Tanush Kotian: ಮುಂಬಯಿ ತಂಡದಲ್ಲಿ ಮಿಂಚಿದ ಉಡುಪಿ ಕ್ರಿಕೆಟಿಗ ತನುಷ್‌ ಕೋಟ್ಯಾನ್‌


Team Udayavani, Feb 28, 2024, 6:45 AM IST

Tanush Kotian: ಮುಂಬಯಿ ತಂಡದಲ್ಲಿ ಮಿಂಚಿದ ಉಡುಪಿ ಕ್ರಿಕೆಟಿಗ ತನುಷ್‌ ಕೋಟ್ಯಾನ್‌

ಕಾಪು: ಉಡುಪಿ ಜಿಲ್ಲೆಯ ಪಾಂಗಾಳ ಮೂಲದ, ಪ್ರಸ್ತುತ ಮುಂಬಯಿ ರಣಜಿ ತಂಡದ ಆಲ್‌ರೌಂಡರ್‌ ಆಗಿ ಮಿಂಚುತ್ತಿರುವ ತನುಷ್‌ ಕೋಟ್ಯಾನ್‌ ಅವರ ಸಾಧನೆ ಕಂಡು ತುಳುನಾಡು ಮತ್ತು ಕರಾವಳಿ ಕರ್ನಾಟಕದ ಮುಂಬಯಿಗರೆಲ್ಲರೂ ಹೆಮ್ಮೆಪಟ್ಟಿದ್ದಾರೆ.

ಪಾಂಗಾಳ ವಿಜಯಾ ಬ್ಯಾಂಕ್‌ ಬಳಿಯ ತುಳ್ಳಿಮಾರ್‌ ಹೌಸ್‌ನ ಕರುಣಾಕರ್‌ ಕೋಟ್ಯಾನ್‌ ಮತ್ತು ಹೆಜಮಾಡಿ ಕೋಡಿ ನಡಿಕುದ್ರು ಮಲ್ಲಿಕಾ ಕೋಟ್ಯಾನ್‌ ದಂಪತಿಯ ಪುತ್ರನೇ ತನುಷ್‌.

ದೈವ, ದೇವರ ಬಗ್ಗೆ ನಂಬಿಕೆ
ಮುಂಬಯಿಯಲ್ಲೇ ಹುಟ್ಟಿ ಬೆಳೆದಿರುವ ತನುಷ್‌ಗೆ ತನ್ನ ತಂದೆ-ತಾಯಿಯ ಹುಟ್ಟೂರು, ದೈವ ದೇವರುಗಳ ಬಗ್ಗೆ ಅಪಾರ ಭಕ್ತಿ. ಕಳೆದ ಜನವರಿಯಲ್ಲಿ ಹೆತ್ತವರ ಜತೆಗೆ ಪಾಂಗಾಳಕ್ಕೆ ಆಗಮಿಸಿ, ದೈವ-ದೇವರು, ನಾಗದೇವರ ವಾರ್ಷಿಕ ತನು ತಂಬಿಲ, ಪಂಚ ಪರ್ವಾದಿಗಳಲ್ಲಿ ಪಾಲ್ಗೊಂಡಿದ್ದರು. ಕಳೆದ ಜನವರಿ ತಿಂಗಳಲ್ಲಿ ಪಡುಬಿದ್ರಿ ಬೀಡು ಬಳಿಯಿರುವ ಕೊಗ್ಗ ಬನದಲ್ಲಿ ತನುಷ್‌ ಪರವಾಗಿ ನಾಗದೇವರಿಗೆ ನವಕ ಪ್ರಧಾನ ಹೋಮ, ನವಗ್ರಹ ಪೂಜೆ, ಕಾಳಸರ್ಪ ದೋಷ ನಿವಾರಣೆಗಾಗಿ ವಿಶೇಷ ಪೂಜೆ ನಡೆಸಲಾಗಿತ್ತು. ಇದರಲ್ಲಿ ಸ್ವತಃ ತನುಷ್‌ ಭಾಗವಹಿಸಿದ್ದರು.

ತನುಷ್‌ ಕಟಪಾಡಿ ಅಚ್ಚಡ ಸಲ್ಪಾ ಬಡಾವಣೆಯಲ್ಲಿ ಫ್ಲಾಟ್‌ ಖರೀದಿಸಿದ್ದು, ಊರಿಗೆ ಬಂದಾಗ ಪಾಂಗಾಳ, ನಡಿಕುದ್ರು ಮತ್ತು ಕಟಪಾಡಿ ಅಚ್ಚಡದ ಸಲ್ಪಾ ಬಡಾವಣೆಯಲ್ಲಿ ವಾಸವಿರುತ್ತಾರೆ.

ತಂದೆ ಕರುಣಾಕರ್‌ ಕೋಟ್ಯಾನ್‌ ಅವರಿಗೆ ಬಾಲ್ಯದಿಂದಲೂ ಕ್ರಿಕೆಟ್‌ ಬಗ್ಗೆ ವಿಶೇಷ ಆಸಕ್ತಿ. ಮುಂಬಯಿ ಟಾಟಾ ನ್ಪೋರ್ಟ್ಸ್ ನಲ್ಲಿ ಆಡುವ ಅವಕಾಶವನ್ನೂ ಪಡೆದಿದ್ದರು. ಆದರೆ ಅವಕಾಶ ತಪ್ಪಿದಾಗ ಕೋಚ್‌ ಆಗಿ, ರಣಜಿಯಲ್ಲಿ ಅಂಪಾಯರ್‌ ಆಗಿ ಕ್ರಿಕೆಟ್‌ ಸೇವೆ ಮುಂದುವರಿಸಿದ್ದರು. ತನಗೆ ತಲುಪಲಾಗದ ಗುರಿಯೆಡೆಗೆ ಮಗನನ್ನು ಸಜ್ಜುಗೊಳಿಸಿದರು. ಮಗನನ್ನು ಮುಂಬಯಿ ರಣಜಿ ತಂಡಕ್ಕೆ ಸೇರ್ಪಡೆಗೊಳಿಸುವ ಮೂಲಕ ತಮ್ಮ ಕನಸನ್ನು ನನಸಾಗಿಸಿಕೊಂಡಿದ್ದಾರೆ.

ಮೊಮ್ಮಗನ ಪರಾಕ್ರಮಕ್ಕೆ ಹೆಮ್ಮೆ
ಮೊಮ್ಮಗನ ಕ್ರಿಕೆಟ್‌ ಸಾಧನೆಯನ್ನು ಕಂಡು ಖುಷಿಯಾಗುತ್ತಿದೆ. ನಮಗೆ ಮೊಮ್ಮಗನ ಸಾಧನೆಯ ಬಗ್ಗೆ ಮಾಹಿತಿ ಸಿಕ್ಕಿದ್ದು, ಮುಂದೆ ಆತ ಐಪಿಎಲ್‌ ಮತ್ತು ಭಾರತ ಕ್ರಿಕೆಟ್‌ ತಂಡಕ್ಕೂ ಸೇರ್ಪಡೆಗೊಂಡು ದೊಡ್ಡ ಸಾಧನೆ ಮಾಡುವಂತಾಗಲಿ ಎಂದು ಪಾಂಗಾಳ ತುಳ್ಳಿಮಾರ್‌ ಹೌಸ್‌ನಲ್ಲಿ ವಾಸವಿರುವ ಕುಟುಂಬದ ದೈವದ ಮುಕ್ಕಾಲ್ದಿ ಕೆ.ಕೆ. ಪೂಜಾರಿ ಅವರ ಆಶಯವಾಗಿದೆ.

ಮಗನ ಸಾಧನೆಗೆ ಖುಷಿ
ಕಳೆದ 3 ವರ್ಷಗಳಿಂದ ರಣಜಿ ತಂಡದಲ್ಲಿರುವ ತನುಷ್‌ ನಿರಂತರ ಸಾಧನೆ ಮಾಡುತ್ತಿದ್ದಾನೆ. 4 ತಿಂಗಳ ಹಿಂದೆ ದಕ್ಷಿಣ ವಲಯ ವಾಣಿಜ್ಯ ತೆರಿಗೆ ವಿಭಾಗಕ್ಕೆ ಆಯ್ಕೆಯಾಗಿದ್ದ ತನುಷ್‌ ಗೋವಾಕ್ಕೆ ಪೋಸ್ಟಿಂಗ್‌ ಪಡೆದಿದ್ದು, ಈಗ ರಣಜಿ ಪಂದ್ಯದಲ್ಲಿ ಪ್ರಥಮ ಶತಕ ಬಾರಿಸಿದ್ದಾನೆ. ಈ ಸಾಧನೆಯ ಹಿಂದೆ ಮಗನ ಕಠಿಮ ಪರಿಶ್ರಮ, ಪ್ರಯತ್ನ ಮತ್ತು ಹೋರಾಟದ ಮನೋಭಾವ ಮುಖ್ಯ ಪಾತ್ರ ನಿರ್ವಹಿಸಿದೆ ಎನ್ನುತ್ತಾರೆ ತಂದೆ-ತಾಯಿ.

·ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

28

T20: ಬಾಂಗ್ಲಾ ವಿರುದ್ಧ 7 ವಿಕೆಟ್‌ ಜಯ: ಭಾರತದ ವನಿತೆಯರ ಸರಣಿ ವಿಕ್ರಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.