100ನೇ ಟೆಸ್ಟ್‌ನಲ್ಲಿ ಬಾಂಗ್ಲಾ ಜಯಭೇರಿ


Team Udayavani, Mar 20, 2017, 3:07 PM IST

Bangla-20-2.jpg

ಕೊಲಂಬೊ: ನೂರನೇ ಟೆಸ್ಟ್‌ ಪಂದ್ಯದಲ್ಲಿ ಆಲ್‌ರೌಂಡ್‌ ಆಟದ ಪ್ರದರ್ಶನ ನೀಡಿದ ಬಾಂಗ್ಲಾದೇಶವು ಐತಿಹಾಸಿಕ ಗೆಲುವು ದಾಖಲಿಸಿ ಸಂಭ್ರಮಿಸಿತಲ್ಲದೇ ದೀರ್ಘ‌ಕಾಲದ ಕನಸೊಂದನ್ನು ನನಸಾಗಿಸಿದೆ. ಟೆಸ್ಟ್‌ನಲ್ಲಿ ಬಲಿಷ್ಠ ತಂಡವೊಂದರ ವಿರುದ್ಧ ವಿದೇಶದಲ್ಲಿ ಗೆಲುವು ದಾಖಲಿಸುವುದು ಬಾಂಗ್ಲಾದ ಕನಸಾಗಿತ್ತು. ಕೊಲಂಬೋದ ಪಿ ಸಾರಾ ಓವಲ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಪರಿಣಾಮಕಾರಿ ನಿರ್ವಹಣೆ ದಾಖಲಿಸಿದ ಬಾಂಗ್ಲಾದೇಶ ನಾಲ್ಕು ವಿಕೆಟ್‌ಗಳಿಂದ ಶ್ರೀಲಂಕಾವನ್ನು ಸೋಲಿಸಿ ಗೆಲುವಿನ ಸಂಭ್ರಮ ಆಚರಿಸಿತು. ಈ ಫ‌ಲಿತಾಂಶದಿಂದಾಗಿ ಎರಡು ಪಂದ್ಯಗಳ ಟೆಸ್ಟ್‌ ಸರಣಿ 1-1 ಸಮಬಲದಿಂದ ಅಂತ್ಯ ಗೊಂಡಿದೆ.

ಗೆಲ್ಲಲು 191 ರನ್‌ ಗಳಿಸುವ ಗುರಿ ಪಡೆದ ಬಾಂಗ್ಲಾದೇಶವು ಕೆಲವೊಂದು ಆತಂಕದ ಕ್ಷಣಗಳನ್ನು ಎದುರಿಸಿದರೂ ಅಂತಿಮವಾಗಿ ಆರು ವಿಕೆಟ್‌ ಕಳೆದುಕೊಂಡು ಜಯ ಸಾಧಿಸಲು ಯಶಸ್ವಿಯಾಯಿತು. ದ್ವಿತೀಯ ಇನ್ನಿಂಗ್ಸ್‌ನಲ್ಲಿ 82 ರನ್‌ ಗಳಿಸಿದ ತಮಿಮ್‌ ಇಕ್ಬಾಲ್‌ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ ಶತಕ ಸಿಡಿಸಿದ್ದ ಶಕಿಬ್‌ ಅಲ್‌ ಹಸನ್‌ ಸರಣಿಶ್ರೇಷ್ಠ ಪ್ರಶಸ್ತಿಯಿಂದ ಪುರಸ್ಕೃತಗೊಂಡರು.


ಎಂಟು ವಿಕೆಟಿಗೆ 268 ರನ್ನುಗಳಿಂದ ಅಂತಿಮ ದಿನದಾಟ ಆರಂಭಿಸಿದ ಶ್ರೀಲಂಕಾ ತಂಡವು 319 ರನ್‌ ಗಳಿಸಿ ಆಲೌಟಾಯಿತು. ಇದರಿಂದಾಗಿ ಬಾಂಗ್ಲಾ ಜಯ ಸಾಧಿಸಲು 191 ರನ್‌ ಗಳಿಸುವ ಗುರಿ ಪಡೆಯಿತು. ಮೊದಲೆರಡು ವಿಕೆಟ್‌ ಬೇಗನೇ ಬಿದ್ದರೂ ತಮಿಮ್‌ ಇಕ್ಬಾಲ್‌ ಮತ್ತು ಶಬ್ಬೀರ್‌ ರೆಹಮಾನ್‌ ಆಧರಿಸಿದರು. ಅವರಿಬ್ಬರು ಮೂರನೇ ವಿಕೆಟಿಗೆ 109 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡು ಗೆಲುವಿನ ಆಸೆ ಹೆಚ್ಚಿಸಿದರು. ಈ ಜೋಡಿ ಮುರಿದ ಬಳಿಕ ಬಾಂಗ್ಲಾ ಕೆಲವೊಂದು ಆತಂಕದ ಕ್ಷಣಗಳನ್ನು ಎದುರಿಸಿತು. ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಸಿಡಿಸಿ ತಂಡದ ಇನ್ನಿಂಗ್ಸ್‌ ಮುನ್ನಡೆಗೆ ಕಾರಣರಾಗಿದ್ದ ಶಕಿಬ್‌ ಅಲ್‌ ಹಸನ್‌ ಬೇಗನೇ ಔಟಾದರೆ ಅಂಪಾಯರ್‌ ಎಸ್‌. ರವಿ ಅವರು ಮುಷ್ಫೀಕರ್‌ ರಹೀಂ ಎಲ್‌ಬಿ ಔಟೆಂದು ತೀರ್ಪು ನೀಡಿದರು. ಆದರೆ ಪುನರ್‌ಪರಿಶೀಲನೆಯಲ್ಲಿ ಔಟ್‌ ಅಲ್ಲವೆಂದು ತೀರ್ಪು ಬಂತು. ಮುಂದಿನ ಓವರಿನಲ್ಲಿ ರಂಗನ ಹೆರಾತ್‌ ಅವರು ಮೊಸಡೆಕ್‌ ಹೊಸೇನ್‌ ಅವರು ನೀಡಿದ ಕ್ಯಾಚನ್ನು ಕೈಚೆಲ್ಲಿದ್ದರು. ಅಂತಿಮವಾಗಿ ಬಾಂಗ್ಲಾ ಆರು ವಿಕೆಟ್‌ ಕಳೆದುಕೊಂಡು ಜಯಭೇರಿ ಬಾರಿಸಲು ಯಶಸ್ವಿಯಾಯಿತು.

ಸಂಕ್ಷಿಪ್ತ ಸ್ಕೋರು 
ಶ್ರೀಲಂಕಾ 338 ಮತ್ತು 319 (ದಿಮುತ್‌ ಕರುಣರತ್ನೆ 126,ಉಪುಲ್‌ ತರಂಗ 26, ಕುಸಲ್‌ ಮೆಂಡಿಸ್‌ 36, ದಿಲುÅವಾನ್‌ ಪೆರೆರ 50, ಸುರಂಗ ಲಕ್ಮಲ್‌ 42, ಮುಸ್ತಾಫಿಜುರ್‌ ರೆಹಮಾನ್‌ 78ಕ್ಕೆ 3, ಶಕಿಬ್‌ ಅಲ್‌ ಹಸನ್‌ 74ಕ್ಕೆ 4); ಬಾಂಗ್ಲಾದೇಶ 467 ಮತ್ತು 6 ವಿಕೆಟಿಗೆ 191 (ತಮಿಮ್‌ ಇಕ್ಬಾಲ್‌ 82, ಶಬ್ಬೀರ್‌ ರೆಹಮಾನ್‌ 41, ಮುಶ್ಫಿàಕರ್‌ ರಹೀಂ 22 ಔಟಾಗದೆ, ದಿಲುÅವಾನ್‌ ಪೆರೆರ 59ಕ್ಕೆ 3, ರಂಗನ ಹೆರಾತ್‌ 75ಕ್ಕೆ 3). ಪಂದ್ಯಶ್ರೇಷ್ಠ ತಮಿಮ್‌ ಇಕ್ಬಾಲ್‌, ಸರಣಿಶ್ರೇಷ್ಠ: ಶಕಿಬ್‌ ಅಲ್‌ ಹಸನ್‌

100ನೇ ಟೆಸ್ಟ್‌ನಲ್ಲಿ ಗೆಲುವು
ಬಾಂಗ್ಲಾದೇಶವು ತಾನಾಡಿದ 100ನೇ ಟೆಸ್ಟ್‌ನಲ್ಲಿ ಗೆಲುವು ಒಲಿಸಿಕೊಂಡ ನಾಲ್ಕನೇ ತಂಡವಾಗಿದೆ. ಈ ಹಿಂದೆ ಆಸ್ಟ್ರೇಲಿಯವು ದಕ್ಷಿಣ ಆಫ್ರಿಕಾ ವಿರುದ್ಧ, ಪಾಕಿಸ್ಥಾನವು ಆಸ್ಟ್ರೇಲಿಯ ವಿರುದ್ಧ, ವೆಸ್ಟ್‌ಇಂಡೀಸ್‌ ಆಸ್ಟ್ರೇಲಿಯ ವಿರುದ್ಧ ನಡೆದ ತನ್ನ 100ನೇ ಟೆಸ್ಟ್‌ ಪಂದ್ಯದಲ್ಲಿ ಜಯ ಸಾಧಿಸಿತ್ತು. ಬಾಂಗ್ಲಾದೇಶವು ವಿದೇಶದಲ್ಲಿ ನಡೆದ ಟೆಸ್ಟ್‌ನಲ್ಲಿ ಜಯ ದಾಖಲಿಸಿರುವುದು ಇದು ನಾಲ್ಕನೇ ಸಲವಾಗಿದೆ. ಈ ಹಿಂದೆ 2009ರಲ್ಲಿ ವೆಸ್ಟ್‌ಇಂಡೀಸ್‌ ವಿರುದ್ಧ ಎರಡು ಬಾರಿ ಮತ್ತು ಜಿಂಬಾಬ್ವೆ ವಿರುದ್ಧ ಒಮ್ಮೆ ಟೆಸ್ಟ್‌ನಲ್ಲಿ ಜಯ ಸಾಧಿಸಿತ್ತು. ಇದು ಒಟ್ಟಾರೆ ಟೆಸ್ಟ್‌ನಲ್ಲಿ ಬಾಂಗ್ಲಾ ಒಲಿಸಿಕೊಂಡ 9ನೇ ಗೆಲುವು ಆಗಿದೆ. ರಂಗನ ಹೆರಾತ್‌ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಒಂದು ಸಾವಿರ ವಿಕೆಟ್‌ ಕಿತ್ತ ಸಾಧನೆ ಮಾಡಿದ್ದಾರೆ. ಈ ಸಾಧನೆಗೈದ ಶ್ರೀಲಂಕಾದ ಎರಡನೇ ಮತ್ತು ಏಶ್ಯ ಖಂಡದ 12ನೇ ಬೌಲರ್‌ ಎಂದೆನಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.