ವಿಜಯ್ ಹಜಾರೆ ಟ್ರೋಫಿ: ತಮಿಳುನಾಡು ವಿರುದ್ಧ ಎಡವಿದ ಕರ್ನಾಟಕ ತಂಡ
Team Udayavani, Dec 9, 2021, 4:04 PM IST
ತಿರುವನಂತರಪುರಂ: ವಿಜಯ್ ಹಜಾರೆ ಟ್ರೋಫಿಯ ಎರಡನೇ ಪಂದ್ಯದಲ್ಲಿ ಕರ್ನಾಟಕ ತಂಡ ಎಡವಿದೆ. ಪುದುಚೇರಿ ವಿರುದ್ಧ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಮನೀಷ್ ಪಾಂಡೆ ಪಡೆ, ತಮಿಳುನಾಡು ವಿರುದ್ಧ ಎರಡನೇ ಪಂದ್ಯದಲ್ಲಿ ಹೀನಾಯವಾಗಿ ಸೋಲನುಭವಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಕರ್ನಾಟಕ ತಂಡ ಬ್ಯಾಟಿಂಗ್ ವೈಫಲ್ಯ ಕಂಡಿತು. ರೋಹನ್ ಕದಂ ಮತ್ತು ಮನೀಷ್ ಪಾಂಡೆ ಹೊರತುಪಡಿಸಿ ಯಾವೊಬ್ಬ ಆಟಗಾರನು ಎರಡಂಕೆ ರನ್ ಗಳಿಸಲಿಲ್ಲ. ರೋಹನ್ 37 ರನ್ ಗಳಿಸಿದರೆ, ನಾಯಕ ಪಾಂಡೆ 40 ರನ್ ಗಳಿಸಿದರು. ತಂಡ ಕೇವಲ 122 ರನ್ ಗಳಿಗೆ ಆಲೌಟಾಯಿತು.
ಇದನ್ನೂ ಓದಿ:ವಿರಾಟ್ ಕೊಹ್ಲಿಗೆ 48 ಗಂಟೆಗಳ ಗಡುವು ನೀಡಿದ್ದ ಬಿಸಿಸಿಐ: ಆದರೂ ಒಪ್ಪದ ವಿರಾಟ್!
ಸುಲಭ ಗುರಿ ಬೆನ್ನತ್ತಿದ ತಮಿಳುನಾಡು ತಂಡ ಕೇವಲ ಎರಡು ವಿಕೆಟ್ ನಷ್ಟಕ್ಕೆ 123 ರನ್ ಗಳಿಸಿ ಜಯ ಸಾಧಿಸಿತು. ಬಾಬಾ ಅಪರಿಜಿತ್ 51 ರನ್ ಗಳಿಸಿ ಅಜೇಯರಾದರೆ, ವಾಷಿಂಗ್ಟನ್ ಸುಂದರ್ 31 ರನ್ ಗಳಿಸಿದರು.
ಸತತ ಎರಡು ಪಂದ್ಯ ಗೆದ್ದ ತಮಿಳುನಾಡು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕರ್ನಾಟಕ ತಂಡ ಎರಡನೇ ಸ್ಥಾನಕ್ಕೆ ಕುಸಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’