌. ಗೆಲುವಿನ ಅಂತರ 7 ವಿಕೆಟ್‌. 1992ರ ಮೆಲ್ಬರ್ನ್ ಫೈನಲ್‌ನಲ್ಲಿ ಎದುರಾದದ್ದು ಇಂಗ್ಲೆಂಡ್‌. ಗೆಲುವಿನ ಅಂತರ 22 ರನ್‌. ಇದು 2022ರ ಟಿ20 ವಿಶ್ವಕಪ್‌ ಫೈನಲ್‌. ಮತ್ತದೇ ಮೆಲ್ಬರ್ನ್ ಅಂಗಳ, ಮತ್ತದೇ ಇಂಗ್ಲೆಂಡ್‌. ಫ‌ಲಿತಾಂಶವೂ ಪುನರಾವರ್ತನೆಯಾದೀತೇ ಎಂಬುದು ಈ ಕೂಟದ “ಫೈನಲ್‌’ ಕುತೂಹಲ.

ಇಂದು ಪಿಸಿಬಿ ಮುಖ್ಯಸ್ಥರಾಗಿರುವ ರಮೀಜ್‌ ರಾಜ 1992ರ ಫೈನಲ್‌ನಲ್ಲಿ ಇನ್ನಿಂಗ್ಸ್‌ ಆರಂಭಿಸುವುದರ ಜತೆಗೆ, ಕೊನೆಯಲ್ಲಿ ರಿಚರ್ಡ್‌ ಇಲ್ಲಿಂಗ್‌ವರ್ತ್‌ ಅವರ ಕ್ಯಾಚ್‌ ಪಡೆದು ಪಾಕ್‌ ಗೆಲುವನ್ನು ಸಾರಿದ್ದು ಕೂಡ ನೆನಪಲ್ಲಿ ಉಳಿಯುವ ಸಂಗತಿಯೇ ಆಗಿದೆ.

ನಾಳೆ ಫೈನಲ್‌
ಪಾಕಿಸ್ಥಾನ-ಇಂಗ್ಲೆಂಡ್‌
ಆರಂಭ: ಅ. 1.30
ಸ್ಥಳ: ಮೆಲ್ಬರ್ನ್
ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್

ಟಾಪ್ ನ್ಯೂಸ್

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

1-SDSDSDSAD-AA

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

Supreme Court

ರಾಜಕೀಯದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದಾಗ ದ್ವೇಷ ಭಾಷಣಗಳು ದೂರ:ಸುಪ್ರೀಂ

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್

1-sad-asd

ವಯನಾಡ್ ಕ್ಷೇತ್ರಕ್ಕೆ ಉಪಚುನಾವಣೆ; ಯಾವುದೇ ಆತುರವಿಲ್ಲ ಎಂದ ಚುನಾವಣಾ ಆಯೋಗ

ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು

ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧೋನಿ ಇನ್ನು ಹಲವು ಸೀಸನ್‌ ಆಡುವಷ್ಟು ಫಿಟ್‌ ಆಗಿದ್ದಾರೆ: ಟೀಮ್‌ ಇಂಡಿಯಾ ಆಟಗಾರ

ಧೋನಿ ಇನ್ನು ಹಲವು ಸೀಸನ್‌ ಆಡುವಷ್ಟು ಫಿಟ್‌ ಆಗಿದ್ದಾರೆ: ಟೀಮ್‌ ಇಂಡಿಯಾ ಆಟಗಾರ

ಆಟಗಾರ್ತಿಯರ ಜೊತೆ ಆಶ್ಲೀಲ ಸಂಭಾಷಣೆ: ಆಡಿಯೋ ಲೀಕ್ ಬೆನ್ನಲೇ ವಿಷ ಸೇವಿಸಿದ ಕ್ರಿಕೆಟ್‌ ಕೋಚ್

ಆಟಗಾರ್ತಿಯರ ಜೊತೆ ಆಶ್ಲೀಲ ಸಂಭಾಷಣೆ: ಆಡಿಯೋ ಲೀಕ್ ಬೆನ್ನಲೇ ವಿಷ ಸೇವಿಸಿದ ಕ್ರಿಕೆಟ್‌ ಕೋಚ್

csk

ಧೋನಿ ಅಭ್ಯಾಸಕ್ಕೆ ಚೆನ್ನೈ ಅಭಿಮಾನಿಗಳು ಫಿದಾ

ben str

ಸದ್ಯ ಬೌಲಿಂಗ್‌ ಮಾಡಲ್ಲ ಬೆನ್‌ ಸ್ಟೋಕ್ಸ್‌

rash tam

ಐಪಿಎಲ್‌ ಉದ್ಘಾಟನೆ: ರಶ್ಮಿಕಾ, ತಮನ್ನಾ ರಂಜನೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

1-SDSDSDSAD-AA

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

sub registrar

ಸಬ್‌ರಿಜಿಸ್ಟ್ರಾರ್‌ ಕಚೇರಿಗಳು ಇನ್ನು ಸ್ಮಾರ್ಟ್‌

Supreme Court

ರಾಜಕೀಯದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದಾಗ ದ್ವೇಷ ಭಾಷಣಗಳು ದೂರ:ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.