ಟಿ20 ವಿಶ್ವಕಪ್‌ : ಭಾರತಕ್ಕೆ ಇಂದು ಬಾಂಗ್ಲಾದೇಶ ಸವಾಲು


Team Udayavani, Nov 2, 2022, 7:55 AM IST

cricket t20 india

ಅಡಿಲೇಡ್‌: ಟಿ20 ವಿಶ್ವಕಪ್‌ ಕೂಟದ ಬುಧವಾರದ ಮಹತ್ವದ ಸೂಪರ್‌ 12 ಪಂದ್ಯದಲ್ಲಿ ಭಾರತವು ಬಾಂಗ್ಲಾದೇಶವನ್ನು ಎದುರಿಸಲಿದೆ. ಈ ಪಂದ್ಯದಲ್ಲಿಯಾದರೂ ಭಾರತದ ಬ್ಯಾಟಿಂಗ್‌ ಶಕ್ತಿಯ ವಿಶ್ವರೂಪ ಪ್ರದರ್ಶ ನಗೊಳ್ಳುವುದು ಅತೀ ಮುಖ್ಯವಾಗಿದೆ. ಬ್ಯಾಟಿಂಗ್‌ನಲ್ಲಿ ಸತತ ವೈಫ‌ಲ್ಯ ಕಾಣು ತ್ತಿರುವ ಕೆಎಲ್‌ ರಾಹುಲ್‌ ಅವರಿಗೆ ಶ್ರೇಷ್ಠ ನಿರ್ವಹಣೆ ನೀಡಲು ಇದೊಂದು ಉತ್ತಮ ವೇದಿಕೆಯೂ ಆಗಿದೆ.

ಯಾವುದೇ ಮಾದರಿಯ ಕ್ರಿಕೆಟ್‌ನಲ್ಲಿಯೂ ಬಾಂಗ್ಲಾದೇಶವನ್ನು ಹಗುರ ವಾಗಿ ಕಾಣುವ ಸಾಧ್ಯತೆಯಿಲ್ಲ.ಉಭಯ ತಂಡಗಳ ಶಕ್ತಿ ಸಾಮರ್ಥ್ಯವನ್ನು ಗಮನಿ ಸಿದರೆ ಭಾರತವೇ ಗೆಲ್ಲುವ ಫೇವರಿಟ್‌ ತಂಡವಾಗಿದೆ. ಆದರೆ ಬಾಂಗ್ಲಾ ಯಾವುದೇ ಕ್ಷಣದಲ್ಲಾದರೂ ಅಚ್ಚರಿಯ ಫ‌ಲಿತಾಂಶಕ್ಕೆ ಕಾರಣವಾಗುವ ಸಾಧ್ಯತೆಯೂ ಇದೆ.

ಪರ್ತ್‌ನ ಪಿಚ್‌ನಲ್ಲಿ ಭಾರತೀಯ ಆಟಗಾರರು ರನ್‌ ಗಳಿಸಲು ಒದ್ದಾ ಡಿರುವುದು ಕೋಚ್‌ ರಾಹುಲ್‌ ದ್ರಾವಿಡ್‌ಗೆ ಚಿಂತೆಯನ್ನುಂಟುಮಾಡಿದೆ. ಸೂರ್ಯಕುಮಾರ್‌ ಯಾದವ್‌ ಅವರನ್ನು ಬಿಟ್ಟರೆ ಉಳಿದ ಆಟಗಾರರು ಬ್ಯಾಟಿಂಗ್‌ನಲ್ಲಿ ಭಾರೀ ವೈಫ‌ಲ್ಯ ಅನುಭವಿಸಿದ್ದರು. ಇದರ ಜತೆ ಕೆಎಲ್‌ ರಾಹುಲ್‌ ಅವರ ಸತತ ವೈಫ‌ಲ್ಯ ಪ್ರಶ್ನಿಸುವಂತಾಗಿದೆ. ಪಾಕಿಸ್ಥಾನ ಮತ್ತು ದಕ್ಷಿಣ ಆಫ್ರಿಕಾ ಸಹಿತ ಮೊದಲ ಮೂರು ಪಂದ್ಯಗಳಲ್ಲಿ ಅವರು ಗಳಿಸಿದ್ದು ಕೇವಲ 22 ರನ್‌. ಆದರೂ ಬೆಂಗಳೂರಿನ ಆಟಗಾರನ ಸಾಮರ್ಥ್ಯದ ಬಗ್ಗೆ ನಂಬಿಕೆ ಇಟ್ಟಿರುವ ದ್ರಾವಿಡ್‌ ಬಾಂಗ್ಲಾ ವಿರುದ್ಧವೂ ಅವರನ್ನು ಆರಂಭಿಕರಾಗಿ ಆಡಿಸುವ ಸಾಧ್ಯತೆಯಿದೆ.

ಟಿ20 ಪಂದ್ಯಗಳಲ್ಲಿ ಬಾಂಗ್ಲಾದೇಶ ವೇನೂ ಬಲಷ್ಠ ತಂಡವೇನಲ್ಲ. ಸಾಧಾರಣ ಬೌಲಿಂಗ್‌ ದಾಳಿ ಹೊಂದಿರುವ ಬಾಂಗ್ಲಾ ವಿರುದ್ಧ ರಾಹುಲ್‌ ಉತ್ತಮ ನಿರ್ವಹಣೆ ನೀಡುವ ನಿರೀಕ್ಷೆಯಿದೆ. ಈ ಮೂಲಕ ರಾಹುಲ್‌ ಫಾರ್ಮ್ಗೆ
ಮರಳಲು ಪ್ರಯತ್ನಿಸಬಹುದು. ಸೂರ್ಯಕುಮಾರ್‌ ಯಾದವ್‌ ಮತ್ತು ವಿರಾಟ್‌ ಕೊಹ್ಲಿ ಕೆಲವು ಪಂದ್ಯಗಳಲ್ಲಿ ಉತ್ತಮ ನಿರ್ವಹಣೆ ದಾಖಲಿಸಿದ್ದಾರೆ. ರೋಹಿತ್‌ ಶರ್ಮ ನೆದರ್ಲೆಂಡ್ಸ್‌ ವಿರುದ್ಧ ಅರ್ಧಶತಕ ಸಿಡಿಸಿ ಗಮನ ಸೆಳೆದಿದ್ದಾರೆ. ದಿನೇಶ್‌ ಕಾರ್ತಿಕ್‌ ಗಾಯಗೊಂಡಿದ್ದರಿಂದ ರಿಷಬ್‌ ಪಂತ್‌ ಆಟವಾಡುವ ಬಳಗಕ್ಕೆ ಸೇರಿಕೊಳ್ಳುವ ಸಾಧ್ಯತೆಯಿದೆ.

ಬಾಂಗ್ಲಾದೇಶದ ಬ್ಯಾಟಿಂಗ್‌ ಉತ್ತಮ ಮಟ್ಟದಲ್ಲಿದೆ. ತಂಡದಲ್ಲಿ ನಾಲ್ವರು ಎಡಗೈ ಆಟಗಾರರಿದ್ದಾರೆ. ಶಕಿಬ್‌, ಸೌಮ್ಯಾ ಸರ್ಕಾರ್‌, ನಜ್ಮುಲ್‌ ಹೊಸೈನ್‌ ಶಂಟೊ ಮತ್ತು ಅಫಿಫ್ ಹೊಸೈನ್‌ ಧ್ರುವ್‌ ಬ್ಯಾಟಿಂಗ್‌ನಲ್ಲಿ ಮಿಂಚಿದರೆ ಭಾರತ ಒತ್ತಡಕ್ಕೆ ಬೀಳುವ ಸಾಧ್ಯತೆಯಿದೆ.

2016ರ ಪಂದ್ಯದ ನೆನಪು
2016ರ ಟಿ20 ವಿಶ್ವಕಪ್‌ನಲ್ಲಿಯೂ ಬಾಂಗ್ಲಾದೇಶ ಭಾರತಕ್ಕೆ ತೀವ್ರ ಪೈಪೋಟಿ ಯನ್ನು ನೀಡಿದ್ದನ್ನು ಮರೆಯಲು ಸಾಧ್ಯವಿಲ್ಲ. ಆ ಪಂದ್ಯದಲ್ಲಿ ಭಾರತ ಕೊನೆಕ್ಷಣದಲ್ಲಿ ಒಂದು ರನ್ನಿನಿಂದ ರೋಚಕ ಗೆಲುವು ಒಲಿಸಿಕೊಂಡಿತ್ತು. ಬೆಂಗಳೂರಿನಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 7 ವಿಕೆಟಿಗೆ 146 ರನ್‌ ಗಳಿಸಿದ್ದರೆ ಬಾಂಗ್ಲಾದೇಶ ಕೊನೆಯ ಓವರಿನಲ್ಲಿ ಗೆಲ್ಲಲು 11 ರನ್‌ ತೆಗೆಯಬೇಕಾಗಿತ್ತು. ಅಂತಿಮವಾಗಿ ಅಂತಿಮ ಎಸೆತದಲ್ಲಿ 2 ರನ್‌ ಬೇಕಿತ್ತು. ಹಾರ್ದಿಕ್‌ ಪಾಂಡ್ಯ ಎಸೆದಿದ್ದ ಈ ಎಸೆತದಲ್ಲಿ ಬಾಂಗ್ಲಾಕ್ಕೆ ಯಾವುದೇ ರನ್‌ ಗಳಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಭಾರತ ಒಂದು ರನ್ನಿನ ಜಯ ಸಾಧಿಸಿತ್ತು.

ಇಂದಿನ ಪಂದ್ಯ
ನೆದರ್ಲೆಂಡ್ಸ್‌-ಜಿಂಬಾಬ್ವೆ
ಆರಂಭ: ಬೆ. 9.30

ಭಾರತ-ಬಾಂಗ್ಲಾದೇಶ
ಆರಂಭ: ಅ. 1.30
ಸ್ಥಳ: ಅಡಿಲೇಡ್‌
ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.