ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ


Team Udayavani, Oct 27, 2021, 11:23 PM IST

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಅಬುಧಾಬಿ: ರುಬೆಲ್‌ ಟ್ರಂಪಲ್‌ಮ್ಯಾನ್ ಅವರ ಮೊದಲ ಓವರಿನಲ್ಲೇ 3 ವಿಕೆಟ್‌ ಉರುಳಿಸಿಕೊಂಡು ಆಘಾತಕ್ಕೆ ಸಿಲುಕಿದ ಸ್ಕಾಟ್ಲೆಂಡ್‌, ಬುಧವಾರದ ನಮೀಬಿಯಾ ಎದುರಿನ ಟಿ20 ವಿಶ್ವಕಪ್‌ ಪಂದ್ಯದಲ್ಲಿ 4 ವಿಕೆಟ್‌ಗಳ ಸೋಲಿಗೆ ತುತ್ತಾಗಿದೆ.

ಸ್ಕಾಟ್ಲೆಂಡ್‌ 8 ವಿಕೆಟಿಗೆ ಕೇವಲ 109 ರನ್‌ ಗಳಿಸಿದರೆ, ನಮೀಬಿಯಾ 19.1 ಓವರ್‌ಗಳಲ್ಲಿ 6 ವಿಕೆಟಿಗೆ 115 ರನ್‌ ಹೊಡೆದು ಜಯ ಸಾಧಿಸಿತು.

ಇದೇ ಮೊದಲ ಸಲ ಟಿ20 ವಿಶ್ವಕಪ್‌ ಪ್ರಧಾನ ಸುತ್ತಿನಲ್ಲಿ ಆಡಲಿಳಿದ ನಮೀಬಿಯಾದ್ದು ಕನಸಿನ ಆರಂಭವಾಗಿತ್ತು. ವೇಗಿ ರುಬೆಲ್‌ ಟ್ರಂಪಲ್‌ಮ್ಯಾನ್ ಪಂದ್ಯದ ಮೊದಲ ಎಸೆತದಲ್ಲೇ ವಿಕೆಟ್‌ ಉರುಳಿಸಿದರಷ್ಟೇ ಅಲ್ಲ, ಮೊದಲ ಓವರಿನಲ್ಲಿ ಸ್ಕಾಟ್ಲೆಂಡ್‌ನ‌ ಮೂವರು ಆಟಗಾರರನ್ನು ಶೂನ್ಯಕ್ಕೆ ಉರುಳಿಸಿ ಅಸಾಮಾನ್ಯ ಪ್ರದರ್ಶನವಿತ್ತರು. ಮೊದಲ ಎಸೆತದಲ್ಲಿ ಜಾರ್ಜ್‌ ಮುನ್ಸಿ, 3ನೇ ಎಸೆತದಲ್ಲಿ ಕಾಲಂ ಮೆಕ್‌ಲಿಯೋಡ್‌ ಹಾಗೂ 4ನೇ ಎಸೆತದಲ್ಲಿ ನಾಯಕ ರಿಚೀ ಬೆರಿಂಗ್ಟನ್‌ ವಿಕೆಟ್‌ ಹಾರಿ ಹೋಯಿತು. ಆಗ ಸ್ಕಾಟ್ಲೆಂಡ್‌ ಸ್ಕೋರ್‌ಬೋರ್ಡ್‌ ಕೇವಲ 2 ರನ್‌ ತೋರಿಸುತ್ತಿತ್ತು.

ಸ್ಕೋರ್‌ 18ಕ್ಕೆ ಏರಿದಾಗ ಕ್ರೆಗ್‌ ವ್ಯಾಲೇಸ್‌ (4) ವಿಕೆಟ್‌ ಬಿತ್ತು. 5ನೇ ವಿಕೆಟಿಗೆ ಜತೆಗೂಡಿದ ಆರಂಭಕಾರ ಮ್ಯಾಥ್ಯೂ ಕ್ರಾಸ್‌ (19)-ಮೈಕಲ್‌ ಲೀಸ್ಕ್ (44) ಒಂದಿಷ್ಟು ಹೋರಾಟ ತೋರ್ಪಡಿಸಿ 39 ರನ್‌ ಪೇರಿಸಿದರು. 44 ರನ್‌ ಮಾಡಿದ ಲೀಸ್ಕ್ ಸ್ಕಾಟ್ಲೆಂಡ್‌ ಸರದಿಯ ಗರಿಷ್ಠ ಸ್ಕೋರರ್‌ (27 ಎಸೆತ, 4 ಬೌಂಡರಿ, 2 ಸಿಕ್ಸರ್‌). ಕೊನೆಯಲ್ಲಿ ಕ್ರಿಸ್‌ ಗ್ರೀವ್ಸ್‌ (25) ಹೋರಾಟ ನಡೆಸಿದ್ದರಿಂದ ತಂಡದ ಮೊತ್ತ ನೂರರ ಗಡಿ ದಾಟಿತು.

ಇದನ್ನೂ ಓದಿ:ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಸಂಕ್ಷಿಪ್ತ ಸ್ಕೋರ್‌: ಸ್ಕಾಟ್ಲೆಂಡ್‌-8 ವಿಕೆಟಿಗೆ 109 (ಲೀಸ್ಕ್ 44, ಗ್ರೀವ್ಸ್‌ 25, ಕ್ರಾಸ್‌ 19, ಟ್ರಂಟ್ರಂಪಲ್‌ಮ್ಯಾನ್ 17ಕ್ಕೆ 3, ಫ್ರೈಲಿಂಕ್‌ 10ಕ್ಕೆ 2). ನಮೀಬಿಯಾ-19.1 ಓವರ್‌ಗಳಲ್ಲಿ 6 ವಿಕೆಟಿಗೆ 115 (ಸ್ಮಿತ್‌ ಅಜೇಯ 32, ವಿಲಿಯಮ್ಸ್‌ 23, ಲಿಂಜೆನ್‌ 18, ಲೀಸ್ಕ್ 12ಕ್ಕೆ 2).

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.