ಟಿ20 ವಿಶ್ವಕಪ್‌: ಭಾರತಕ್ಕೆ ಇಂದು ಜಿಂಬಾಬ್ವೆ ಸವಾಲು


Team Udayavani, Nov 6, 2022, 8:00 AM IST

ಟಿ20 ವಿಶ್ವಕಪ್‌: ಭಾರತಕ್ಕೆ ಇಂದು ಜಿಂಬಾಬ್ವೆ ಸವಾಲು

ಮೆಲ್ಬರ್ನ್: ಟಿ20 ವಿಶ್ವಕಪ್‌ ಕೂಟದಲ್ಲಿ ರವಿವಾರ ಬಣ ಎರಡರಲ್ಲಿ ಮೂರು ಸೂಪರ್‌ 12 ಪಂದ್ಯಗಳು ನಡೆಯಲಿವೆ. ಎಲ್ಲ ತಂಡಗಳಿಗೆ ಗೆಲುವು ಅತೀ ಮುಖ್ಯವಾಗಿದೆ. ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವು ನೆದರ್ಲೆಂಡ್ಸ್‌ ತಂಡವನ್ನು ಎದುರಿಸಲಿದ್ದರೆ ದ್ವಿತೀಯ ಪಂದ್ಯವು ಪಾಕಿಸ್ಥಾನ ಮತ್ತು ಬಾಂಗ್ಲಾದೇಶದ ನಡುವೆ ನಡೆಯಲಿದೆ. ಮೂರನೇ ಪಂದ್ಯದಲ್ಲಿ ಭಾರತವು ಜಿಂಬಾಬ್ವೆಯನ್ನು ಎದುರಿಸಲಿದೆ.

ಸದ್ಯ ಬಣ ಎರಡರಲ್ಲಿ ಭಾರತ ಅಗ್ರಸ್ಥಾನದಲ್ಲಿದ್ದು ದಕ್ಷಿಣ ಆಫ್ರಿಕಾ ದ್ವಿತೀಯ ಸ್ಥಾನದಲ್ಲಿದೆ. ಒಂದು ವೇಳೆ ಭಾರತ ಮತ್ತು ದಕ್ಷಿಣ ಆಫ್ರಿಕಾ ಗೆಲುವು ಸಾಧಿಸಿದರೆ ಈ ಎರಡು ತಂಡಗಳು ಸೆಮಿಫೈನಲಿಗೇರಲಿದೆ. ಒಂದು ವೇಳೆ ಭಾರತ ಸೋತರೆ ಪಾಕಿಸ್ಥಾನವು ಬಾಂಗ್ಲಾದೇಶದ ವಿರುದ್ಧ ಜಯ ಸಾಧಿಸಿದರೆ ಆದು ಉತ್ತಮ ರನ್‌ಧಾರಣೆಯ ಆಧಾರದಲ್ಲಿ ಸೆಮಿಫೈನಲಿಗೆ ಏರಲಿದೆ.

ಸದ್ಯ ದ್ವಿತೀಯ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾವು ರವಿವಾರದ ಪಂದ್ಯದಲ್ಲಿ ನೆದರ್ಲೆಂಡ್ಸ್‌ ವಿರುದ್ಧ ಸೋತರೆ ಪಾಕಿಸ್ಥಾನವು ಬಾಂಗ್ಲಾ ವಿರುದ್ಧ ಗೆದ್ದರೆ ಅದು ಭಾರತದ ಜತೆ ಸೆಮಿಫೈನಲಿಗೇರುವ ಸಾಧ್ಯತೆಯಿದೆ. ಒಂದು ವೇಳೆ ಭಾರತ ಗೆದ್ದು ಬಣದ ಅಗ್ರಸ್ಥಾನ ಪಡೆದರೆ ಸೆಮಿಫೈನಲ್‌ನಲ್ಲಿ ಅದು ಇಂಗ್ಲೆಂಡ್‌ ತಂಡವನ್ನು ಎದುರಿಸಲಿದೆ. ಈ ಪಂದ್ಯ ಅಡಿಲೇಡ್‌ನ‌ಲ್ಲಿ ನಡೆಯಲಿದೆ.

ಬ್ಯಾಟಿಂಗ್‌ ಕಡೆ ಗಮನ
ಗೆಲ್ಲಲೇಬೇಕಾದ ಈ ಮಹತ್ವದ ಪಂದ್ಯದಲ್ಲಿ ಭಾರತ ಬ್ಯಾಟಿಂಗ್‌ ಕಡೆ ಹೆಚ್ಚಿನ ಗಮನ ಹರಿಸಲಿದೆ. ನಾಯಕ ರೋಹಿತ್‌ ಶರ್ಮ ಜಿಂಬಾಬ್ವೆ ವಿರುದ್ಧ ಭರ್ಜರಿ ಆಟದ ಪ್ರದರ್ಶನ ನೀಡಲು ಸಜ್ಜಾಗಿದ್ದಾರೆ. ಅವರ ಜತೆ ಪ್ರಚಂಡ ಫಾರ್ಮ್ನಲ್ಲಿರುವ ವಿರಾಟ್‌ ಕೊಹ್ಲಿ, ಕೆಎಲ್‌ ರಾಹುಲ್‌ ಮತ್ತು ಸೂರ್ಯಕುಮಾರ್‌ ಯಾದವ್‌ ಕೂಡ ಉತ್ತಮ ನಿರ್ವಹಣೆ ನೀಡಲು ಹಾತೊರೆಯುತ್ತಿದ್ದಾರೆ. ಕಳೆದ ನಾಲ್ಕು ಪಂದ್ಯಗಳಲ್ಲಿ 74 ರನ್‌ ಗಳಿಸಿರುವ ನಾಯಕ ರೋಹಿತ್‌ಗೆ ಮೆಲ್ಬರ್ನ್ನ ಈ ಪಿಚ್‌ ನೆಚ್ಚಿನ ತಾಣವಾಗಿದೆ. ಇಲ್ಲಿ ಅವರು ಬಿಳಿ ಚೆಂಡಿನಲ್ಲಿ ಕೆಲವು ಶತಕ ಸಿಡಿಸಿದ್ದಾರೆ.

ಸರಿಯಾಗಿ ಎರಡು ವಾರಗಳ ಹಿಂದೆ ಈ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ಥಾನ ನಡುವಣ ಮಹೋನ್ನತ ಹೋರಾಟ ನಡೆದಿತ್ತು. ಈ ಪಂದಲ್ಲಿ ಕೊಹ್ಲಿ ತನ್ನ ಜೀವಮಾನದ ಶ್ರೇಷ್ಠ ಆಟ ಆಡಿ ಭಾರತಕ್ಕೆ ಗೆಲುವು ದೊರಕಿಸಿಕೊಟ್ಟಿದ್ದರು. ರವಿವಾರವೂ ಜಿಂಬಾಬ್ವೆ ವಿರುದ್ಧ ಗೆದ್ದರೆ ಭಾರತ ಯಾವುದೇ ಚಿಂತೆಯಿಲ್ಲದೇ ಸೆಮಿಫೈನಲ್‌ ತಲುಪಲಿದೆ.

ಈ ಕೂಟದಲ್ಲಿ ಗೆಲುವಿನೊಂದಿಗೆ ತನ್ನ ಅಭಿಯಾನ ಆರಂಭಿಸಿದ್ದ ಜಿಂಬಾಬ್ವೆ ಆಬಳಿಕ ನೀರಸವಾಗಿ ಆಡಿದೆ. ಜಿಂಬಾಬ್ವೆಯ ಬ್ಯಾಟಿಂಗ್‌ ಸಾಧಾರಣ ಮಟ್ಟದಲ್ಲಿದೆ. ಭುವನೇಶ್ವರ್‌ ಕುಮಾರ್‌, ಅರ್ಷದೀಪ್‌ ಮತ್ತು ಮೊಹಮ್ಮದ್‌ ಶಮಿ ಅವರ ದಾಳಿಯೆದುರು ಭರ್ಜರಿ ಬ್ಯಾಟಿಂಗ್‌ ನಿರ್ವಹಣೆ ನೀಡಲು ಜಿಂಬೆಬ್ವೆಗೆ ಕಷ್ಟವೆಂದು ಹೇಳಬಹುದು. ಕ್ರೆಗ್‌ ಇರ್ವಿನ್‌, ಸೀನ್‌ ಇರ್ವಿನ್‌, ರಿಯಾನ್‌ ಬರ್ಲ್ ಮತ್ತು ಸೀನ್‌ ವಿಲಿಯಮ್ಸ್‌ ಅವರು ಭಾರತೀಯ ದಾಳಿಯನ್ನು ಹೇಗೆ ನಿಭಾಯಿಸುತ್ತಾರೆ ಎಂಬುದನ್ನು ನೋಡಬೇಕಾಗಿದೆ.

ಪಾಕಿಸ್ಥಾನದಲ್ಲಿ ಹುಟ್ಟಿದ ಸಿಕಂದರ್‌ ರಾಜ ಸ್ವಲ್ಪಮಟ್ಟಿಗೆ ಭಾರತಕ್ಕೆ ಹೊಡೆತ ನೀಡುವ ನಿರೀಕ್ಷೆಯಿದೆ. ಉತ್ತಮ ನಿರ್ವಹಣೆ ನೀಡುತ್ತಿರುವ ಅವರು ಭಾರತ ವಿರುದ್ಧ ಮಿಂಚುವ ಉತ್ಸಾಹದಲ್ಲಿದ್ದಾರೆ.

ಇಂದಿನ ಪಂದ್ಯ
ದ. ಆಫ್ರಿಕಾ-ನೆದರ್ಲೆಂಡ್ಸ್‌
ಆರಂಭ: ಬೆಳಗ್ಗೆ 5.30
ಸ್ಥಳ: ಅಡಿಲೇಡ್‌

ಪಾಕಿಸ್ಥಾನ-ಬಾಂಗ್ಲಾದೇಶ
ಆರಂಭ: ಬೆಳಗ್ಗೆ 9.30
ಸ್ಥಳ: ಅಡಿಲೇಡ್‌

ಭಾರತ-ಜಿಂಬಾಬ್ವೆ
ಆರಂಭ: ಮ. 1.30
ಸ್ಥಳ: ಮೆಲ್ಬರ್ನ್
ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್

ಟಾಪ್ ನ್ಯೂಸ್

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.